<p><strong>ಸಾಗರ:</strong> ತಾಲ್ಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಒತ್ತಾಯಿಸಿ ನಾಗರಿಕ ವೇದಿಕೆ ಮತ್ತು ಮಾನವ ಹಕ್ಕುಗಳ ಸೇವಾ ಸಮಿತಿ ಪ್ರಮುಖರು ಬುಧವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಲೆ, ಕೊಲೆ ಯತ್ನದಂತಹ ಗಂಭೀರ ಪ್ರಕರಣಗಳಲ್ಲೂ ಆರೋಪಿಗಳನ್ನು ಬಂಧಿಸಲು ಪೊಲೀಸರು ಮೀನಮೇಷ ಎಣಿಸುತ್ತಿರುವುದು ಆತಂಕಕಾರಿ ಸಂಗತಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ರಿಯಲ್ ಎಸ್ಟೇಟ್ ಉದ್ಯಮಿಗಳು ಜನಸಾಮಾನ್ಯರನ್ನು ಬೆದರಿಸುವ, ಸರ್ಕಾರಿ ಭೂಮಿಯನ್ನು ಕಬಳಿಸುವ ಪ್ರಕರಣಗಳು ವರದಿಯಾಗುತ್ತಿವೆ. ಸಮಾಜಘಾತುಕ ಶಕ್ತಿಗಳನ್ನು ಪೊಲೀಸರು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.</p>.<p>ಪ್ರಮುಖರಾದ ಎಂ.ರಾಜಶೇಖರ್, ಸುರೇಶ್ ಕಾರ್ಗಲ್, ಅಣ್ಣಪ್ಪ, ಕೃಷ್ಣಮೂರ್ತಿ, ಶೇಖರ ಶೆಡ್ತಿಕೆರೆ, ಮಹೇಶ್ ಆವಿನಹಳ್ಳಿ, ಸತೀಶ್ ಗೌಡ, ಮುರಳೀಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಾಲ್ಲೂಕಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಒತ್ತಾಯಿಸಿ ನಾಗರಿಕ ವೇದಿಕೆ ಮತ್ತು ಮಾನವ ಹಕ್ಕುಗಳ ಸೇವಾ ಸಮಿತಿ ಪ್ರಮುಖರು ಬುಧವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಲೆ, ಕೊಲೆ ಯತ್ನದಂತಹ ಗಂಭೀರ ಪ್ರಕರಣಗಳಲ್ಲೂ ಆರೋಪಿಗಳನ್ನು ಬಂಧಿಸಲು ಪೊಲೀಸರು ಮೀನಮೇಷ ಎಣಿಸುತ್ತಿರುವುದು ಆತಂಕಕಾರಿ ಸಂಗತಿ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p>.<p>ರಿಯಲ್ ಎಸ್ಟೇಟ್ ಉದ್ಯಮಿಗಳು ಜನಸಾಮಾನ್ಯರನ್ನು ಬೆದರಿಸುವ, ಸರ್ಕಾರಿ ಭೂಮಿಯನ್ನು ಕಬಳಿಸುವ ಪ್ರಕರಣಗಳು ವರದಿಯಾಗುತ್ತಿವೆ. ಸಮಾಜಘಾತುಕ ಶಕ್ತಿಗಳನ್ನು ಪೊಲೀಸರು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.</p>.<p>ಪ್ರಮುಖರಾದ ಎಂ.ರಾಜಶೇಖರ್, ಸುರೇಶ್ ಕಾರ್ಗಲ್, ಅಣ್ಣಪ್ಪ, ಕೃಷ್ಣಮೂರ್ತಿ, ಶೇಖರ ಶೆಡ್ತಿಕೆರೆ, ಮಹೇಶ್ ಆವಿನಹಳ್ಳಿ, ಸತೀಶ್ ಗೌಡ, ಮುರಳೀಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>