<p><strong>ಶಿವಮೊಗ್ಗ: </strong>ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆ ಸಹಜ. ಅಧಿಕಾರದ ಆಸೆ ಎಲ್ಲರಿಗೂ ಇರುತ್ತದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದರು.</p>.<p>ಅಧಿಕಾರ ಬೇಡ ಎನ್ನಲು ನಾವೂ ಸನ್ಯಾಸಿಗಳಲ್ಲ. ಶಾಪಗ್ರಸ್ಥರೂ ಅಲ್ಲ. ಅಧಿಕಾರದ ಆಸೆ ಎಲ್ಲರಿಗೂ ಇರುತ್ತದೆ. ಸಿದ್ದರಾಮಯ್ಯ ಅವರೂ ಸಹಜವಾಗಿ ಹೇಳಿದ್ದಾರೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸಮರ್ಥಿಸಿಕೊಂಡರು.</p>.<p>ಚುನಾವಣೆ ಮುಗಿದ ಮೇಲೆ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಮುಖಂಡರು ಬೊಗಳೆ ಬಿಡುತ್ತಿದ್ದಾರೆ. ಈ ಸರ್ಕಾರ ಐದು ವರ್ಷ ಭದ್ರವಾಗಿರುತ್ತದೆ. ಯಾರ ಕಾಟವೂ ಇಲ್ಲ, ಮಾಟವೂ ಇಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, .ಟಿ. ಶ್ರೀಕಂಠೇಗೌಡ ಮಾತನಾಡಿ, ರಾಷ್ಟ್ರರಾಜಕಾರಣದಲ್ಲಿ ದೇವೇಗೌಡರದ್ದೇ ನಿರ್ಣಾಯಕ ಪಾತ್ರ. ಹಾಗಾಗಿ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು.</p>.<p>ಈ ಬಾರಿಯ ಲೋಕಸಭಾ ಚುನಾವಣೆ ಪ್ರಮುಖವಾಗಿದೆ. ಮೋದಿ ಸರ್ಕಾರಕ್ಕೆ ಕೊನೆ ಹಾಡಬೇಕಾಗಿದೆ. ಬದಲಾವಣೆಯ ಗಾಳಿ ಬೀಸುತ್ತಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡರ ಪಾತ್ರ ಪ್ರಮುಖವಾಗಿದೆ. ಅವರಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಬಾಲಕೃಷ್ಣ, ಕೆ.ಟಿ.ಶ್ರೀಕಂಠೇಗೌಡ, ಮುಖಂಡರಾದ ರಾಮಕೃಷ್ಣ, ಫಾಲಾಕ್ಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ನಾನೇ ಮುಂದಿನ ಮುಖ್ಯಮಂತ್ರಿ ಎಂಬ ಸಿದ್ದರಾಮಯ್ಯ ಹೇಳಿಕೆ ಸಹಜ. ಅಧಿಕಾರದ ಆಸೆ ಎಲ್ಲರಿಗೂ ಇರುತ್ತದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದರು.</p>.<p>ಅಧಿಕಾರ ಬೇಡ ಎನ್ನಲು ನಾವೂ ಸನ್ಯಾಸಿಗಳಲ್ಲ. ಶಾಪಗ್ರಸ್ಥರೂ ಅಲ್ಲ. ಅಧಿಕಾರದ ಆಸೆ ಎಲ್ಲರಿಗೂ ಇರುತ್ತದೆ. ಸಿದ್ದರಾಮಯ್ಯ ಅವರೂ ಸಹಜವಾಗಿ ಹೇಳಿದ್ದಾರೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಸಮರ್ಥಿಸಿಕೊಂಡರು.</p>.<p>ಚುನಾವಣೆ ಮುಗಿದ ಮೇಲೆ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ಮುಖಂಡರು ಬೊಗಳೆ ಬಿಡುತ್ತಿದ್ದಾರೆ. ಈ ಸರ್ಕಾರ ಐದು ವರ್ಷ ಭದ್ರವಾಗಿರುತ್ತದೆ. ಯಾರ ಕಾಟವೂ ಇಲ್ಲ, ಮಾಟವೂ ಇಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು.</p>.<p>ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, .ಟಿ. ಶ್ರೀಕಂಠೇಗೌಡ ಮಾತನಾಡಿ, ರಾಷ್ಟ್ರರಾಜಕಾರಣದಲ್ಲಿ ದೇವೇಗೌಡರದ್ದೇ ನಿರ್ಣಾಯಕ ಪಾತ್ರ. ಹಾಗಾಗಿ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸಬೇಕು ಎಂದು ಕೋರಿದರು.</p>.<p>ಈ ಬಾರಿಯ ಲೋಕಸಭಾ ಚುನಾವಣೆ ಪ್ರಮುಖವಾಗಿದೆ. ಮೋದಿ ಸರ್ಕಾರಕ್ಕೆ ಕೊನೆ ಹಾಡಬೇಕಾಗಿದೆ. ಬದಲಾವಣೆಯ ಗಾಳಿ ಬೀಸುತ್ತಿದೆ. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ. ದೇವೇಗೌಡರ ಪಾತ್ರ ಪ್ರಮುಖವಾಗಿದೆ. ಅವರಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಎಂದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಬಾಲಕೃಷ್ಣ, ಕೆ.ಟಿ.ಶ್ರೀಕಂಠೇಗೌಡ, ಮುಖಂಡರಾದ ರಾಮಕೃಷ್ಣ, ಫಾಲಾಕ್ಷಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>