<p><strong>ಶಿವಮೊಗ್ಗ:</strong> ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳ ಮೇಲೆ ನಿಯಂತ್ರಣದಂತಹ ದುಸ್ಸಾಹಸಕ್ಕೆ ಕೈ ಹಾಕಿದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬಹಳ ದೊಡ್ಡ ಪಾಠ ಕಲಿಯಬೇಕಾಗುತ್ತದೆ. ಆ ನಿರ್ಧಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ಸರಿಯಲಿ’ ಎಂದು ಮಾಜಿ ಶಾಸಕ, ಬಿಜೆಪಿಯ ಆರ್.ಕೆ.ಸಿದ್ರಾಮಣ್ಣ ಎಚ್ಚರಿಸಿದರು.</p>.<p>ಒಂದು ಸಮುದಾಯದ ಮತಬ್ಯಾಂಕ್ ಭದ್ರಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಆರ್ಎಸ್ಎಸ್ ಚಟುವಟಿಕೆಗಳ ಮೇಲೆ ನಿಯಂತ್ರಣಕ್ಕೆ ಮುಂದಾಗಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಎಐಸಿಸಿ ನಾಯಕ ರಾಹುಲ್ಗಾಂಧಿ ಅವರನ್ನು ತೃಪ್ತಿಪಡಿಸಲು ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ಅವರಿಗೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಯು ವಿಭಜಕ ಮನಃಸ್ಥಿತಿ ಅನ್ನಿಸುವುದಿಲ್ಲ, ಭಯವನ್ನು ಸೃಷ್ಟಿಸುವುದಿಲ್ಲ. ಆದರೆ ಆರ್ಎಸ್ಎಸ್ನ ‘ಭಾರತ ಮಾತೆಗೆ ಜೈ’ ಎಂಬ ಘೋಷಣೆ ಆತಂಕ ಹುಟ್ಟಿಸಿದೆ ಎಂದು ಛೇಡಿಸಿದರು.</p>.<p>‘ಆರ್ಎಸ್ಎಸ್ನ ಶಾಖೆಗಳು ಹಾಗೂ ಬೈಠಕ್ಗಳಲ್ಲಿ ಸಂವಿಧಾನದಲ್ಲಿರುವ ಆಶಯಗಳನ್ನೇ ಹೇಳಿಕೊಡಲಾಗುತ್ತದೆ. ಹಾಗಿದ್ದರೂ ಸಂಘದ ಚಟುವಟಿಕೆ ನಿಯಂತ್ರಣಕ್ಕೆ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿರುವುದು ಖಂಡನೀಯ. ಆರ್ಎಸ್ಎಸ್ ಚಟುವಟಿಕೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ನಿಷೇಧ ಹೇರಬಹುದು. ಆದರೆ ಸಂಘಟನೆಯ ಚಟುವಟಿಕೆಗಳ ನಿಷೇಧ ಸಾಧ್ಯವಿಲ್ಲ’ ಎಂದರು.</p>.<p>ದೇಶದ ಪ್ರಜಾಪ್ರಭುತ್ವ, ಜಾತ್ಯತೀತತೆ, ಭ್ರಾತೃತ್ವ ಉಳಿಸುವುದೇ ಆರ್ಎಸ್ಎಸ್ನ ಮೂಲ ಉದ್ದೇಶ. ಸಂಘ ಹೇಳುವ ವಿಚಾರ ಸಂವಿಧಾನದಲ್ಲಿಯೇ ಅಡಕವಾಗಿದೆ ಎಂದು ಪುನರುಚ್ಚರಿಸಿದ ಸಿದ್ರಾಮಣ್ಣ,`ಹಿಂದೂ’ ಯಾವುದೇ ಮತ, ಪಂಥ ಅಲ್ಲ. ಬದಲಿಗೆ ಅದು ಎಲ್ಲರನ್ನೂ ಒಳಗೊಂಡ ಜೀವನ ವಿಧಾನ ಎಂದು ಹೇಳಿದರು.</p>.<p>‘ಸಂಘದ ಚಟುವಟಿಕೆ ವಿಭಜಕ ಅಲ್ಲ. ಅದು ಜನರು ಹಾಗೂ ಸಮಾಜವನ್ನು ಜೋಡಿಸುವ ಚಟುವಟಿಕೆ ಆಗಿದೆ. ಅವರು ಪತ್ರದಲ್ಲಿ ಉಲ್ಲೇಖಿಸಿರುವ ‘ದೊಣ್ಣೆ’ ಶಸ್ತ್ರಾಸ್ತ್ರ ಕಾಯ್ದೆಯಲ್ಲಿ ಬರುವುದಿಲ್ಲ ಎಂಬ ತಿಳಿವಳಿಕೆ ಪ್ರಿಯಾಂಕ್ ಖರ್ಗೆಗೆ ಇಲ್ಲದಿರುವುದು ದುರದೃಷ್ಟಕರ’ ಎಂದು ತಿಳಿಸಿದರು.</p>.<p>‘ಆರ್ಎಸ್ಎಸ್ ವಿರೋಧಿಸುವವರು ದೇಶದ ಯಾವುದೇ ಸ್ಥಳಕ್ಕೆ ಹೋದರೂ ಅಲ್ಲಿ ಸಂಘದ ನಿತ್ಯಶಾಖೆ ನಡೆಯುತ್ತಿರುತ್ತದೆ. ಅಲ್ಲಿಗೆ ಭೇಟಿ ನೀಡಿ ಆರ್ಎಸ್ಎಸ್ನ ಕಾರ್ಯ ಚಟುವಟಿಕೆಗಳನ್ನು ಗಮನಿಸಲಿ’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಪ್ರಮುಖರಾದ ಎಸ್. ದತ್ತಾತ್ರಿ, ಮೋಹನ್ರೆಡ್ಡಿ, ಮಂಜುನಾಥ್ ನವಿಲೆ, ಹರಿಕೃಷ್ಣ, ಶ್ರೀನಾಥ್, ಕೆ.ವಿ. ಅಣ್ಣಪ್ಪ, ಚಂದ್ರಶೇಖರ್, ಮುರಳಿ, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಚಟುವಟಿಕೆಗಳ ಮೇಲೆ ನಿಯಂತ್ರಣದಂತಹ ದುಸ್ಸಾಹಸಕ್ಕೆ ಕೈ ಹಾಕಿದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬಹಳ ದೊಡ್ಡ ಪಾಠ ಕಲಿಯಬೇಕಾಗುತ್ತದೆ. ಆ ನಿರ್ಧಾರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ಸರಿಯಲಿ’ ಎಂದು ಮಾಜಿ ಶಾಸಕ, ಬಿಜೆಪಿಯ ಆರ್.ಕೆ.ಸಿದ್ರಾಮಣ್ಣ ಎಚ್ಚರಿಸಿದರು.</p>.<p>ಒಂದು ಸಮುದಾಯದ ಮತಬ್ಯಾಂಕ್ ಭದ್ರಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಆರ್ಎಸ್ಎಸ್ ಚಟುವಟಿಕೆಗಳ ಮೇಲೆ ನಿಯಂತ್ರಣಕ್ಕೆ ಮುಂದಾಗಿದೆ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಎಐಸಿಸಿ ನಾಯಕ ರಾಹುಲ್ಗಾಂಧಿ ಅವರನ್ನು ತೃಪ್ತಿಪಡಿಸಲು ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಈ ಕೆಲಸಕ್ಕೆ ಕೈ ಹಾಕಿದ್ದಾರೆ. ಅವರಿಗೆ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಯು ವಿಭಜಕ ಮನಃಸ್ಥಿತಿ ಅನ್ನಿಸುವುದಿಲ್ಲ, ಭಯವನ್ನು ಸೃಷ್ಟಿಸುವುದಿಲ್ಲ. ಆದರೆ ಆರ್ಎಸ್ಎಸ್ನ ‘ಭಾರತ ಮಾತೆಗೆ ಜೈ’ ಎಂಬ ಘೋಷಣೆ ಆತಂಕ ಹುಟ್ಟಿಸಿದೆ ಎಂದು ಛೇಡಿಸಿದರು.</p>.<p>‘ಆರ್ಎಸ್ಎಸ್ನ ಶಾಖೆಗಳು ಹಾಗೂ ಬೈಠಕ್ಗಳಲ್ಲಿ ಸಂವಿಧಾನದಲ್ಲಿರುವ ಆಶಯಗಳನ್ನೇ ಹೇಳಿಕೊಡಲಾಗುತ್ತದೆ. ಹಾಗಿದ್ದರೂ ಸಂಘದ ಚಟುವಟಿಕೆ ನಿಯಂತ್ರಣಕ್ಕೆ ಪ್ರಿಯಾಂಕ್ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿರುವುದು ಖಂಡನೀಯ. ಆರ್ಎಸ್ಎಸ್ ಚಟುವಟಿಕೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ನಿಷೇಧ ಹೇರಬಹುದು. ಆದರೆ ಸಂಘಟನೆಯ ಚಟುವಟಿಕೆಗಳ ನಿಷೇಧ ಸಾಧ್ಯವಿಲ್ಲ’ ಎಂದರು.</p>.<p>ದೇಶದ ಪ್ರಜಾಪ್ರಭುತ್ವ, ಜಾತ್ಯತೀತತೆ, ಭ್ರಾತೃತ್ವ ಉಳಿಸುವುದೇ ಆರ್ಎಸ್ಎಸ್ನ ಮೂಲ ಉದ್ದೇಶ. ಸಂಘ ಹೇಳುವ ವಿಚಾರ ಸಂವಿಧಾನದಲ್ಲಿಯೇ ಅಡಕವಾಗಿದೆ ಎಂದು ಪುನರುಚ್ಚರಿಸಿದ ಸಿದ್ರಾಮಣ್ಣ,`ಹಿಂದೂ’ ಯಾವುದೇ ಮತ, ಪಂಥ ಅಲ್ಲ. ಬದಲಿಗೆ ಅದು ಎಲ್ಲರನ್ನೂ ಒಳಗೊಂಡ ಜೀವನ ವಿಧಾನ ಎಂದು ಹೇಳಿದರು.</p>.<p>‘ಸಂಘದ ಚಟುವಟಿಕೆ ವಿಭಜಕ ಅಲ್ಲ. ಅದು ಜನರು ಹಾಗೂ ಸಮಾಜವನ್ನು ಜೋಡಿಸುವ ಚಟುವಟಿಕೆ ಆಗಿದೆ. ಅವರು ಪತ್ರದಲ್ಲಿ ಉಲ್ಲೇಖಿಸಿರುವ ‘ದೊಣ್ಣೆ’ ಶಸ್ತ್ರಾಸ್ತ್ರ ಕಾಯ್ದೆಯಲ್ಲಿ ಬರುವುದಿಲ್ಲ ಎಂಬ ತಿಳಿವಳಿಕೆ ಪ್ರಿಯಾಂಕ್ ಖರ್ಗೆಗೆ ಇಲ್ಲದಿರುವುದು ದುರದೃಷ್ಟಕರ’ ಎಂದು ತಿಳಿಸಿದರು.</p>.<p>‘ಆರ್ಎಸ್ಎಸ್ ವಿರೋಧಿಸುವವರು ದೇಶದ ಯಾವುದೇ ಸ್ಥಳಕ್ಕೆ ಹೋದರೂ ಅಲ್ಲಿ ಸಂಘದ ನಿತ್ಯಶಾಖೆ ನಡೆಯುತ್ತಿರುತ್ತದೆ. ಅಲ್ಲಿಗೆ ಭೇಟಿ ನೀಡಿ ಆರ್ಎಸ್ಎಸ್ನ ಕಾರ್ಯ ಚಟುವಟಿಕೆಗಳನ್ನು ಗಮನಿಸಲಿ’ ಎಂದು ಸಲಹೆ ನೀಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಪ್ರಮುಖರಾದ ಎಸ್. ದತ್ತಾತ್ರಿ, ಮೋಹನ್ರೆಡ್ಡಿ, ಮಂಜುನಾಥ್ ನವಿಲೆ, ಹರಿಕೃಷ್ಣ, ಶ್ರೀನಾಥ್, ಕೆ.ವಿ. ಅಣ್ಣಪ್ಪ, ಚಂದ್ರಶೇಖರ್, ಮುರಳಿ, ಹರೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>