ಪ್ರಧಾನ ಮಂತ್ರಿ ಘೋಷಣೆ ಮಾಡಿರುವ ಮಳೆ ನೀರು ಇಂಗಿಸುವ ಜಲಶಕ್ತಿ ಅಭಿಯಾನ ರಾಜ್ಯದಾದ್ಯಂತ ಈಗಾಗಲೇ ಆರಂಭವಾಗಿದ್ದು, ಈ ಅಭಿಯಾನದಡಿ ಕೆರೆಗಳ ಪುನಶ್ಚೇತನ, ಕಿರುಗಾಲುವೆ ಅಭಿವೃದ್ಧಿ, ಕಲ್ಯಾಣಿಗಳ ಸ್ವಚ್ಛತೆ, ಸಣ್ಣ ರೈತರ ತೋಟ, ಹೊಲಗಳ ಬದು ನಿರ್ಮಾಣ, ಗೋಕಟ್ಟೆಗಳ ನಿರ್ಮಾಣ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿನೀಡಿದರು.