<p><strong>ಶಿವಮೊಗ್ಗ:</strong> ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಾಬಾ ಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಕ್ಷಣ ಅಂಗೀಕರಿಸಬೇಕು. ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಹಿಂದುಳಿದ ಆಯೋಗದ ಕಾಂತ್ರಾಜ್ ವರದಿ ಬಹಿರಂಗಗೊಳಿಸಬೇಕು. ಜಾತಿವಾರು ಮೀಸಲಾತಿ ಜಾರಿಮಾಡಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ಸರ್ಕಾರ ಮೀಸಲಾತಿಯನ್ನು ಶೇ 50ರಿಂದ 70ಕ್ಕೆ ಹೆಚ್ಚಳ ಮಾಡಬೇಕು. ಪರಿಶಿಷ್ಟ ಮೀಸಲಾತಿಯನ್ನು ಶೇ 25ಕ್ಕೆ ನಿಗದಿ ಮಾಡಬೇಕು. ಸಂವಿಧಾನದ 9ನೇ ಪರಿಚ್ಚೇದದಲ್ಲಿ ಸೇರಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಯ್ದೆಯ ಕಲಂ 7 (ಡಿ) ರದ್ದು ಮಾಡುವ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅನ್ಯ ಯೋಜನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ಸುಪ್ರೀಂಕೋರ್ಟ್ ತೀರ್ಪಿನಿಂದ ಪರಿಶಿಷ್ಟರ ಭೂ ಪರಭಾರೆ ಕಾಯ್ದೆಯ ಆಶಯಕ್ಕೆ ಧಕ್ಕೆಯಾಗಿದೆ. ಹಾಗಾಗಿ, ರಾಜ್ಯ ಸರ್ಕಾರ ಪಿಟಿಸಿಎಲ್ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಬೇಕು. ಭೂಮಿ ಕಳೆದುಕೊಳ್ಳುತ್ತಿರುವ ಪರಿಶಿಷ್ಟರಿಗೆ ಕಾನೂನು ರಕ್ಷಣೆ ನೀಡಬೇಕು. ಕೇಂದ್ರ ಸರ್ಕಾರ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p>ಸಮಿತಿಯ ಗೌರವಾಧ್ಯಕ್ಷ ಎಂ.ಎಸ್.ಸಿದ್ಧಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಪ್ರಭು, ಶಿವಮೂರ್ತಿ, ರಾಜಶೇಖರ್, ಮೂರ್ತಿ, ದೇವೇಂದ್ರಪ್ಪ, ಪ್ರಶಾಂತ್, ಹನುಮೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬಾಬಾ ಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಕಾರ್ಯಕರ್ತರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸದಾಶಿವ ಆಯೋಗದ ವರದಿಯನ್ನು ಸರ್ಕಾರ ತಕ್ಷಣ ಅಂಗೀಕರಿಸಬೇಕು. ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಹಿಂದುಳಿದ ಆಯೋಗದ ಕಾಂತ್ರಾಜ್ ವರದಿ ಬಹಿರಂಗಗೊಳಿಸಬೇಕು. ಜಾತಿವಾರು ಮೀಸಲಾತಿ ಜಾರಿಮಾಡಬೇಕು ಎಂದು ಆಗ್ರಹಿಸಿದರು.</p>.<p>ರಾಜ್ಯ ಸರ್ಕಾರ ಮೀಸಲಾತಿಯನ್ನು ಶೇ 50ರಿಂದ 70ಕ್ಕೆ ಹೆಚ್ಚಳ ಮಾಡಬೇಕು. ಪರಿಶಿಷ್ಟ ಮೀಸಲಾತಿಯನ್ನು ಶೇ 25ಕ್ಕೆ ನಿಗದಿ ಮಾಡಬೇಕು. ಸಂವಿಧಾನದ 9ನೇ ಪರಿಚ್ಚೇದದಲ್ಲಿ ಸೇರಿಸಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಕಾಯ್ದೆಯ ಕಲಂ 7 (ಡಿ) ರದ್ದು ಮಾಡುವ ಮೂಲಕ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಅನ್ಯ ಯೋಜನೆಗಳ ಬಳಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ಸುಪ್ರೀಂಕೋರ್ಟ್ ತೀರ್ಪಿನಿಂದ ಪರಿಶಿಷ್ಟರ ಭೂ ಪರಭಾರೆ ಕಾಯ್ದೆಯ ಆಶಯಕ್ಕೆ ಧಕ್ಕೆಯಾಗಿದೆ. ಹಾಗಾಗಿ, ರಾಜ್ಯ ಸರ್ಕಾರ ಪಿಟಿಸಿಎಲ್ ಕಾಯ್ದೆಗೆ ಸಮಗ್ರ ತಿದ್ದುಪಡಿ ತರಬೇಕು. ಭೂಮಿ ಕಳೆದುಕೊಳ್ಳುತ್ತಿರುವ ಪರಿಶಿಷ್ಟರಿಗೆ ಕಾನೂನು ರಕ್ಷಣೆ ನೀಡಬೇಕು. ಕೇಂದ್ರ ಸರ್ಕಾರ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p>ಸಮಿತಿಯ ಗೌರವಾಧ್ಯಕ್ಷ ಎಂ.ಎಸ್.ಸಿದ್ಧಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್.ಪ್ರಭು, ಶಿವಮೂರ್ತಿ, ರಾಜಶೇಖರ್, ಮೂರ್ತಿ, ದೇವೇಂದ್ರಪ್ಪ, ಪ್ರಶಾಂತ್, ಹನುಮೇಶ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>