<p>ರಿಪ್ಪನ್ಪೇಟೆ: ಇಲ್ಲಿನ ಬರುವೆ ರಸ್ತೆಯ ಹಳೆ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಪಂಚಾಯಿತಿ ಅಧೀನದಲ್ಲಿರುವ ಸರ್ವೆ ನಂ. 43ರಲ್ಲಿನ ಜಾಗವನ್ನು ರಾತ್ರೋರಾತ್ರಿ ಒತ್ತುವರಿ ಮಾಡಲಾಗಿದ್ದು, ಇದನ್ನು ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ತೆರವುಗೊಳಿಸಲಾಯಿತು.</p>.<p>1991ರಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೀಡಿರುವ ಹಕ್ಕುಪತ್ರ ನಮ್ಮ ಬಳಿ ಇದೆ ಎಂದು ಒತ್ತುವರಿದಾರರು ತೆರವಿಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಒತ್ತುವರಿದಾರರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾ.ಪಂ. ಮಾಜಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಹಲ್ಲೆ ನಡೆಸಿರುವುದಾಗಿ ಹೇಳಿ ಎರಡು ಗುಂಪಿನವರೂ ಆಸ್ಪತ್ರೆಗೆ ದಾಖಲಾಗಿದ್ದು, ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.</p>.<p>ಗ್ರಾ.ಪಂ. ಮಾಜಿ ಸದಸ್ಯರಾದ ನಿರೂಪ್ ಕುಮಾರ್, ಪ್ರಕಾಶ್ ಪಾಲೇಕರ್, ಮಲ್ಲಿಕಾರ್ಜುನ್, ಸುಂದರೇಶ್ ಹಾಗೂ ಸಿಬ್ಬಂದಿ ನಾಗೇಶ್ ಮೋರೆ, ರಾಜೇಶ್ ಸೇರಿದಂತೆ ಹಲವರು ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-42-162193366</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಿಪ್ಪನ್ಪೇಟೆ: ಇಲ್ಲಿನ ಬರುವೆ ರಸ್ತೆಯ ಹಳೆ ಸಂತೇ ಮಾರ್ಕೆಟ್ ಪ್ರದೇಶದಲ್ಲಿ ಪಂಚಾಯಿತಿ ಅಧೀನದಲ್ಲಿರುವ ಸರ್ವೆ ನಂ. 43ರಲ್ಲಿನ ಜಾಗವನ್ನು ರಾತ್ರೋರಾತ್ರಿ ಒತ್ತುವರಿ ಮಾಡಲಾಗಿದ್ದು, ಇದನ್ನು ಗ್ರಾಮ ಪಂಚಾಯಿತಿ ವತಿಯಿಂದ ಶನಿವಾರ ತೆರವುಗೊಳಿಸಲಾಯಿತು.</p>.<p>1991ರಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನೀಡಿರುವ ಹಕ್ಕುಪತ್ರ ನಮ್ಮ ಬಳಿ ಇದೆ ಎಂದು ಒತ್ತುವರಿದಾರರು ತೆರವಿಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಒತ್ತುವರಿದಾರರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಗ್ರಾ.ಪಂ. ಮಾಜಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.</p>.<p>ಹಲ್ಲೆ ನಡೆಸಿರುವುದಾಗಿ ಹೇಳಿ ಎರಡು ಗುಂಪಿನವರೂ ಆಸ್ಪತ್ರೆಗೆ ದಾಖಲಾಗಿದ್ದು, ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.</p>.<p>ಗ್ರಾ.ಪಂ. ಮಾಜಿ ಸದಸ್ಯರಾದ ನಿರೂಪ್ ಕುಮಾರ್, ಪ್ರಕಾಶ್ ಪಾಲೇಕರ್, ಮಲ್ಲಿಕಾರ್ಜುನ್, ಸುಂದರೇಶ್ ಹಾಗೂ ಸಿಬ್ಬಂದಿ ನಾಗೇಶ್ ಮೋರೆ, ರಾಜೇಶ್ ಸೇರಿದಂತೆ ಹಲವರು ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-42-162193366</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>