<p><strong>ರಿಪ್ಪನ್ಪೇಟೆ:</strong> ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಸೆಪ್ಟೆಂಬರ್ 22 ರಿಂದ ಶರನ್ನವರಾತ್ರಿ ಮತ್ತು ವಿಜಯದಶಮಿ ಪರ್ವ ಆಗಮೋಕ್ತ ವಿಧಿ–ವಿಧಾನಗಳು ವಿಜೃಂಭಣೆಯಿಂದ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<p>ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರತಿನಿತ್ಯ ವಿಶೇಷ ಪೂಜೆ, ಜಿನಸ್ತುತಿ, ಭಜನೆ, ಉತ್ಸವ, ಆರಾಧನೆಗಳು ನೆರವೇರಲಿವೆ.</p>.<p>ಸೆ. 22ರಂದು ಘಟಸ್ಥಾಪನೆ, ಸೆ. 29ರಂದು ಸರಸ್ವತಿ ಪೂಜೆ, ಸೆ. 30ರಂದು ಜೀವದಯಾಷ್ಟಮಿ, ಅ. 01 ರಂದು ಆಯುಧ ಪೂಜೆ ಮತ್ತು ಮಹಾನವಮಿ, ಅ. 02 ರಂದು ವಿಜಯದಶಮಿ ಉತ್ಸವ, ಮಹಾದೇವಿ ಪಲ್ಲಕ್ಕಿ ಉತ್ಸವ ಜರುಗಲಿದೆ.</p>.<p>ದೇವೇಂದ್ರ ಕೀರ್ತಿ ಭಟ್ಟಾರಕರ ಪರಂಪರಾನುಗತ ಸಿಂಹಾಸನಾರೋಹಣ, ಪಾದಪೂಜೆ, ವಿಜಯದಶಮಿ ಪ್ರಯುಕ್ತ ಧಾರ್ಮಿಕ ಪ್ರವಚನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಾಗೂ ಸಾಯಂಕಾಲ ಬನ್ನಿ ಮಂಟಪದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಶ್ರೀಗಳು ಶ್ರೀಮಂತ್ರಾಕ್ಷತೆ ನೀಡಲಿದ್ದಾರೆ.</p>.<p>ಶಮೀ ಪತ್ರದೊಂದಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತವೃಂದಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಉಪಹಾರ, ಅನ್ನಪ್ರಸಾದ ಹಾಗೂ ವಸತಿ ವ್ಯವಸ್ಥೆಗೆ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ.</p>.<p>ಇದೇ ಸಂದರ್ಭದಲ್ಲಿ ಹೊಂಬುಜದ ಅಧೀನ ಕ್ಷೇತ್ರಗಳಾದ ವಾರಂಗ, ಹಟ್ಟಿಯಂಗಡಿ ಜಿನಮಂದಿರಗಳಲ್ಲಿ ಸಂಪ್ರದಾಯದಂತೆ ವಿಶೇಷ ಪೂಜೆಗಳು, ಆರಾಧನೆ, ಉತ್ಸವಗಳು ನೆರವೇರಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಸೆಪ್ಟೆಂಬರ್ 22 ರಿಂದ ಶರನ್ನವರಾತ್ರಿ ಮತ್ತು ವಿಜಯದಶಮಿ ಪರ್ವ ಆಗಮೋಕ್ತ ವಿಧಿ–ವಿಧಾನಗಳು ವಿಜೃಂಭಣೆಯಿಂದ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<p>ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಪ್ರತಿನಿತ್ಯ ವಿಶೇಷ ಪೂಜೆ, ಜಿನಸ್ತುತಿ, ಭಜನೆ, ಉತ್ಸವ, ಆರಾಧನೆಗಳು ನೆರವೇರಲಿವೆ.</p>.<p>ಸೆ. 22ರಂದು ಘಟಸ್ಥಾಪನೆ, ಸೆ. 29ರಂದು ಸರಸ್ವತಿ ಪೂಜೆ, ಸೆ. 30ರಂದು ಜೀವದಯಾಷ್ಟಮಿ, ಅ. 01 ರಂದು ಆಯುಧ ಪೂಜೆ ಮತ್ತು ಮಹಾನವಮಿ, ಅ. 02 ರಂದು ವಿಜಯದಶಮಿ ಉತ್ಸವ, ಮಹಾದೇವಿ ಪಲ್ಲಕ್ಕಿ ಉತ್ಸವ ಜರುಗಲಿದೆ.</p>.<p>ದೇವೇಂದ್ರ ಕೀರ್ತಿ ಭಟ್ಟಾರಕರ ಪರಂಪರಾನುಗತ ಸಿಂಹಾಸನಾರೋಹಣ, ಪಾದಪೂಜೆ, ವಿಜಯದಶಮಿ ಪ್ರಯುಕ್ತ ಧಾರ್ಮಿಕ ಪ್ರವಚನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹಾಗೂ ಸಾಯಂಕಾಲ ಬನ್ನಿ ಮಂಟಪದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಶ್ರೀಗಳು ಶ್ರೀಮಂತ್ರಾಕ್ಷತೆ ನೀಡಲಿದ್ದಾರೆ.</p>.<p>ಶಮೀ ಪತ್ರದೊಂದಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತವೃಂದಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಉಪಹಾರ, ಅನ್ನಪ್ರಸಾದ ಹಾಗೂ ವಸತಿ ವ್ಯವಸ್ಥೆಗೆ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ.</p>.<p>ಇದೇ ಸಂದರ್ಭದಲ್ಲಿ ಹೊಂಬುಜದ ಅಧೀನ ಕ್ಷೇತ್ರಗಳಾದ ವಾರಂಗ, ಹಟ್ಟಿಯಂಗಡಿ ಜಿನಮಂದಿರಗಳಲ್ಲಿ ಸಂಪ್ರದಾಯದಂತೆ ವಿಶೇಷ ಪೂಜೆಗಳು, ಆರಾಧನೆ, ಉತ್ಸವಗಳು ನೆರವೇರಲಿವೆ ಎಂದು ಮಠದ ಪ್ರಕಟಣೆ ತಿಳಿಸಿದೆ. <br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>