<p>ಶಿವಮೊಗ್ಗ: ‘ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಆಯೋಗ ವರದಿಯಲ್ಲಿ ಕೊರಚ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಒಳ ಮೀಸಲಾತಿಯನ್ನು ಪುನರ್ ಪರಿಶೀಲಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬನ್ನೂರು ಸುರೇಶ್ ಒತ್ತಾಯಿಸಿದರು.</p>.<p>‘2011ರ ಜನಗಣತಿಯ ಪ್ರಕಾರ ಕೊರಚ ಸಮುದಾಯದ ಜನಸಂಖ್ಯೆ 1 ಲಕ್ಷಕ್ಕಿಂತ ಕಡಿಮೆ ಇದೆ. ಆದ್ದರಿಂದ, ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಒಂದು ಗುಂಪು ಮಾಡಿ, ಶೇ 2ರಷ್ಟು ಮೀಸಲಾತಿ ಕಲ್ಪಿಸಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಕೊರಚ ಸಮುದಾಯದ ಕುಲಶಾಸ್ತ್ರ ಅಧ್ಯಯನವಾಗಿಲ್ಲ. ಆದರೂ ಸಹ ಸಮಾನಂತರ ಜಾತಿಗಳೆಂದು ನಮ್ಮನ್ನು ಬೇರೊಂದು ಜಾತಿಯೊಂದಿಗೆ ಸೇರಿಸಿರುವುದು ಸಮಾಜಕ್ಕೆ ಮಾಡಿರುವ ದ್ರೋಹ’ ಎಂದರು.</p>.<p>‘ಕೊರಚ ಸಮುದಾಯದಲ್ಲಿ ರಾಜಕೀಯವಾಗಿ ಯಾವುದೇ ಉನ್ನತ ಸ್ಥಾನಮಾನ ದೊರಕಿಲ್ಲ. ಇದೊಂದು ಅಸಂಘಟಿತ ಸಮಾಜವಾಗಿದ್ದು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕವಾಗಿಯೂ ಸಮಾಜ ಹಿಂದುಳಿದಿದೆ’ ಎಂದು ರಾಜ್ಯ ಸಂಘದ ಗೌರವಾಧ್ಯಕ್ಷ ಸಿ. ಜಯಪ್ಪ ಹೇಳಿದರು. </p>.<p>ಕೊರಚ ಮಹಾಸಂಘ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕೆ.ಎನ್. ಪ್ರಭು, ಈಶ್ವರಪ್ಪ ಮೈದೋಳು, ಜಗದೀಶ್, ಪ್ರಸನ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ‘ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಆಯೋಗ ವರದಿಯಲ್ಲಿ ಕೊರಚ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಒಳ ಮೀಸಲಾತಿಯನ್ನು ಪುನರ್ ಪರಿಶೀಲಿಸಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು’ ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬನ್ನೂರು ಸುರೇಶ್ ಒತ್ತಾಯಿಸಿದರು.</p>.<p>‘2011ರ ಜನಗಣತಿಯ ಪ್ರಕಾರ ಕೊರಚ ಸಮುದಾಯದ ಜನಸಂಖ್ಯೆ 1 ಲಕ್ಷಕ್ಕಿಂತ ಕಡಿಮೆ ಇದೆ. ಆದ್ದರಿಂದ, ಅಲೆಮಾರಿ ಪರಿಶಿಷ್ಟ ಜಾತಿಗಳನ್ನು ಒಂದು ಗುಂಪು ಮಾಡಿ, ಶೇ 2ರಷ್ಟು ಮೀಸಲಾತಿ ಕಲ್ಪಿಸಬೇಕು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>‘ಕೊರಚ ಸಮುದಾಯದ ಕುಲಶಾಸ್ತ್ರ ಅಧ್ಯಯನವಾಗಿಲ್ಲ. ಆದರೂ ಸಹ ಸಮಾನಂತರ ಜಾತಿಗಳೆಂದು ನಮ್ಮನ್ನು ಬೇರೊಂದು ಜಾತಿಯೊಂದಿಗೆ ಸೇರಿಸಿರುವುದು ಸಮಾಜಕ್ಕೆ ಮಾಡಿರುವ ದ್ರೋಹ’ ಎಂದರು.</p>.<p>‘ಕೊರಚ ಸಮುದಾಯದಲ್ಲಿ ರಾಜಕೀಯವಾಗಿ ಯಾವುದೇ ಉನ್ನತ ಸ್ಥಾನಮಾನ ದೊರಕಿಲ್ಲ. ಇದೊಂದು ಅಸಂಘಟಿತ ಸಮಾಜವಾಗಿದ್ದು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಧಾರ್ಮಿಕವಾಗಿಯೂ ಸಮಾಜ ಹಿಂದುಳಿದಿದೆ’ ಎಂದು ರಾಜ್ಯ ಸಂಘದ ಗೌರವಾಧ್ಯಕ್ಷ ಸಿ. ಜಯಪ್ಪ ಹೇಳಿದರು. </p>.<p>ಕೊರಚ ಮಹಾಸಂಘ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಕೆ.ಎನ್. ಪ್ರಭು, ಈಶ್ವರಪ್ಪ ಮೈದೋಳು, ಜಗದೀಶ್, ಪ್ರಸನ್ನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>