<p>ರಿಪ್ಪನ್ಪೇಟೆ: ಭಾರತೀಯ ಸೇನೆಯಲ್ಲಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಹುಟ್ಟೂರಿಗೆ ಮರಳಿದ ಯೋಧ ಎ. ಕುಮಾರ್ ಅವರನ್ನು ಸ್ಥಳೀಯರು ಅದ್ದೂರಿಯಾಗಿ ಸ್ವಾಗತಿಸಿದರು.</p>.<p>ದೇಶದ ಗಡಿ ಪ್ರದೇಶಗಳಲ್ಲಿ ಎ. ಕುಮಾರ್ ಅವರೊಂದಿಗೆ ಅವರ ಪತ್ನಿ ಪದ್ಮಾ ಕುಮಾರ್ ಕೂಡ ಈ ಹಿಂದೆ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಈ ದಂಪತಿಯ ಅಪೂರ್ವ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆಯನ್ನು ಸ್ಮರಿಸಿ ನಾಗರಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.</p>.<p>ನಿವೃತ್ತ ಯೋಧ ದಂಪತಿಯನ್ನು ಶಿವಮೊಗ್ಗ ರಸ್ತೆಯ ಸಿದ್ದಪ್ಪನ ಗುಡಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ ಕರೆತರಲಾಯಿತು. ಅಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ಕಾರ್ಯಕ್ರಮದಲ್ಲಿ ಊರಿನ ನಾಗರಿಕರು, ವಿವಿಧ ಸಂಘ– ಸಂಸ್ಥೆಗಳ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ನಿವೃತ್ತ ಸೈನಿಕ ಸಂಘದ ಪದಾಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-42-86464596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಿಪ್ಪನ್ಪೇಟೆ: ಭಾರತೀಯ ಸೇನೆಯಲ್ಲಿ 36 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದು ಹುಟ್ಟೂರಿಗೆ ಮರಳಿದ ಯೋಧ ಎ. ಕುಮಾರ್ ಅವರನ್ನು ಸ್ಥಳೀಯರು ಅದ್ದೂರಿಯಾಗಿ ಸ್ವಾಗತಿಸಿದರು.</p>.<p>ದೇಶದ ಗಡಿ ಪ್ರದೇಶಗಳಲ್ಲಿ ಎ. ಕುಮಾರ್ ಅವರೊಂದಿಗೆ ಅವರ ಪತ್ನಿ ಪದ್ಮಾ ಕುಮಾರ್ ಕೂಡ ಈ ಹಿಂದೆ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಈ ದಂಪತಿಯ ಅಪೂರ್ವ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆಯನ್ನು ಸ್ಮರಿಸಿ ನಾಗರಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು.</p>.<p>ನಿವೃತ್ತ ಯೋಧ ದಂಪತಿಯನ್ನು ಶಿವಮೊಗ್ಗ ರಸ್ತೆಯ ಸಿದ್ದಪ್ಪನ ಗುಡಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಸಿದ್ದಿವಿನಾಯಕ ದೇವಸ್ಥಾನಕ್ಕೆ ಕರೆತರಲಾಯಿತು. ಅಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.</p>.<p>ಕಾರ್ಯಕ್ರಮದಲ್ಲಿ ಊರಿನ ನಾಗರಿಕರು, ವಿವಿಧ ಸಂಘ– ಸಂಸ್ಥೆಗಳ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ನಿವೃತ್ತ ಸೈನಿಕ ಸಂಘದ ಪದಾಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-42-86464596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>