<p><strong>ಸಾಗರ</strong>: ಇಲ್ಲಿನ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶುಕ್ರವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಫೆಬ್ರುವರಿ ಮೊದಲ ವಾರದಲ್ಲಿ ಮಾರಿಕಾಂಬಾ ದೇವಿ ಜಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೆಲಿ ಟೂರಿಸಂ ಹೆಸರಿನಲ್ಲಿ ಕೆಲವರು ಜಾತ್ರೆಗೆ ಬರುವವರಿಗೆ ಹೆಲಿಕಾಪ್ಟರ್ನಲ್ಲಿ ನಗರ ಸಂಚಾರ ಮಾಡಿಸುವ ಯೋಜನೆ ಹಮ್ಮಿಕೊಂಡಿದ್ದಾರೆ. ಇದಕ್ಕಾಗಿ ಗಾಂಧಿ ನಗರ ಬಡಾವಣೆಯ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲು ಅನುಮತಿ ಕೇಳಿದ್ದಾರೆ ಎಂಬ ಮಾಹಿತಿ ಇದೆ. ಆ ಭಾಗದ ಪರಿಸರವನ್ನು ಕಾಪಾಡುವ ದೃಷ್ಟಿಯಿಂದ ಅಲ್ಲಿ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಕೋರಿದ್ದಾರೆ.</p>.<p>ಸಂಗೊಳ್ಳಿ ರಾಯಣ್ಣ ಮೈದಾನದ ಸುತ್ತಲೂ ವಾಯುವಿಹಾರಕ್ಕೆ ವಾಕಿಂಗ್ ಟ್ರ್ಯಾಕ್ ನಿರ್ಮಿಸಲಾಗಿದೆ. ಸುತ್ತಲೂ ಮನೆಗಳು, ಶಿಕ್ಷಣ ಸಂಸ್ಥೆಗಳಿವೆ. ಇಲ್ಲಿ ಹೆಲಿಕಾಪ್ಟರ್ ಇಳಿಸಲು ಅವಕಾಶ ನೀಡಿದರೆ ವಿಪರೀತ ದೂಳು ಉಂಟಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>‘ವರದಹಳ್ಳಿ ರಸ್ತೆಯಲ್ಲಿ ಇರುವ ಹೆಲಿಪ್ಯಾಡ್ನಲ್ಲೇ ಹೆಲಿ ಟೂರಿಸಂಗೆ ಅವಕಾಶ ನೀಡುವುದು ಸೂಕ್ತ’ ಎಂದು ಮನವಿಯಲ್ಲಿ ಹೇಳಲಾಗಿದೆ.</p>.<p>ಪ್ರಮುಖರಾದ ಜೇಡಿಕುಣಿ ಮಂಜುನಾಥ್, ಎಸ್.ವಿ.ಕೃಷ್ಣಮೂರ್ತಿ, ಮೋಹನ್ ಪ್ರಕಾಶ್, ನಂದ ಕಿಶೋರ್, ಎಸ್.ವಿ.ಹಿತಕರ್ ಜೈನ್, ಮ.ಸ.ನಂಜುಂಡಸ್ವಾಮಿ, ವಿಶ್ವೇಶ್ವರಯ್ಯ ಕೋಳಿವಾಡ, ಸುಂದರ್ ರಾಜ್, ಸುರೇಶ್ ಎಚ್.ಪಿ. ಗಣಪತಿ ಎನ್.ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಇಲ್ಲಿನ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶುಕ್ರವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಫೆಬ್ರುವರಿ ಮೊದಲ ವಾರದಲ್ಲಿ ಮಾರಿಕಾಂಬಾ ದೇವಿ ಜಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹೆಲಿ ಟೂರಿಸಂ ಹೆಸರಿನಲ್ಲಿ ಕೆಲವರು ಜಾತ್ರೆಗೆ ಬರುವವರಿಗೆ ಹೆಲಿಕಾಪ್ಟರ್ನಲ್ಲಿ ನಗರ ಸಂಚಾರ ಮಾಡಿಸುವ ಯೋಜನೆ ಹಮ್ಮಿಕೊಂಡಿದ್ದಾರೆ. ಇದಕ್ಕಾಗಿ ಗಾಂಧಿ ನಗರ ಬಡಾವಣೆಯ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲು ಅನುಮತಿ ಕೇಳಿದ್ದಾರೆ ಎಂಬ ಮಾಹಿತಿ ಇದೆ. ಆ ಭಾಗದ ಪರಿಸರವನ್ನು ಕಾಪಾಡುವ ದೃಷ್ಟಿಯಿಂದ ಅಲ್ಲಿ ಅವಕಾಶ ನೀಡಬಾರದು ಎಂದು ಮನವಿಯಲ್ಲಿ ಕೋರಿದ್ದಾರೆ.</p>.<p>ಸಂಗೊಳ್ಳಿ ರಾಯಣ್ಣ ಮೈದಾನದ ಸುತ್ತಲೂ ವಾಯುವಿಹಾರಕ್ಕೆ ವಾಕಿಂಗ್ ಟ್ರ್ಯಾಕ್ ನಿರ್ಮಿಸಲಾಗಿದೆ. ಸುತ್ತಲೂ ಮನೆಗಳು, ಶಿಕ್ಷಣ ಸಂಸ್ಥೆಗಳಿವೆ. ಇಲ್ಲಿ ಹೆಲಿಕಾಪ್ಟರ್ ಇಳಿಸಲು ಅವಕಾಶ ನೀಡಿದರೆ ವಿಪರೀತ ದೂಳು ಉಂಟಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>‘ವರದಹಳ್ಳಿ ರಸ್ತೆಯಲ್ಲಿ ಇರುವ ಹೆಲಿಪ್ಯಾಡ್ನಲ್ಲೇ ಹೆಲಿ ಟೂರಿಸಂಗೆ ಅವಕಾಶ ನೀಡುವುದು ಸೂಕ್ತ’ ಎಂದು ಮನವಿಯಲ್ಲಿ ಹೇಳಲಾಗಿದೆ.</p>.<p>ಪ್ರಮುಖರಾದ ಜೇಡಿಕುಣಿ ಮಂಜುನಾಥ್, ಎಸ್.ವಿ.ಕೃಷ್ಣಮೂರ್ತಿ, ಮೋಹನ್ ಪ್ರಕಾಶ್, ನಂದ ಕಿಶೋರ್, ಎಸ್.ವಿ.ಹಿತಕರ್ ಜೈನ್, ಮ.ಸ.ನಂಜುಂಡಸ್ವಾಮಿ, ವಿಶ್ವೇಶ್ವರಯ್ಯ ಕೋಳಿವಾಡ, ಸುಂದರ್ ರಾಜ್, ಸುರೇಶ್ ಎಚ್.ಪಿ. ಗಣಪತಿ ಎನ್.ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>