<p><strong>ರಿಪ್ಪನ್ಪೇಟೆ:</strong> ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ರಾಮತೀರ್ಥದ ರಾಮೇಶ್ವರ ದೇವಸ್ಥಾನದಲ್ಲಿ ಗುರುವಾರ 11ನೇ ವರ್ಷದ ವಾರ್ಷಿಕೋತ್ಸವ ಹಾಗೂ 42ನೇ ವರ್ಷದ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.</p>.<p>ಜಿಲ್ಲೆ ಹೊರ ಜಿಲ್ಲೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಶರ್ಮಿನಾವತಿ ನದಿಯಲ್ಲಿ ತೀರ್ಥಸ್ನಾನ ಮಾಡಿದರು. ನದಿ ತಟದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಕೆಂಜಿಗಾಪುರದ ಶ್ರೀಧರ ಭಟ್ ಅವರ ಸಾಂಗತ್ಯದಲ್ಲಿ ಗಣಪತಿ ಪೂಜೆ, ಪುಣ್ಯಾಹ ಮತ್ತು ಕಲಾತತ್ವ ಹೋಮ ಹಾಗೂ ಹಾಲಂದೂರು ಶ್ರೀಧರ್ ಭಟ್, ದೇವಸ್ಥಾನದ ನಿತ್ಯ ಪೂಜೆ ಅರ್ಚಕರಾದ ಎ.ವಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ವ್ರತ, ತೀರ್ಥ, ಪ್ರಸಾದ ವಿನಿಯೋಗ ನೆರವೇರಿತು. ನಂತರ ಸಾಮೂಹಿಕ ಅನ್ನಸಂತರ್ಪಣೆ, ಸಂಜೆ ಹೊಳೆ ದೀಪೋತ್ಸವ ವಿಶೇಷ ಪೂಜೆಗಳು ನೆರವೇರಿದವು.</p>.<p>ದೇವಸ್ಥಾನದ ಪದಾಧಿಕಾರಿಗಳಾದ ಎಚ್.ಜಿ ಶೇಖರಪ್ಪ, ಗಂಗಾಧರ, ಕರುಣಾಕರ, ಗಿರೀಶ್, ಶಶಿಕುಮಾರ್, ಚಂದ್ರಶೇಖರ್, ಶೇಖರಪ್ಪ, ಚಂದ್ರಕಲಾ, ಆನಂದ, ಕೇಶವಾಚಾರ್ಯ, ಅಚ್ಚುತಾಚಾರ್ಯ, ಉಮೇಶ್, ಜಯಂತ್ ಕೆ.ವೈ, ಸಂತೋಷ್, ನಾಗೇಶ್, ಗೀತಾ, ಲಲಿತಮ್ಮ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಿಪ್ಪನ್ಪೇಟೆ:</strong> ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ರಾಮತೀರ್ಥದ ರಾಮೇಶ್ವರ ದೇವಸ್ಥಾನದಲ್ಲಿ ಗುರುವಾರ 11ನೇ ವರ್ಷದ ವಾರ್ಷಿಕೋತ್ಸವ ಹಾಗೂ 42ನೇ ವರ್ಷದ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.</p>.<p>ಜಿಲ್ಲೆ ಹೊರ ಜಿಲ್ಲೆಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ಶರ್ಮಿನಾವತಿ ನದಿಯಲ್ಲಿ ತೀರ್ಥಸ್ನಾನ ಮಾಡಿದರು. ನದಿ ತಟದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಕೆಂಜಿಗಾಪುರದ ಶ್ರೀಧರ ಭಟ್ ಅವರ ಸಾಂಗತ್ಯದಲ್ಲಿ ಗಣಪತಿ ಪೂಜೆ, ಪುಣ್ಯಾಹ ಮತ್ತು ಕಲಾತತ್ವ ಹೋಮ ಹಾಗೂ ಹಾಲಂದೂರು ಶ್ರೀಧರ್ ಭಟ್, ದೇವಸ್ಥಾನದ ನಿತ್ಯ ಪೂಜೆ ಅರ್ಚಕರಾದ ಎ.ವಿ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ವ್ರತ, ತೀರ್ಥ, ಪ್ರಸಾದ ವಿನಿಯೋಗ ನೆರವೇರಿತು. ನಂತರ ಸಾಮೂಹಿಕ ಅನ್ನಸಂತರ್ಪಣೆ, ಸಂಜೆ ಹೊಳೆ ದೀಪೋತ್ಸವ ವಿಶೇಷ ಪೂಜೆಗಳು ನೆರವೇರಿದವು.</p>.<p>ದೇವಸ್ಥಾನದ ಪದಾಧಿಕಾರಿಗಳಾದ ಎಚ್.ಜಿ ಶೇಖರಪ್ಪ, ಗಂಗಾಧರ, ಕರುಣಾಕರ, ಗಿರೀಶ್, ಶಶಿಕುಮಾರ್, ಚಂದ್ರಶೇಖರ್, ಶೇಖರಪ್ಪ, ಚಂದ್ರಕಲಾ, ಆನಂದ, ಕೇಶವಾಚಾರ್ಯ, ಅಚ್ಚುತಾಚಾರ್ಯ, ಉಮೇಶ್, ಜಯಂತ್ ಕೆ.ವೈ, ಸಂತೋಷ್, ನಾಗೇಶ್, ಗೀತಾ, ಲಲಿತಮ್ಮ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>