<p><em>SAGARA</em></p>.<p>ಸಾಗರ: ದೇವಸ್ಥಾನಕ್ಕೆ ಭಕ್ತರು ನೀಡುವ ಹಣ ಸದ್ವಿನಿಯೋಗವಾಗುವಂತೆ ನೋಡಿಕೊಳ್ಳುವುದು ಆಯಾ ದೇವಸ್ಥಾನಗಳ ಆಡಳಿತ ಸಮಿತಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ಇಲ್ಲಿನ ಮಾರಿಕಾಂಬಾ ದೇವಸ್ಥಾನದ ನ್ಯಾಸ ಪ್ರತಿಷ್ಠಾನಕ್ಕೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರನ್ನು ಶನಿವಾರ ಅಭಿನಂದಿಸಿ ಮಾತನಾಡಿದರು.</p>.<p>ಕರ್ನಾಟಕದ ಅತೀ ದೊಡ್ಡ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರಿಕಾಂಬಾ ಜಾತ್ರೆಗೆ ವಿಶಿಷ್ಟವಾದ ಇತಿಹಾಸವಿದೆ. ಈ ಊರಿನ ಅನೇಕ ಗಣ್ಯರು ದೇವಸ್ಥಾನವನ್ನು, ಜಾತ್ರಾ ಮಹೋತ್ಸವವನ್ನು ಕಟ್ಟಿ ಬೆಳೆಸುವಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ ಎಂಬುದನ್ನು ನೆನಪಿಸಿದರು.</p>.<p>ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವ್ಯತಿರಿಕ್ತ ಪರಿಣಾಮ ಭಾರತದ ಮೇಲೆ ಆಗುತ್ತಿದೆ. ಶೀಘ್ರವಾಗಿ ಯುದ್ಧ ಕೊನೆಗೊಂಡು ಶಾಂತಿ ನೆಲೆಸಲಿ ಎಂದು ಮಾರಿಕಾಂಬಾ ದೇವಿಯಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.</p>.<p>ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಎಂ. ನಾಗರಾಜ್, ಉಪಾಧ್ಯಕ್ಷ ಆರ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಂ.ಡಿ. ಆನಂದ್, ಖಜಾಂಚಿ ವಿ. ಶಂಕರ್, ಕಾರ್ಯದರ್ಶಿಗಳಾದ ವಿ. ಗುರು, ಪುರುಷೋತ್ತಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-191901674</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em>SAGARA</em></p>.<p>ಸಾಗರ: ದೇವಸ್ಥಾನಕ್ಕೆ ಭಕ್ತರು ನೀಡುವ ಹಣ ಸದ್ವಿನಿಯೋಗವಾಗುವಂತೆ ನೋಡಿಕೊಳ್ಳುವುದು ಆಯಾ ದೇವಸ್ಥಾನಗಳ ಆಡಳಿತ ಸಮಿತಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದರು.</p>.<p>ಇಲ್ಲಿನ ಮಾರಿಕಾಂಬಾ ದೇವಸ್ಥಾನದ ನ್ಯಾಸ ಪ್ರತಿಷ್ಠಾನಕ್ಕೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರನ್ನು ಶನಿವಾರ ಅಭಿನಂದಿಸಿ ಮಾತನಾಡಿದರು.</p>.<p>ಕರ್ನಾಟಕದ ಅತೀ ದೊಡ್ಡ ಜಾತ್ರೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರಿಕಾಂಬಾ ಜಾತ್ರೆಗೆ ವಿಶಿಷ್ಟವಾದ ಇತಿಹಾಸವಿದೆ. ಈ ಊರಿನ ಅನೇಕ ಗಣ್ಯರು ದೇವಸ್ಥಾನವನ್ನು, ಜಾತ್ರಾ ಮಹೋತ್ಸವವನ್ನು ಕಟ್ಟಿ ಬೆಳೆಸುವಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ ಎಂಬುದನ್ನು ನೆನಪಿಸಿದರು.</p>.<p>ಇರಾನ್–ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವ್ಯತಿರಿಕ್ತ ಪರಿಣಾಮ ಭಾರತದ ಮೇಲೆ ಆಗುತ್ತಿದೆ. ಶೀಘ್ರವಾಗಿ ಯುದ್ಧ ಕೊನೆಗೊಂಡು ಶಾಂತಿ ನೆಲೆಸಲಿ ಎಂದು ಮಾರಿಕಾಂಬಾ ದೇವಿಯಲ್ಲಿ ಪ್ರಾರ್ಥಿಸುವುದಾಗಿ ಅವರು ಹೇಳಿದರು.</p>.<p>ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಎಂ. ನಾಗರಾಜ್, ಉಪಾಧ್ಯಕ್ಷ ಆರ್. ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಂ.ಡಿ. ಆನಂದ್, ಖಜಾಂಚಿ ವಿ. ಶಂಕರ್, ಕಾರ್ಯದರ್ಶಿಗಳಾದ ವಿ. ಗುರು, ಪುರುಷೋತ್ತಮ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-191901674</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>