<p><strong>ರಿಪ್ಪನ್ಪೇಟೆ:</strong> ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಸಂಜೆಯಿಂದ ಶುಕ್ರವಾರ ಬೆಳಗಿನ ಜಾವದವರೆಗೆ ಭಾರಿ ಗಾಳಿ ಸಹಿತ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿಯಿತು.</p>.<p>ಗಾಳಿ– ಮಳೆಯಿಂದಾಗಿ ಗ್ರಾಮೀಣ ಭಾಗದ ಕೆಲ ಮನೆಗಳ ಹೆಂಚುಗಳು ಹಾರಿ ಹೋಗಿವೆ. ಗ್ರಾಮಾಂತರ ಪ್ರದೇಶದ ಕೆಲವು ಹಳ್ಳಿಗಳಲ್ಲಿ ಮರಗಳು ಉರುಳಿ ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬರುವೆ ದೊಡ್ಡಿನಕೊಪ್ಪ ಗ್ರಾಮದ ವಿದ್ಯುತ್ ಪರಿವರ್ತಕ ಹಾನಿಗೀಡಾಗಿ 30 ಗಂಟೆಗಳ ಕಾಲ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು.</p>.<p>ಶಬರೀಶ್ ನಗರ, ವಿದ್ಯಾನಗರ, ಶ್ರೀ ರಾಮನಗರ, ವಿನಾಯಕ ನಗರದ ಗೃಹಬಳಕೆಯ ಯಂತ್ರೋಪಕರಣಗಳು ಹಾನಿಗೀಡಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಬಾಳೂರು, ಕೂಡ್ರಿಗೆ, ಹೆದ್ದಾರಿಪುರ, ಅರಸಾಳು, ಬಸವಪುರ, ಹುಲಗಿನ ಮನೆ, ಹೆದ್ದಾರಿ ಪುರ, ಚಿಕ್ಕಜೇನಿ, ತಳಲೆ, ಹಾರಂಬಳ್ಳಿ ಸೇರಿ ಕೆಲ ಗ್ರಾಮಗಳ ಮನೆಯ ಗೃಹಬಳಕೆಯ ವಿದ್ಯುತ್ ಪೀಠೋಪಕರಣಗಳು ಹಾನಿಗೀಡಾಗಿವೆ. ಮರಗಳ ದೊಡ್ಡ ದೊಡ್ಡ ಕೊಂಬೆಗಳು ಮುರಿದು ಬಿದ್ದ ಕಾರಣ ಸಂಪೂರ್ಣ ವಿದ್ಯುತ್ ಕಡಿತಗೊಂಡಿತ್ತು.</p>.<p>ಮೆಸ್ಕಾಂ ಲೈನ್ಮನ್ ಹಾಗೂ ಗುತ್ತಿಗೆ ಕಾರ್ಮಿಕರು ತಡರಾತ್ರಿವರೆಗೂ ದುರಸ್ತಿ ಕಾರ್ಯದಲ್ಲಿ ತೊಡಗಿ ವಿದ್ಯುತ್ ಸಂಪರ್ಕಕ್ಕೆ ಒದಗಿಸಲು ಶ್ರಮಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-42-2109214808</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಗ್ರಾಮ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಗುರುವಾರ ಸಂಜೆಯಿಂದ ಶುಕ್ರವಾರ ಬೆಳಗಿನ ಜಾವದವರೆಗೆ ಭಾರಿ ಗಾಳಿ ಸಹಿತ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿಯಿತು.</p>.<p>ಗಾಳಿ– ಮಳೆಯಿಂದಾಗಿ ಗ್ರಾಮೀಣ ಭಾಗದ ಕೆಲ ಮನೆಗಳ ಹೆಂಚುಗಳು ಹಾರಿ ಹೋಗಿವೆ. ಗ್ರಾಮಾಂತರ ಪ್ರದೇಶದ ಕೆಲವು ಹಳ್ಳಿಗಳಲ್ಲಿ ಮರಗಳು ಉರುಳಿ ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಬರುವೆ ದೊಡ್ಡಿನಕೊಪ್ಪ ಗ್ರಾಮದ ವಿದ್ಯುತ್ ಪರಿವರ್ತಕ ಹಾನಿಗೀಡಾಗಿ 30 ಗಂಟೆಗಳ ಕಾಲ ಈ ಭಾಗದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿತ್ತು.</p>.<p>ಶಬರೀಶ್ ನಗರ, ವಿದ್ಯಾನಗರ, ಶ್ರೀ ರಾಮನಗರ, ವಿನಾಯಕ ನಗರದ ಗೃಹಬಳಕೆಯ ಯಂತ್ರೋಪಕರಣಗಳು ಹಾನಿಗೀಡಾಗಿ ಸಾಕಷ್ಟು ನಷ್ಟ ಉಂಟಾಗಿದೆ. ಬಾಳೂರು, ಕೂಡ್ರಿಗೆ, ಹೆದ್ದಾರಿಪುರ, ಅರಸಾಳು, ಬಸವಪುರ, ಹುಲಗಿನ ಮನೆ, ಹೆದ್ದಾರಿ ಪುರ, ಚಿಕ್ಕಜೇನಿ, ತಳಲೆ, ಹಾರಂಬಳ್ಳಿ ಸೇರಿ ಕೆಲ ಗ್ರಾಮಗಳ ಮನೆಯ ಗೃಹಬಳಕೆಯ ವಿದ್ಯುತ್ ಪೀಠೋಪಕರಣಗಳು ಹಾನಿಗೀಡಾಗಿವೆ. ಮರಗಳ ದೊಡ್ಡ ದೊಡ್ಡ ಕೊಂಬೆಗಳು ಮುರಿದು ಬಿದ್ದ ಕಾರಣ ಸಂಪೂರ್ಣ ವಿದ್ಯುತ್ ಕಡಿತಗೊಂಡಿತ್ತು.</p>.<p>ಮೆಸ್ಕಾಂ ಲೈನ್ಮನ್ ಹಾಗೂ ಗುತ್ತಿಗೆ ಕಾರ್ಮಿಕರು ತಡರಾತ್ರಿವರೆಗೂ ದುರಸ್ತಿ ಕಾರ್ಯದಲ್ಲಿ ತೊಡಗಿ ವಿದ್ಯುತ್ ಸಂಪರ್ಕಕ್ಕೆ ಒದಗಿಸಲು ಶ್ರಮಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-42-2109214808</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>