<p><strong>ಶಿವಮೊಗ್ಗ</strong>: ಕೊರೊನಾ ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತರನ್ನು ಒಳಗೊಂಡ ಕಾರ್ಯಪಡೆ<br />ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಜಿಲ್ಲೆಯಲ್ಲಿ ಈಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಕೋವಿಡ್ ಜನ ಜಾಗೃತಿಗಾಗಿ ಗ್ರಾಮ ಮಟ್ಟದಲ್ಲಿ ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಕಾರ್ಯಪಡೆ ಕೆಲಸ ಮಾಡಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾರ್ಯಪಡೆಯಲ್ಲಿ ಸುಮಾರು 8ರಿಂದ 10 ಜನರು ಇರುತ್ತಾರೆ. ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಶೀತ, ನೆಗಡಿ, ಜ್ವರ ಕಂಡು ಬಂದ ಜನರನ್ನುಆಸ್ಪತ್ರೆಗೆ ದಾಖಲಿಸುವುದು ಈ ಕಾರ್ಯಪಡೆಯ ಕೆಲಸವಾಗಿದೆ. ಇದಕ್ಕೆ ತಗುಲುವ ವೆಚ್ಚವನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು15ನೇ ಹಣಕಾಸು ನಿಧಿಯಡಿ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.</p>.<p>ಪ್ರಧಾನ ಮಂತ್ರಿ ಘೋಷಣೆ ಮಾಡಿರುವ ಮಳೆ ನೀರು ಇಂಗಿಸುವ ಜಲಶಕ್ತಿ ಅಭಿಯಾನ ರಾಜ್ಯದಾದ್ಯಂತ ಈಗಾಗಲೇ ಆರಂಭವಾಗಿದ್ದು, ಈ ಅಭಿಯಾನದಡಿ ಕೆರೆಗಳ ಪುನಶ್ಚೇತನ, ಕಿರುಗಾಲುವೆ ಅಭಿವೃದ್ಧಿ, ಕಲ್ಯಾಣಿಗಳ ಸ್ವಚ್ಛತೆ, ಸಣ್ಣ ರೈತರ ತೋಟ, ಹೊಲಗಳ ಬದು ನಿರ್ಮಾಣ, ಗೋಕಟ್ಟೆಗಳ ನಿರ್ಮಾಣ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿನೀಡಿದರು.</p>.<p class="Subhead">ಜಲಶಕ್ತಿ ಅಭಿಯಾನಕ್ಕೆ ಚಾಲನೆ: ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ನಿಗದಿತ ಗುರಿ 13 ಕೋಟಿ ಮಾನವ ದಿನಗಳನ್ನು ಮುಗಿಸಿ ಹೆಚ್ಚುವರಿಯಾಗಿ 8 ಕೋಟಿ ಮಾನವದಿನಗಳನ್ನು ಬಳಸಿಕೊಳ್ಳಲಾಗಿದೆ. ಈ ವರ್ಷವೂ ಯಾವುದೇ ಗುರಿಯಿಲ್ಲದೆ ಉದ್ಯೋಗ ಖಾತ್ರಿ ಕೆಲಸಗಳನ್ನು ನಡೆಸಲಾಗುವುದು. ಏ. 19ರಂದು ಶಿವಮೊಗ್ಗದ ಪಿಳ್ಳಂಗಿರಿಯ ಕೆರೆ ಪುನಶ್ಚೇತನ ಕಾಮಗಾರಿಯನ್ನು ಉದ್ಘಾಟಿಸುವ ಮೂಲಕ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದುತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಕೊರೊನಾ ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತರನ್ನು ಒಳಗೊಂಡ ಕಾರ್ಯಪಡೆ<br />ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.</p>.<p>ಜಿಲ್ಲೆಯಲ್ಲಿ ಈಚೆಗೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಕೋವಿಡ್ ಜನ ಜಾಗೃತಿಗಾಗಿ ಗ್ರಾಮ ಮಟ್ಟದಲ್ಲಿ ಮತ್ತು ಗ್ರಾಮಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಕಾರ್ಯಪಡೆ ಕೆಲಸ ಮಾಡಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಕಾರ್ಯಪಡೆಯಲ್ಲಿ ಸುಮಾರು 8ರಿಂದ 10 ಜನರು ಇರುತ್ತಾರೆ. ಕೊರೊನಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಶೀತ, ನೆಗಡಿ, ಜ್ವರ ಕಂಡು ಬಂದ ಜನರನ್ನುಆಸ್ಪತ್ರೆಗೆ ದಾಖಲಿಸುವುದು ಈ ಕಾರ್ಯಪಡೆಯ ಕೆಲಸವಾಗಿದೆ. ಇದಕ್ಕೆ ತಗುಲುವ ವೆಚ್ಚವನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು15ನೇ ಹಣಕಾಸು ನಿಧಿಯಡಿ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.</p>.<p>ಪ್ರಧಾನ ಮಂತ್ರಿ ಘೋಷಣೆ ಮಾಡಿರುವ ಮಳೆ ನೀರು ಇಂಗಿಸುವ ಜಲಶಕ್ತಿ ಅಭಿಯಾನ ರಾಜ್ಯದಾದ್ಯಂತ ಈಗಾಗಲೇ ಆರಂಭವಾಗಿದ್ದು, ಈ ಅಭಿಯಾನದಡಿ ಕೆರೆಗಳ ಪುನಶ್ಚೇತನ, ಕಿರುಗಾಲುವೆ ಅಭಿವೃದ್ಧಿ, ಕಲ್ಯಾಣಿಗಳ ಸ್ವಚ್ಛತೆ, ಸಣ್ಣ ರೈತರ ತೋಟ, ಹೊಲಗಳ ಬದು ನಿರ್ಮಾಣ, ಗೋಕಟ್ಟೆಗಳ ನಿರ್ಮಾಣ ಕೆಲಸಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿನೀಡಿದರು.</p>.<p class="Subhead">ಜಲಶಕ್ತಿ ಅಭಿಯಾನಕ್ಕೆ ಚಾಲನೆ: ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ನಿಗದಿತ ಗುರಿ 13 ಕೋಟಿ ಮಾನವ ದಿನಗಳನ್ನು ಮುಗಿಸಿ ಹೆಚ್ಚುವರಿಯಾಗಿ 8 ಕೋಟಿ ಮಾನವದಿನಗಳನ್ನು ಬಳಸಿಕೊಳ್ಳಲಾಗಿದೆ. ಈ ವರ್ಷವೂ ಯಾವುದೇ ಗುರಿಯಿಲ್ಲದೆ ಉದ್ಯೋಗ ಖಾತ್ರಿ ಕೆಲಸಗಳನ್ನು ನಡೆಸಲಾಗುವುದು. ಏ. 19ರಂದು ಶಿವಮೊಗ್ಗದ ಪಿಳ್ಳಂಗಿರಿಯ ಕೆರೆ ಪುನಶ್ಚೇತನ ಕಾಮಗಾರಿಯನ್ನು ಉದ್ಘಾಟಿಸುವ ಮೂಲಕ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದುತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>