<p><strong>ಸೊರಬ:</strong> ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ತೊಡಕಾಗಿದ್ದ ತಾಲ್ಲೂಕಿನ ಕಡೇ ಜೋಳದಗುಡ್ಡೆ ರಸ್ತೆಯು ಕೊನೆಗೂ ಅಭಿವೃದ್ಧಿ ಕಾಣುತ್ತಿದೆ. ಇದು ಗ್ರಾಮಸ್ಥರಲ್ಲಿ ಹರ್ಷ ಮೂಡಿಸಿದೆ.</p>.<p>ಎರಡು ಕಿ.ಮಿ ಉದ್ದದ ರಸ್ತೆಯ ಅಭಿವೃದ್ಧಿಗಾಗಿ ₹20 ಲಕ್ಷ ಮೀಸಲಿಡಲಾಗಿದೆ. ರಸ್ತೆಗೆ ಜಲ್ಲಿ ಹರಡಿ, ರೋಲಿಂಗ್ ಮೂಲಕ ಮಣ್ಣು ಹಾಕಿ ಸಮತಟ್ಟು ಮಾಡುವ ಕೆಲಸ ಪೂರ್ಣಗೊಳ್ಳುವ ಹಂತದಲ್ಲಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಕಾಳಜಿಯಿಂದ ಈ ಭಾಗದ ರಸ್ತೆ ದುರಸ್ತಿ ಕಾರ್ಯವು ಚುರುಕಿನಿಂದ ಸಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.</p>.<p>ಈ ಹಿಂದೆ ರಸ್ತೆಯು ಸಂಪೂರ್ಣ ದೂಳಿನಿಂದ ಕೂಡಿತ್ತು. ಮಳೆಗಾಲದಲ್ಲಿ ಕೆಸರುಮಯವಾಗುತ್ತಿತ್ತು. ಓಡಾಟ ದುಸ್ತರವಾಗಿತ್ತು. ದುರಸ್ತಿಯಂದ ಗ್ರಾಮಸ್ಥರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಜಲ್ಲಿ ಹರಡಿರುವುದು ತಾತ್ಕಾಲಿಕ ಪರಿಹಾರವಾಗಿದ್ದು, ಮುಂದಿನ ದಿನಗಳಲ್ಲಿ ಈ ರಸ್ತೆಗೆ ಶಾಶ್ವತವಾಗಿ ಡಾಂಬರೀಕರಣ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದರು.</p>.<div><blockquote>ಕಡೇ ಜೋಳದಗುಡ್ಡೆ ಗ್ರಾಮ ಹೆಚ್ಚಿನ ಮೂಲ ಸೌಕರ್ಯ ಕಾಣದೇ ಉಳಿದಿದೆ. ಸಚಿವ ಮಧು ಬಂಗಾರಪ್ಪ ವಿಶೇಷ ಕಾಳಜಿ ವಹಿಸಿ ಗ್ರಾಮದ ಅಭಿವೃದ್ಧಿಗೆ ಮುಂದಾಗಿದ್ದಾರೆ</blockquote><span class="attribution">ಎಚ್. ಗಣಪತಿ ಹುಲ್ತಿಕೊಪ್ಪ ತಾ.ಪಂ ಮಾಜಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ:</strong> ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ತೊಡಕಾಗಿದ್ದ ತಾಲ್ಲೂಕಿನ ಕಡೇ ಜೋಳದಗುಡ್ಡೆ ರಸ್ತೆಯು ಕೊನೆಗೂ ಅಭಿವೃದ್ಧಿ ಕಾಣುತ್ತಿದೆ. ಇದು ಗ್ರಾಮಸ್ಥರಲ್ಲಿ ಹರ್ಷ ಮೂಡಿಸಿದೆ.</p>.<p>ಎರಡು ಕಿ.ಮಿ ಉದ್ದದ ರಸ್ತೆಯ ಅಭಿವೃದ್ಧಿಗಾಗಿ ₹20 ಲಕ್ಷ ಮೀಸಲಿಡಲಾಗಿದೆ. ರಸ್ತೆಗೆ ಜಲ್ಲಿ ಹರಡಿ, ರೋಲಿಂಗ್ ಮೂಲಕ ಮಣ್ಣು ಹಾಕಿ ಸಮತಟ್ಟು ಮಾಡುವ ಕೆಲಸ ಪೂರ್ಣಗೊಳ್ಳುವ ಹಂತದಲ್ಲಿದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ವಿಶೇಷ ಕಾಳಜಿಯಿಂದ ಈ ಭಾಗದ ರಸ್ತೆ ದುರಸ್ತಿ ಕಾರ್ಯವು ಚುರುಕಿನಿಂದ ಸಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.</p>.<p>ಈ ಹಿಂದೆ ರಸ್ತೆಯು ಸಂಪೂರ್ಣ ದೂಳಿನಿಂದ ಕೂಡಿತ್ತು. ಮಳೆಗಾಲದಲ್ಲಿ ಕೆಸರುಮಯವಾಗುತ್ತಿತ್ತು. ಓಡಾಟ ದುಸ್ತರವಾಗಿತ್ತು. ದುರಸ್ತಿಯಂದ ಗ್ರಾಮಸ್ಥರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ. ಜಲ್ಲಿ ಹರಡಿರುವುದು ತಾತ್ಕಾಲಿಕ ಪರಿಹಾರವಾಗಿದ್ದು, ಮುಂದಿನ ದಿನಗಳಲ್ಲಿ ಈ ರಸ್ತೆಗೆ ಶಾಶ್ವತವಾಗಿ ಡಾಂಬರೀಕರಣ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದರು.</p>.<div><blockquote>ಕಡೇ ಜೋಳದಗುಡ್ಡೆ ಗ್ರಾಮ ಹೆಚ್ಚಿನ ಮೂಲ ಸೌಕರ್ಯ ಕಾಣದೇ ಉಳಿದಿದೆ. ಸಚಿವ ಮಧು ಬಂಗಾರಪ್ಪ ವಿಶೇಷ ಕಾಳಜಿ ವಹಿಸಿ ಗ್ರಾಮದ ಅಭಿವೃದ್ಧಿಗೆ ಮುಂದಾಗಿದ್ದಾರೆ</blockquote><span class="attribution">ಎಚ್. ಗಣಪತಿ ಹುಲ್ತಿಕೊಪ್ಪ ತಾ.ಪಂ ಮಾಜಿ ಅಧ್ಯಕ್ಷ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>