<p><strong>ಸಾಗರ: </strong>ಪ್ರತಿ ಗ್ರಾಮಕ್ಕೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ತಾಳಗುಪ್ಪ ಹೋಬಳಿಯ ಗ್ರಾಮಗಳಿಗೆ ನೀರು ಪೂರೈಸುವ ವಿಷಯದಲ್ಲಿ ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. </p>.<p>ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಶರಾವತಿ ನದಿ ಹಿನ್ನೀರಿನಿಂದ ತಾಳಗುಪ್ಪ ಹೋಬಳಿಯ 28 ಗ್ರಾಮ, 105 ಮಜರೆ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶರಾವತಿ ನದಿಯ ಹಿನ್ನೀರಿನಿಂದ ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆ ಚಾಲನೆಗೊಂಡ ನಂತರ ಈ ಮಾರ್ಗ ಮಧ್ಯದ ಗ್ರಾಮಗಳಿಗೂ ನೀರು ಪೂರೈಸಬೇಕು ಎಂದು ಒತ್ತಾಯಿಸಿ 2010ರಲ್ಲಿ ತಾಳಗುಪ್ಪದಿಂದ ಸಾಗರದವರೆಗೆ ನಡೆದ ಪಾದಯಾತ್ರೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈಗ ಆ ಯೋಜನೆಯನ್ನು ಸಚಿವನಾಗಿ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ’ ಎಂದರು.</p>.<p>ರಾಜ್ಯದಾದ್ಯಂತ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ ಅನುಮೋದನೆ ದೊರಕಿದ್ದು ಮುಂದಿನ ತಿಂಗಳು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು. ಈ ಶಾಲೆಗಳ ಆರಂಭದಿಂದ ಈಗಿರುವ ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಯೋಜನೆ ಕಾರ್ಯಗತಗೊಳ್ಳಲು ಶ್ರಮಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲಾಯಿತು. ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ ಹಾಲೇಶ್, ಎಎಸ್ಪಿ ಬೆನಕ ಪ್ರಸಾದ್, ಪ್ರಮುಖರಾದ ಮಂಡಗಳಲೆ ಹುಚ್ಚಪ್ಪ, ಎಚ್.ಎನ್.ದಿವಾಕರ್, ಹೊಳಿಯಪ್ಪ, ಅಣ್ಣಪ್ಪ, ಅನಿಲ್ ಗೌಡ್ರು, ಶಿವಮೂರ್ತಿ ಇದ್ದರು.</p>
<p><strong>ಸಾಗರ: </strong>ಪ್ರತಿ ಗ್ರಾಮಕ್ಕೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ತಾಳಗುಪ್ಪ ಹೋಬಳಿಯ ಗ್ರಾಮಗಳಿಗೆ ನೀರು ಪೂರೈಸುವ ವಿಷಯದಲ್ಲಿ ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. </p>.<p>ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಶರಾವತಿ ನದಿ ಹಿನ್ನೀರಿನಿಂದ ತಾಳಗುಪ್ಪ ಹೋಬಳಿಯ 28 ಗ್ರಾಮ, 105 ಮಜರೆ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶರಾವತಿ ನದಿಯ ಹಿನ್ನೀರಿನಿಂದ ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸುವ ಯೋಜನೆ ಚಾಲನೆಗೊಂಡ ನಂತರ ಈ ಮಾರ್ಗ ಮಧ್ಯದ ಗ್ರಾಮಗಳಿಗೂ ನೀರು ಪೂರೈಸಬೇಕು ಎಂದು ಒತ್ತಾಯಿಸಿ 2010ರಲ್ಲಿ ತಾಳಗುಪ್ಪದಿಂದ ಸಾಗರದವರೆಗೆ ನಡೆದ ಪಾದಯಾತ್ರೆಯಲ್ಲಿ ನಾನು ಪಾಲ್ಗೊಂಡಿದ್ದೆ. ಈಗ ಆ ಯೋಜನೆಯನ್ನು ಸಚಿವನಾಗಿ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ’ ಎಂದರು.</p>.<p>ರಾಜ್ಯದಾದ್ಯಂತ 900 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ ಅನುಮೋದನೆ ದೊರಕಿದ್ದು ಮುಂದಿನ ತಿಂಗಳು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು. ಈ ಶಾಲೆಗಳ ಆರಂಭದಿಂದ ಈಗಿರುವ ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಯೋಜನೆ ಕಾರ್ಯಗತಗೊಳ್ಳಲು ಶ್ರಮಿಸಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸನ್ಮಾನಿಸಲಾಯಿತು. ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ರಶ್ಮಿ ಹಾಲೇಶ್, ಎಎಸ್ಪಿ ಬೆನಕ ಪ್ರಸಾದ್, ಪ್ರಮುಖರಾದ ಮಂಡಗಳಲೆ ಹುಚ್ಚಪ್ಪ, ಎಚ್.ಎನ್.ದಿವಾಕರ್, ಹೊಳಿಯಪ್ಪ, ಅಣ್ಣಪ್ಪ, ಅನಿಲ್ ಗೌಡ್ರು, ಶಿವಮೂರ್ತಿ ಇದ್ದರು.</p>