<p><strong>ಭದ್ರಾವತಿ:</strong> ಇಲ್ಲಿನ ಎಚ್.ಕೆ. ಜಂಕ್ಷನ್ ಬಿಳಿಕಲ್ ಮೈನ್ಸ್ ಜಾಗದಲ್ಲಿನ ಸಂಗಮೇಶ್ವರ ಬಡಾವಣೆ ಜಾಗಕ್ಕೆ ಯಾವುದೇ ಕಾರಣಕ್ಕೂ ಹಕ್ಕುಪತ್ರ ವಿತರಣೆ ಮಾಡಬಾರದು ಎಂದು ಆಗ್ರಹಿಸಿ ಸೋಮವಾರ ಬಿಜೆಪಿಯಿಂದ ಧರಣಿ ನಡೆಸಲಾಯಿತು.</p>.<p>ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದ ಬಿಜೆಪಿ ಮುಖಂಡರು, ‘ಈ ಜಾಗದ ಕುರಿತಾಗಿ ಯಾವುದೇ ಸ್ಪಷ್ಟ ಆದೇಶ ಇಲ್ಲದಿದ್ದರೂ ವಿನಾಕಾರಣ ನಾಮಫಲಕ ಹಾಕಿ ಹಕ್ಕುಪತ್ರ ಕೊಡಿಸುವ ಹುನ್ನಾರ ನಡೆದಿದೆ’ ಎಂದು ದೂರಿದರು.</p>.<p>‘ಈ ಜಾಗದ ಸಂಬಂಧ ಅರಣ್ಯ ಮತ್ತು ಮೈನ್ಸ್ ಇಲಾಖೆ ನಡುವೆ ವಿವಾದ ಇದ್ದು, ಅದು ಬಗೆಹರಿಯುವ ಮುನ್ನವೇ ಅನಧಿಕೃತವಾಗಿ ಬೇರೆ ಕಡೆಯಿಂದ ಬಂದಿರುವ ಜನರನ್ನು ಅಲ್ಲಿ ನೆಲೆಸುವಂತೆ ಮಾಡಿ ಹಕ್ಕುಪತ್ರ ನೀಡುವ ಪ್ರಯತ್ನ ನಡೆದಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ’ ಎಂದು ಹೇಳಿದರು.</p>.<p>ಕೂಡಲೇ ಜಾಗದ ಸಂಬಂಧ ತಾಲ್ಲೂಕು ಆಡಳಿತ ತೆಗೆದುಕೊಂಡಿರುವ ಕ್ರಮಗಳು ಕಾನೂನಾತ್ಮಕವಾಗಿ ಇರಬೇಕು. ನಾಮ ಫಲಕದ ಕುರಿತಾಗಿ ಸ್ಪಷ್ಟ ನಿಲುವು ಪ್ರಕಟಿಸಬೇಕು. ಇಲ್ಲವಾದಲ್ಲಿ ಪಕ್ಷದ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಭಟನೆಯಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ಎಸ್. ಪ್ರಭಾಕರ, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಹನುಮಂತನಾಯ್ಕ, ನಗರಸಭಾ ಸದಸ್ಯರಾದ ಅನುಪಮ, ಅನ್ನಪೂರ್ಣ, ಕರೀಗೌಡ, ವಿ.ಕದಿರೇಶ್, ರವಿಕುಮಾರ್, ಸೂಡಾ ಸದಸ್ಯೆ ಹೇಮಾವತಿ, ಮುಖಂಡರಾದ ಮಂಗೋಟೆ ರುದ್ರೇಶ್, ಜಿ.ಧರ್ಮಪ್ರಸಾದ್, ಗಣೇಶರಾವ್, ಚಂದ್ರು ಇದ್ದರು.</p>.<p class="Subhead">ಇಂದು ಕಾಂಗ್ರೆಸ್ ಪ್ರತಿಭಟನೆ: ಬಿಳಿಕಲ್ ಮೈನ್ಸ್ ಜಾಗದಲ್ಲಿ ಹಲವು ವರ್ಷದಿಂದ ವಾಸವಿರುವ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ತಾಲ್ಲೂಕು ಆಡಳಿತ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಕಾಂಗ್ರೆಸ್ನಿಂದ ಮನವಿ ಸಲ್ಲಿಸಲಾಗುವುದು ಎಂದು ಜಂಕ್ಷನ್ ಭಾಗದ ಮುಖಂಡ ವಿರೂಪಾಕ್ಷಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದ್ರಾವತಿ:</strong> ಇಲ್ಲಿನ ಎಚ್.ಕೆ. ಜಂಕ್ಷನ್ ಬಿಳಿಕಲ್ ಮೈನ್ಸ್ ಜಾಗದಲ್ಲಿನ ಸಂಗಮೇಶ್ವರ ಬಡಾವಣೆ ಜಾಗಕ್ಕೆ ಯಾವುದೇ ಕಾರಣಕ್ಕೂ ಹಕ್ಕುಪತ್ರ ವಿತರಣೆ ಮಾಡಬಾರದು ಎಂದು ಆಗ್ರಹಿಸಿ ಸೋಮವಾರ ಬಿಜೆಪಿಯಿಂದ ಧರಣಿ ನಡೆಸಲಾಯಿತು.</p>.<p>ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದ ಬಿಜೆಪಿ ಮುಖಂಡರು, ‘ಈ ಜಾಗದ ಕುರಿತಾಗಿ ಯಾವುದೇ ಸ್ಪಷ್ಟ ಆದೇಶ ಇಲ್ಲದಿದ್ದರೂ ವಿನಾಕಾರಣ ನಾಮಫಲಕ ಹಾಕಿ ಹಕ್ಕುಪತ್ರ ಕೊಡಿಸುವ ಹುನ್ನಾರ ನಡೆದಿದೆ’ ಎಂದು ದೂರಿದರು.</p>.<p>‘ಈ ಜಾಗದ ಸಂಬಂಧ ಅರಣ್ಯ ಮತ್ತು ಮೈನ್ಸ್ ಇಲಾಖೆ ನಡುವೆ ವಿವಾದ ಇದ್ದು, ಅದು ಬಗೆಹರಿಯುವ ಮುನ್ನವೇ ಅನಧಿಕೃತವಾಗಿ ಬೇರೆ ಕಡೆಯಿಂದ ಬಂದಿರುವ ಜನರನ್ನು ಅಲ್ಲಿ ನೆಲೆಸುವಂತೆ ಮಾಡಿ ಹಕ್ಕುಪತ್ರ ನೀಡುವ ಪ್ರಯತ್ನ ನಡೆದಿದೆ. ಇದನ್ನು ಬಿಜೆಪಿ ಖಂಡಿಸುತ್ತದೆ’ ಎಂದು ಹೇಳಿದರು.</p>.<p>ಕೂಡಲೇ ಜಾಗದ ಸಂಬಂಧ ತಾಲ್ಲೂಕು ಆಡಳಿತ ತೆಗೆದುಕೊಂಡಿರುವ ಕ್ರಮಗಳು ಕಾನೂನಾತ್ಮಕವಾಗಿ ಇರಬೇಕು. ನಾಮ ಫಲಕದ ಕುರಿತಾಗಿ ಸ್ಪಷ್ಟ ನಿಲುವು ಪ್ರಕಟಿಸಬೇಕು. ಇಲ್ಲವಾದಲ್ಲಿ ಪಕ್ಷದ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಪ್ರತಿಭಟನೆಯಲ್ಲಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ಎಸ್. ಪ್ರಭಾಕರ, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಹನುಮಂತನಾಯ್ಕ, ನಗರಸಭಾ ಸದಸ್ಯರಾದ ಅನುಪಮ, ಅನ್ನಪೂರ್ಣ, ಕರೀಗೌಡ, ವಿ.ಕದಿರೇಶ್, ರವಿಕುಮಾರ್, ಸೂಡಾ ಸದಸ್ಯೆ ಹೇಮಾವತಿ, ಮುಖಂಡರಾದ ಮಂಗೋಟೆ ರುದ್ರೇಶ್, ಜಿ.ಧರ್ಮಪ್ರಸಾದ್, ಗಣೇಶರಾವ್, ಚಂದ್ರು ಇದ್ದರು.</p>.<p class="Subhead">ಇಂದು ಕಾಂಗ್ರೆಸ್ ಪ್ರತಿಭಟನೆ: ಬಿಳಿಕಲ್ ಮೈನ್ಸ್ ಜಾಗದಲ್ಲಿ ಹಲವು ವರ್ಷದಿಂದ ವಾಸವಿರುವ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ತಾಲ್ಲೂಕು ಆಡಳಿತ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಕಾಂಗ್ರೆಸ್ನಿಂದ ಮನವಿ ಸಲ್ಲಿಸಲಾಗುವುದು ಎಂದು ಜಂಕ್ಷನ್ ಭಾಗದ ಮುಖಂಡ ವಿರೂಪಾಕ್ಷಪ್ಪ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>