<p>ಸಾಗರ: ‘ಪ್ರಸ್ತುತ ದಿನಗಳಲ್ಲಿ ಯುವ ಸಮೂಹದಲ್ಲಿ ಸಾಂಸ್ಕೃತಿಕ ಬರಡುತನ ಕಾಣುತ್ತಿದ್ದು, ಸಾಂಸ್ಕೃತಿಕ ಕ್ರಿಯಾಶೀಲತೆಯ ಮೂಲಕ ಅವುಗಳನ್ನು ನಿವಾರಿಸುವ ಕೆಲಸ ಆಗಬೇಕಿದೆ’ ಎಂದು ರಂಗಕರ್ಮಿ ಪ್ರಸನ್ನ ಹೇಳಿದರು.</p>.<p>ಇಲ್ಲಿನ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ವೇದನಾದ ಪ್ರತಿಷ್ಠಾನ, ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯ ಶುಕ್ರವಾರ ಏರ್ಪಡಿಸಿದ್ದ ರಂಗ ಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜ ಈಗ ಒಡೆದ ಹಾಲಿನಂತಾಗಿದ್ದು, ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ ಸಣ್ಣ ಊರುಗಳಲ್ಲಿ ಸಾಂಸ್ಕೃತಿಕ ಅಭಿರುಚಿ ಮೂಡಿಸುವ ಮೂಲಕವೇ ಇಂತಹ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಾಧ್ಯತೆ ಇದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಕೆ.ವಿ.ಸುಬ್ಬಣ್ಣ ಅವರು ಹೆಗ್ಗೋಡಿನಂತಹ ಸಣ್ಣ ಹಳ್ಳಿಯಲ್ಲಿ ನೀನಾಸಂ ಹುಟ್ಟು ಹಾಕಿದಾಗ ಅದು ದೊಡ್ಡ ಮಟ್ಟಕ್ಕೆ ಬೆಳೆಯುತ್ತದೆ ಎಂಬ ಕಲ್ಪನೆ ಯಾರಿಗೂ ಇರಲಿಲ್ಲ. ಈಗ ಅದರ ಮಹತ್ವ ಏನು ಎಂಬುದು ಗೊತ್ತಾಗುತ್ತಿದೆ. ಇಂತಹ ದೂರದರ್ಶಿತ್ವ ಈಗಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p>‘ಮೊಬೈಲ್ ಗೀಳು ಯುವ ಸಮೂಹವನ್ನು ಕಾಡುತ್ತಿದೆ. ಸಂಗೀತ, ಸಾಹಿತ್ಯ, ರಂಗಭೂಮಿಯಂತಹ ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ತೊಡಗುವಂತೆ ಮಾಡಿದರೆ ಮಾತ್ರ ಸೃಜನಶೀಲ ವ್ಯಕ್ತಿತ್ವ ನಿರ್ಮಿಸಬಹುದು’ ಎಂದರು.</p>.<p>ಸಂಗೀತ ವಿದ್ವಾಂಸ ಪಂಡಿತ್ ಮೋಹನ್ ಹೆಗಡೆ ಹುಣಸೆಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಎಚ್.ಎನ್. ನರಸಿಂಹಮೂರ್ತಿ, ವಸುಧಾ ಶರ್ಮ, ಶ್ರೀರಂಜಿನಿ, ಸಂವತ್ಸರ ಇದ್ದರು.</p>.<p>ವಿದ್ಯಾಲಯದ ವಿದ್ಯಾರ್ಥಿಗಳು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ವಿದ್ವಾನ್ ನಿಖಿಲ್ ವಿ.ಕುಂಸಿ, ಅಜಯ ಹೆಗಡೆ ವರ್ಗಾಸರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-42-1555012349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಪ್ರಸ್ತುತ ದಿನಗಳಲ್ಲಿ ಯುವ ಸಮೂಹದಲ್ಲಿ ಸಾಂಸ್ಕೃತಿಕ ಬರಡುತನ ಕಾಣುತ್ತಿದ್ದು, ಸಾಂಸ್ಕೃತಿಕ ಕ್ರಿಯಾಶೀಲತೆಯ ಮೂಲಕ ಅವುಗಳನ್ನು ನಿವಾರಿಸುವ ಕೆಲಸ ಆಗಬೇಕಿದೆ’ ಎಂದು ರಂಗಕರ್ಮಿ ಪ್ರಸನ್ನ ಹೇಳಿದರು.</p>.<p>ಇಲ್ಲಿನ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ವೇದನಾದ ಪ್ರತಿಷ್ಠಾನ, ಸದ್ಗುರು ಹಿಂದೂಸ್ತಾನಿ ಸಂಗೀತ ವಿದ್ಯಾಲಯ ಶುಕ್ರವಾರ ಏರ್ಪಡಿಸಿದ್ದ ರಂಗ ಗೀತೆಗಳ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜ ಈಗ ಒಡೆದ ಹಾಲಿನಂತಾಗಿದ್ದು, ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ ಸಣ್ಣ ಊರುಗಳಲ್ಲಿ ಸಾಂಸ್ಕೃತಿಕ ಅಭಿರುಚಿ ಮೂಡಿಸುವ ಮೂಲಕವೇ ಇಂತಹ ಪರಿಸ್ಥಿತಿಯನ್ನು ತಿಳಿಗೊಳಿಸುವ ಸಾಧ್ಯತೆ ಇದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ಕೆ.ವಿ.ಸುಬ್ಬಣ್ಣ ಅವರು ಹೆಗ್ಗೋಡಿನಂತಹ ಸಣ್ಣ ಹಳ್ಳಿಯಲ್ಲಿ ನೀನಾಸಂ ಹುಟ್ಟು ಹಾಕಿದಾಗ ಅದು ದೊಡ್ಡ ಮಟ್ಟಕ್ಕೆ ಬೆಳೆಯುತ್ತದೆ ಎಂಬ ಕಲ್ಪನೆ ಯಾರಿಗೂ ಇರಲಿಲ್ಲ. ಈಗ ಅದರ ಮಹತ್ವ ಏನು ಎಂಬುದು ಗೊತ್ತಾಗುತ್ತಿದೆ. ಇಂತಹ ದೂರದರ್ಶಿತ್ವ ಈಗಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.</p>.<p>‘ಮೊಬೈಲ್ ಗೀಳು ಯುವ ಸಮೂಹವನ್ನು ಕಾಡುತ್ತಿದೆ. ಸಂಗೀತ, ಸಾಹಿತ್ಯ, ರಂಗಭೂಮಿಯಂತಹ ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ತೊಡಗುವಂತೆ ಮಾಡಿದರೆ ಮಾತ್ರ ಸೃಜನಶೀಲ ವ್ಯಕ್ತಿತ್ವ ನಿರ್ಮಿಸಬಹುದು’ ಎಂದರು.</p>.<p>ಸಂಗೀತ ವಿದ್ವಾಂಸ ಪಂಡಿತ್ ಮೋಹನ್ ಹೆಗಡೆ ಹುಣಸೆಕೊಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಎಚ್.ಎನ್. ನರಸಿಂಹಮೂರ್ತಿ, ವಸುಧಾ ಶರ್ಮ, ಶ್ರೀರಂಜಿನಿ, ಸಂವತ್ಸರ ಇದ್ದರು.</p>.<p>ವಿದ್ಯಾಲಯದ ವಿದ್ಯಾರ್ಥಿಗಳು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ವಿದ್ವಾನ್ ನಿಖಿಲ್ ವಿ.ಕುಂಸಿ, ಅಜಯ ಹೆಗಡೆ ವರ್ಗಾಸರ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-42-1555012349</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>