‘ಈ ಹಿಂದೆ ಮತದಾನ ದಿನಗಳಂದು ಜೋಗ ನಿರ್ವಹಣಾ ಪ್ರಾಧಿಕಾರದಲ್ಲಿ ದಾಖಲಾದ ಪ್ರವಾಸಿಗರ ಸಂಖ್ಯೆಯ ಅಂಕಿ ಅಂಶಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ, ಮಾಧ್ಯಮಗಳು ಪ್ರವಾಸಿಗರ ಆಗಮನದ ವಿಷಯವನ್ನು ಗಮನ ಸೆಳೆದಿರುವ ಕಾರಣ ಈ ನಿರ್ಬಂಧ ಕ್ರಮವನ್ನು ಜಾರಿ ಮಾಡಲಾಗಿದೆ. ಚುನಾವಣೆ ದಿನದಂದು ನಿರ್ಬಂಧ ಹೇರದೇ ಇದ್ದ ಪಕ್ಷದಲ್ಲಿ ಬರುವ ಪ್ರವಾಸಿಗರಿಗಾಗಿ ನಿರ್ವಹಣಾ ಪ್ರಾಧಿಕಾರದ ಸಿಬ್ಬಂದಿ ಕರ್ತವ್ಯಪಾಲನೆ ಮಾಡ ಬೇಕಾಗುತ್ತದೆ. ಇವರಿಗೆ ಪೂರಕವಾಗಿ ಸ್ಥಳೀಯವಾಗಿರುವ ವ್ಯಾಪಾರಸ್ಥರು, ಛಾಯಾಚಿತ್ರಗಾರರು, ಸಣ್ಣ ಪುಟ್ಟ ಬೀದಿ ಬದಿ ವ್ಯಾಪಾರಿಗಳು, ಗೈಡ್ಗಳು, ಆಟೊ ಚಾಲಕರು, ಟ್ಯಾಕ್ಸಿ ಚಾಲಕರು, ಭದ್ರತಾ ಸಿಬ್ಬಂದಿ ಸೇರಿದಂತೆ ಅನೇಕರು ಕೊಂಡಿಯ ರೀತಿಯಲ್ಲಿ ಜೋಡಣೆಯಾಗಿ ಮತದಾನದಿಂದ ದೊಡ್ಡ ಪ್ರಮಾಣದಲ್ಲಿ ಇವರೆಲ್ಲಾ ಹೊರಗುಳಿಯುವ ಸಾಧ್ಯತೆಯಿದೆ. ಹೀಗಾಗಿ ಪ್ರಮುಖವಾಗಿ ಜಲಪಾತ ವೀಕ್ಷಣೆಗೆ ನಿರ್ಬಂಧವನ್ನು ಹೇರಲಾಗಿದೆ’ ಎಂದು ಅವರು ತಿಳಿಸಿದರು.