<p><strong>ಶಿವಮೊಗ್ಗ</strong>: ಸಿಪ್ಪೆಗೋಟು ಅಡಿಕೆ ಖರೀದಿಗೆ ತೆರಳಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ₹5 ಲಕ್ಷ ದರೋಡೆ ಮಾಡಿದ್ದ ಐವರನ್ನು ಇಲ್ಲಿನ ತುಂಗಾನಗರ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಶಿವಮೊಗ್ಗದ ಗೋಪಾಳದ ನಿವಾಸಿ ಮಂಜನಾಯ್ಕ (35), ಶಿಕಾರಿಪುರ ಪಟ್ಟಣದ ಆಸೀಫ್ ವುಲ್ಲಾ (32), ಶಿವಮೊಗ್ಗ ತಾಲ್ಲೂಕಿನ ಕೊನಗವಳ್ಳಿಯ ಗಣೇಶ್ ನಾಯ್ಕ (28), ಟ್ಯಾಂಕ್ ಮೊಹಲ್ಲಾ ನಿವಾಸಿ ದಾವಲ್ ಬಡಗಿ (35) ಆರ್ಎಲ್ಎಂ ನಗರದ ನಿವಾಸಿ ರಿಜ್ವಾನ್ ಅಹ್ಮದ್ (48) ಬಂಧಿತರು.</p>.<p>ಆರೋಪಿಗಳಿಂದ ₹3.15 ಲಕ್ಷ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಮೂರು ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p class="Subhead">ಪ್ರಕರಣದ ವಿವರ: ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಸುರೇಶ್ಕುಮಾರ್ ಅವರು ಕಳೆದ ಫೆಬ್ರುವರಿ 6ರಂದು ಸ್ನೇಹಿತ ಸಂತೋಷ್ ಜೊತೆ ಶಿವಮೊಗ್ಗದ ಕಿಮ್ಮನೆ ರೆಸಾರ್ಟ್ಗೆ ಹೋಗುವ ದಾರಿಯಲ್ಲಿ ಹೋದಾಗ ಅಪರಿಚಿತ ವ್ಯಕ್ತಿಗಳು ಇವರ ಮೇಲೆ ಹಲ್ಲೆ ಮಾಡಿ, ₹5 ಲಕ್ಷ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ತುಂಗಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಅವರು ತುಂಗಾನಗರ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಸಿಪ್ಪೆಗೋಟು ಅಡಿಕೆ ಖರೀದಿಗೆ ತೆರಳಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ₹5 ಲಕ್ಷ ದರೋಡೆ ಮಾಡಿದ್ದ ಐವರನ್ನು ಇಲ್ಲಿನ ತುಂಗಾನಗರ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಶಿವಮೊಗ್ಗದ ಗೋಪಾಳದ ನಿವಾಸಿ ಮಂಜನಾಯ್ಕ (35), ಶಿಕಾರಿಪುರ ಪಟ್ಟಣದ ಆಸೀಫ್ ವುಲ್ಲಾ (32), ಶಿವಮೊಗ್ಗ ತಾಲ್ಲೂಕಿನ ಕೊನಗವಳ್ಳಿಯ ಗಣೇಶ್ ನಾಯ್ಕ (28), ಟ್ಯಾಂಕ್ ಮೊಹಲ್ಲಾ ನಿವಾಸಿ ದಾವಲ್ ಬಡಗಿ (35) ಆರ್ಎಲ್ಎಂ ನಗರದ ನಿವಾಸಿ ರಿಜ್ವಾನ್ ಅಹ್ಮದ್ (48) ಬಂಧಿತರು.</p>.<p>ಆರೋಪಿಗಳಿಂದ ₹3.15 ಲಕ್ಷ ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಮೂರು ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.</p>.<p class="Subhead">ಪ್ರಕರಣದ ವಿವರ: ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಸುರೇಶ್ಕುಮಾರ್ ಅವರು ಕಳೆದ ಫೆಬ್ರುವರಿ 6ರಂದು ಸ್ನೇಹಿತ ಸಂತೋಷ್ ಜೊತೆ ಶಿವಮೊಗ್ಗದ ಕಿಮ್ಮನೆ ರೆಸಾರ್ಟ್ಗೆ ಹೋಗುವ ದಾರಿಯಲ್ಲಿ ಹೋದಾಗ ಅಪರಿಚಿತ ವ್ಯಕ್ತಿಗಳು ಇವರ ಮೇಲೆ ಹಲ್ಲೆ ಮಾಡಿ, ₹5 ಲಕ್ಷ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ತುಂಗಾ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಅವರು ತುಂಗಾನಗರ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>