ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ವಿ.ಹಲಸೆ ಕೆಎಸ್‌ಒಯು ಕುಲಪತಿ

Last Updated 11 ನವೆಂಬರ್ 2022, 16:28 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಶರಣಪ್ಪ ವೈಜಿನಾಥ್ ಹಲಸೆ ಅವರು ನೇಮಕಗೊಂಡಿದ್ದಾರೆ.

ಪ್ರಸ್ತುತ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಿಂದೆ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ಕೆಎಸ್‌ಒಯು ಕುಲಪತಿಗಳಾಗಿದ್ದ ಡಾ.ಎಸ್‌.ವಿದ್ಯಾಶಂಕರ ಅವರನ್ನು ಸರ್ಕಾರ ಈಚೆಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಿಸಿತ್ತು. ತೆರವಾದ ಸ್ಥಾನಕ್ಕೆ ಹಲಸೆ ಅವರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT