<p><strong>ಸಾಗರ</strong>: ‘ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕನ್ನಡದಲ್ಲೇ ಅಳವಡಿಸಬೇಕು’ ಎಂದು ಒತ್ತಾಯಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನವನ್ನು ಹಲವು ಅಂಗಡಿ ಮುಂಗಟ್ಟುಗಳ ಮಾಲೀಕರು ಪಾಲಿಸುತ್ತಿಲ್ಲ. ಸ್ಥಳೀಯ ಆಡಳಿತದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>‘ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕನ್ನಡ ಮಾತನಾಡಲು ಬಾರದ ಹೊರ ರಾಜ್ಯ ಮೂಲದ ಉದ್ಯೋಗಿಗಳೆ ನೇಮಕಗೊಳ್ಳುತ್ತಿದ್ದಾರೆ. ಇದರಿಂದ ಸ್ಥಳೀಯ ಗ್ರಾಹಕರಿಗೆ ತೊಂದರೆ ಉಂಟಾಗುತ್ತಿದೆ. ಕನ್ನಡ ಭಾಷೆ ಗೊತ್ತಿಲ್ಲದವರನ್ನು ಬ್ಯಾಂಕ್ ಗಳಲ್ಲಿ ನೇಮಕ ಮಾಡಿಕೊಳ್ಳಬಾರದು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಪ್ರಮುಖರಾದ ತೀ.ನ.ಶ್ರೀನಿವಾಸ್, ಕುಂಟಗೋಡು ಸೀತಾರಾಮ್, ಎಚ್.ಬಿ.ರಾಘವೇಂದ್ರ, ಸುಧಾಕರ ಕುಗ್ವೆ, ಗಣಪತಿ ಪಡವಗೋಡು, ಷಣ್ಮುಖ ಕೆಂಚಾಳಸರ, ಕುಶ ಕಾಗೋಡು, ಮಹೇಶ್, ಸಂದೀಪ್, ಪುನೀತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮುಂಗಟ್ಟುಗಳ ನಾಮಫಲಕವನ್ನು ಕನ್ನಡದಲ್ಲೇ ಅಳವಡಿಸಬೇಕು’ ಎಂದು ಒತ್ತಾಯಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>‘ಕನ್ನಡದಲ್ಲಿ ನಾಮಫಲಕ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನವನ್ನು ಹಲವು ಅಂಗಡಿ ಮುಂಗಟ್ಟುಗಳ ಮಾಲೀಕರು ಪಾಲಿಸುತ್ತಿಲ್ಲ. ಸ್ಥಳೀಯ ಆಡಳಿತದ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ಈ ಸಂಬಂಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>‘ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಕನ್ನಡ ಮಾತನಾಡಲು ಬಾರದ ಹೊರ ರಾಜ್ಯ ಮೂಲದ ಉದ್ಯೋಗಿಗಳೆ ನೇಮಕಗೊಳ್ಳುತ್ತಿದ್ದಾರೆ. ಇದರಿಂದ ಸ್ಥಳೀಯ ಗ್ರಾಹಕರಿಗೆ ತೊಂದರೆ ಉಂಟಾಗುತ್ತಿದೆ. ಕನ್ನಡ ಭಾಷೆ ಗೊತ್ತಿಲ್ಲದವರನ್ನು ಬ್ಯಾಂಕ್ ಗಳಲ್ಲಿ ನೇಮಕ ಮಾಡಿಕೊಳ್ಳಬಾರದು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮನೋಜ್ ಕುಗ್ವೆ, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್, ಪ್ರಮುಖರಾದ ತೀ.ನ.ಶ್ರೀನಿವಾಸ್, ಕುಂಟಗೋಡು ಸೀತಾರಾಮ್, ಎಚ್.ಬಿ.ರಾಘವೇಂದ್ರ, ಸುಧಾಕರ ಕುಗ್ವೆ, ಗಣಪತಿ ಪಡವಗೋಡು, ಷಣ್ಮುಖ ಕೆಂಚಾಳಸರ, ಕುಶ ಕಾಗೋಡು, ಮಹೇಶ್, ಸಂದೀಪ್, ಪುನೀತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>