ಕಾರ್ಗಲ್: ಸಮೀಪದ ಭಾರಂಗಿ ಹೋಬಳಿಯ ನಾಡ ಕಚೇರಿಯ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ.
ಕಾನೂರು ನಿವಾಸಿ ಪ್ರೀತಮ್ಕುಮಾರ್ ಅವರ ಕುಟುಂಬದ ಆಸ್ತಿ ಹಿಸ್ಸೆ ಸಂಬಂಧವಾಗಿ ಖಾತೆ ಮಾಡಿಕೊಡಲು ಕೃಷ್ಣಮೂರ್ತಿ ₹ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ಕಚೇರಿಯಲ್ಲಿ ₹ 8 ಸಾವಿರ ಪಡೆಯುತ್ತಿದ್ದ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಡಿವೈಎಸ್ಪಿ ಲೋಕೇಶ್ ತಿಳಿಸಿದ್ದಾರೆ.