<p><strong>ಸಾಗರ: </strong>ಕೇಂದ್ರ ಹಾಗೂ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾದ ಕಾರ್ಯಕರ್ತರು ಗುರುವಾರ ವೆಂಕಟರಮಣ ದೇವಸ್ಥಾನ ರಸ್ತೆಯ ರೈಲ್ವೆ ಗೇಟ್ ಬಳಿ ಪ್ರತಿಭಟನೆ ನಡೆಸಿದರು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈಲು ತಡೆದು ಚಳವಳಿ ನಡೆಸಲು ಪ್ರತಿಭಟನಕಾರರು ಮುಂದಾಗಿದ್ದರು. ಮೈಸೂರು-ತಾಳಗುಪ್ಪ ರೈಲು ಬರುವ ಸಮಯಕ್ಕೆ ರೈಲ್ವೆ ಹಳಿಯ ಮೇಲೆ ಮಲಗಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.</p>.<p>ನಂತರ ಪ್ರತಿಭಟನಕಾರರು ರೈಲ್ವೆ ಹಳಿ ಪಕ್ಕದಲ್ಲಿ ಪ್ರತಿಭಟನೆ ಮುಂದುವರಿಸಿದರು.</p>.<p>ರೈತ ಸಂಘದ ರಾಜ್ಯ ಮುಖಂಡ ಎನ್.ಕೆ. ಮಂಜುನಾಥ ಗೌಡ, ‘ರೈತರಿಗೆ ಬೇಡವಾಗಿರುವ ಕಾಯ್ದೆಗಳನ್ನು ಜಾರಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಸರ್ಕಾರಗಳನ್ನು ಜನರು ಕಸದ ಬುಟ್ಟಿಗೆ ಎಸೆಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ’ ಎಂದರು.</p>.<p>‘ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳ, ಬಂಡವಾಳಶಾಹಿಗಳ ಗುಲಾಮನಂತೆ ವರ್ತಿಸುತ್ತಿದೆ. ಕಾಯ್ದೆ ತಿದ್ದುಪಡಿ ಮೂಲಕ ಕೃಷಿ ಕ್ಷೇತ್ರವನ್ನು ಕಂಪನಿಗಳಿಗೆ ಮಾರಾಟ ಮಾಡಲು ಸರ್ಕಾರ ಮುಂದಾಗಿದೆ. ಕೃಷಿಗೆ ಮರಣ ಶಾಸನ ಬರೆಯಲು ಸರ್ಕಾರ ಹೊರಟಿದೆ’ ಎಂದು ಆರೋಪಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ರಾಜಪ್ಪ ಮಾಸ್ತರ್, ‘ಕೇಂದ್ರ ಸರ್ಕಾರದ ಜನವಿರೋಧಿ ಕೃಷಿ ಕಾಯ್ದೆ ವಿರುದ್ಧ ಮಾತನಾಡುವವರನ್ನು ದೇಶದ್ರೋಹದ ಆರೋಪದಲ್ಲಿ ಬಂಧಿಸುವ ಕುಕೃತ್ಯಕ್ಕೆ ಮುಂದಾಗಿದೆ. ಯುವತಿ ದಿಶಾ ರವಿ ಅವರನ್ನು ಬಂಧಿಸಿರುವುದೇ ಇದಕ್ಕೆ ಸಾಕ್ಷಿ’ ಎಂದು ದೂರಿದರು.</p>.<p>‘ಮೂರು ತಿಂಗಳುಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರ ಅಹವಾಲುಗಳನ್ನು ಸಮಾಧಾನದಿಂದ ಕೇಳುವ ಬದಲು ಚಳವಳಿ ನಡೆಸುತ್ತಿರುವವರು ರೈತರೇ ಅಲ್ಲ ಎಂಬ ಸುಳ್ಳು ಸುದ್ದಿಯನ್ನು ಸರ್ಕಾರ ಹಬ್ಬಿಸುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದರು.</p>.<p>ರೈತ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ಅರುಣ್ ಕಸವೆ, ಪ್ರಮುಖರಾದ ಗುರುಮೂರ್ತಿ ಕೌತಿ, ಈಶ್ವರಪ್ಪ, ಬಿ.ಪಿ.ವೀರಭದ್ರಪ್ಪ, ಶಿವಣ್ಣ, ಈರನಗೌಡ, ನಾಗರಾಜ್ ಬೆಣೆಗೇರಿ, ಮೇಘರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ಕೇಂದ್ರ ಹಾಗೂ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾದ ಕಾರ್ಯಕರ್ತರು ಗುರುವಾರ ವೆಂಕಟರಮಣ ದೇವಸ್ಥಾನ ರಸ್ತೆಯ ರೈಲ್ವೆ ಗೇಟ್ ಬಳಿ ಪ್ರತಿಭಟನೆ ನಡೆಸಿದರು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ರೈಲು ತಡೆದು ಚಳವಳಿ ನಡೆಸಲು ಪ್ರತಿಭಟನಕಾರರು ಮುಂದಾಗಿದ್ದರು. ಮೈಸೂರು-ತಾಳಗುಪ್ಪ ರೈಲು ಬರುವ ಸಮಯಕ್ಕೆ ರೈಲ್ವೆ ಹಳಿಯ ಮೇಲೆ ಮಲಗಿದ್ದ ಪ್ರತಿಭಟನಕಾರರನ್ನು ಪೊಲೀಸರು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿದರು.</p>.<p>ನಂತರ ಪ್ರತಿಭಟನಕಾರರು ರೈಲ್ವೆ ಹಳಿ ಪಕ್ಕದಲ್ಲಿ ಪ್ರತಿಭಟನೆ ಮುಂದುವರಿಸಿದರು.</p>.<p>ರೈತ ಸಂಘದ ರಾಜ್ಯ ಮುಖಂಡ ಎನ್.ಕೆ. ಮಂಜುನಾಥ ಗೌಡ, ‘ರೈತರಿಗೆ ಬೇಡವಾಗಿರುವ ಕಾಯ್ದೆಗಳನ್ನು ಜಾರಿಗೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಿದೆ. ಇಂತಹ ಸರ್ಕಾರಗಳನ್ನು ಜನರು ಕಸದ ಬುಟ್ಟಿಗೆ ಎಸೆಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ’ ಎಂದರು.</p>.<p>‘ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳ, ಬಂಡವಾಳಶಾಹಿಗಳ ಗುಲಾಮನಂತೆ ವರ್ತಿಸುತ್ತಿದೆ. ಕಾಯ್ದೆ ತಿದ್ದುಪಡಿ ಮೂಲಕ ಕೃಷಿ ಕ್ಷೇತ್ರವನ್ನು ಕಂಪನಿಗಳಿಗೆ ಮಾರಾಟ ಮಾಡಲು ಸರ್ಕಾರ ಮುಂದಾಗಿದೆ. ಕೃಷಿಗೆ ಮರಣ ಶಾಸನ ಬರೆಯಲು ಸರ್ಕಾರ ಹೊರಟಿದೆ’ ಎಂದು ಆರೋಪಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ರಾಜಪ್ಪ ಮಾಸ್ತರ್, ‘ಕೇಂದ್ರ ಸರ್ಕಾರದ ಜನವಿರೋಧಿ ಕೃಷಿ ಕಾಯ್ದೆ ವಿರುದ್ಧ ಮಾತನಾಡುವವರನ್ನು ದೇಶದ್ರೋಹದ ಆರೋಪದಲ್ಲಿ ಬಂಧಿಸುವ ಕುಕೃತ್ಯಕ್ಕೆ ಮುಂದಾಗಿದೆ. ಯುವತಿ ದಿಶಾ ರವಿ ಅವರನ್ನು ಬಂಧಿಸಿರುವುದೇ ಇದಕ್ಕೆ ಸಾಕ್ಷಿ’ ಎಂದು ದೂರಿದರು.</p>.<p>‘ಮೂರು ತಿಂಗಳುಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ರೈತರ ಅಹವಾಲುಗಳನ್ನು ಸಮಾಧಾನದಿಂದ ಕೇಳುವ ಬದಲು ಚಳವಳಿ ನಡೆಸುತ್ತಿರುವವರು ರೈತರೇ ಅಲ್ಲ ಎಂಬ ಸುಳ್ಳು ಸುದ್ದಿಯನ್ನು ಸರ್ಕಾರ ಹಬ್ಬಿಸುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದರು.</p>.<p>ರೈತ ಸಂಘದ ತಾಲ್ಲೂಕು ಶಾಖೆ ಅಧ್ಯಕ್ಷ ಅರುಣ್ ಕಸವೆ, ಪ್ರಮುಖರಾದ ಗುರುಮೂರ್ತಿ ಕೌತಿ, ಈಶ್ವರಪ್ಪ, ಬಿ.ಪಿ.ವೀರಭದ್ರಪ್ಪ, ಶಿವಣ್ಣ, ಈರನಗೌಡ, ನಾಗರಾಜ್ ಬೆಣೆಗೇರಿ, ಮೇಘರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>