<p><strong>ರಿಪ್ಪನ್ಪೇಟೆ:</strong> ಗ್ರಾಮೀಣ ಭಾಗದಲ್ಲಿ ದಿನದ 24 ಗಂಟೆಗಳ ಪೈಕಿ ಕೇವಲ ಎರಡು ಗಂಟೆ ನೆಟ್ವರ್ಕ್ ಸಿಗುವುದೂ ಕಷ್ಟ ಸಾಧ್ಯವಾಗಿದೆ. ಮನೆಯಿಂದ ಕೆಲಸ ನಿರ್ವಹಿಸುತ್ತಿರುವ ನೌಕರರು ಹಾಗೂ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ದುಃಸ್ಥಿತಿಗೆ ಇಳಿದಿದ್ದರೆ, ಖಾಸಗಿ ಕಂಪನಿಗಳು ಪೈಪೋಟಿಗೆ ಇಳಿದು ಸೇವೆಯ ಉತ್ಕೃಷ್ಟತೆಯನ್ನು ಹೆಚ್ಚಿಸಿಕೊಂಡು ದುಪ್ಪಟ್ಟು ದರ ವಿಧಿಸಿ, ಸಾರ್ವಜನಿಕರ ಸುಲಿಗಿಗೆ ಮುಂದಾಗಿವೆ’ ಎಂದು ಉದ್ಯಮಿ ರಾಜಾರಾಮ್ ಬಾಳಿಗಾ ಆರೋಪಿಸಿದ್ದಾರೆ. </p>.<p>‘15 ದಿನಗಳಲ್ಲಿ ಜನಪ್ರತಿನಿಧಿಗಳು ಬಿಎಸ್ಎನ್ಎಲ್ ಸಮಸ್ಯೆಯ ಕುರಿತು ಅವಲೋಕನ ನಡೆಸಿ, ಗ್ರಾಹಕರ ಹಿತ ಕಾಯುವ ನಿಟ್ಟಿನಲ್ಲಿ ಗಮನ ಹರಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಮುಖಂಡ ಶ್ರೀನಿವಾಸ್ ಆಚಾರ್ ಆಗ್ರಹಿಸಿದ್ದಾರೆ.</p>.<p>ಸಮಸ್ಯೆ ಪರಿಹರಿಸಲು ಮುಂದಾಗದಿದ್ದರೆ ರಿಪ್ಪನ್ಪೇಟೆ ಬಿಎಸ್ಎನ್ಎಲ್ ಕಚೇರಿಯಿಂದಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾಮಾಜಿಕ ಸಂಘಟನೆಗಳ ಸಹಯೋಗದಲ್ಲಿ ಕಾಲ್ನಡಿಗೆ ಮೂಲಕ ಬಿಎಸ್ಎನ್ಎಲ್ ಅಣಕು ಶವಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಗ್ರಾಮೀಣ ಭಾಗದಲ್ಲಿ ದಿನದ 24 ಗಂಟೆಗಳ ಪೈಕಿ ಕೇವಲ ಎರಡು ಗಂಟೆ ನೆಟ್ವರ್ಕ್ ಸಿಗುವುದೂ ಕಷ್ಟ ಸಾಧ್ಯವಾಗಿದೆ. ಮನೆಯಿಂದ ಕೆಲಸ ನಿರ್ವಹಿಸುತ್ತಿರುವ ನೌಕರರು ಹಾಗೂ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<p>‘ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಸಂಸ್ಥೆ ದುಃಸ್ಥಿತಿಗೆ ಇಳಿದಿದ್ದರೆ, ಖಾಸಗಿ ಕಂಪನಿಗಳು ಪೈಪೋಟಿಗೆ ಇಳಿದು ಸೇವೆಯ ಉತ್ಕೃಷ್ಟತೆಯನ್ನು ಹೆಚ್ಚಿಸಿಕೊಂಡು ದುಪ್ಪಟ್ಟು ದರ ವಿಧಿಸಿ, ಸಾರ್ವಜನಿಕರ ಸುಲಿಗಿಗೆ ಮುಂದಾಗಿವೆ’ ಎಂದು ಉದ್ಯಮಿ ರಾಜಾರಾಮ್ ಬಾಳಿಗಾ ಆರೋಪಿಸಿದ್ದಾರೆ. </p>.<p>‘15 ದಿನಗಳಲ್ಲಿ ಜನಪ್ರತಿನಿಧಿಗಳು ಬಿಎಸ್ಎನ್ಎಲ್ ಸಮಸ್ಯೆಯ ಕುರಿತು ಅವಲೋಕನ ನಡೆಸಿ, ಗ್ರಾಹಕರ ಹಿತ ಕಾಯುವ ನಿಟ್ಟಿನಲ್ಲಿ ಗಮನ ಹರಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಮುಖಂಡ ಶ್ರೀನಿವಾಸ್ ಆಚಾರ್ ಆಗ್ರಹಿಸಿದ್ದಾರೆ.</p>.<p>ಸಮಸ್ಯೆ ಪರಿಹರಿಸಲು ಮುಂದಾಗದಿದ್ದರೆ ರಿಪ್ಪನ್ಪೇಟೆ ಬಿಎಸ್ಎನ್ಎಲ್ ಕಚೇರಿಯಿಂದಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾಮಾಜಿಕ ಸಂಘಟನೆಗಳ ಸಹಯೋಗದಲ್ಲಿ ಕಾಲ್ನಡಿಗೆ ಮೂಲಕ ಬಿಎಸ್ಎನ್ಎಲ್ ಅಣಕು ಶವಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>