ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರೆ ಹೆಚ್ಚಾಗಿರುವ ಇಲ್ಲಿ ತಮ್ಮ ನಿತ್ಯದ ಕಾಯಕ ಬಿಟ್ಟು ನ್ಯಾಯಬೆಲೆ ಅಂಗಡಿ ಮುಂದೆ ಬೆಳಿಗ್ಗೆ 6ರಿಂದಲೇ ಸರದಿ ಸಾಲಿನಲ್ಲಿ ನಿಂತು ಹೊತ್ತು ಮುಳುಗುವವರೆಗೂ ಅನ್ನ ನೀರಿಲ್ಲದೆ ಹೆಂಗಸರು, ಮಕ್ಕಳು, ಸೇರಿ ಪಡಿತರ ಅಂಗಡಿ ಬಾಗಿಲು ಕಾಯುತ್ತಿದ್ದಾರೆ. ಹೆಬ್ಬೆಟ್ಟು ನೀಡಲು ಬಂದರೆ ನೆಟ್ವರ್ಕ್ ಸಮಸ್ಯೆ ಎಂದು ಹೇಳುತ್ತಾರೆ. ಸರ್ಕಾರದ ಈ ಅವೈಜ್ಞಾನಿಕ ನೀತಿ ಕೈಬಿಡಬೇಕು ಎನ್ನುತ್ತಾರೆ ಸ್ಥಳಿಯ ನಿವಾಸಿ ಸಿ. ಮಂಜುನಾಥ್ ಭಟ್.