<p><strong>ಸಾಗರ</strong>: ನಗರವ್ಯಾಪ್ತಿಯಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಇತ್ತೀಚಿನ ದಿನಗಳಲ್ಲಿ ನಗರವ್ಯಾಪ್ತಿಯಲ್ಲಿ ಪದೇ ಪದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರು ಪೂರೈಕೆಗೆ ಅಡ್ಡಿಯಾಗುತ್ತಿದೆ. ಸಾರ್ವಜನಿಕರಿಗೆ ಆಗುತ್ತಿರುವ ಈ ತೊಂದರೆಗೆ ಮೆಸ್ಕಾಂ ಕೂಡಲೇ ಸ್ಪಂದಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>‘ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸಲು ವರದಹಳ್ಳಿ ಫೀಡರ್ಗಳನ್ನು ಬಳಸಲಾಗುತ್ತಿದೆ. ತಾಲ್ಲೂಕಿನ ಆವಿನಹಳ್ಳಿ ಫೀಡರ್ಗೆ ವರದಹಳ್ಳಿ ಫೀಡರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಿರುವುದು ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ. ಕೂಡಲೇ ಈ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ಬಿಜೆಪಿಯ ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್, ಪ್ರಮುಖರಾದ ಆರ್.ಶ್ರೀನಿವಾಸ್ ಮೇಸ್ತ್ರಿ, ಮೈತ್ರಿ ಪಾಟೀಲ್, ಸತೀಶ್ ಕೆ.ಮೊಗವೀರ, ತುಕಾರಾಮ್ ಶೇಟ್, ರಾಜೇಂದ್ರ ಪೈ, ಮಹೇಶ್ ಆರ್. ಪ್ರವೀಣ್, ಪ್ರದೀಪ್ ಆಚಾರಿ, ಚಂದ್ರಕಾಂತ್, ಗಾಯತ್ರಿ, ರತ್ನಾಕರ ಶೇಟ್, ಕೃಷ್ಣ ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ನಗರವ್ಯಾಪ್ತಿಯಲ್ಲಿ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಇಲ್ಲಿನ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>‘ಇತ್ತೀಚಿನ ದಿನಗಳಲ್ಲಿ ನಗರವ್ಯಾಪ್ತಿಯಲ್ಲಿ ಪದೇ ಪದೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಕುಡಿಯುವ ನೀರು ಪೂರೈಕೆಗೆ ಅಡ್ಡಿಯಾಗುತ್ತಿದೆ. ಸಾರ್ವಜನಿಕರಿಗೆ ಆಗುತ್ತಿರುವ ಈ ತೊಂದರೆಗೆ ಮೆಸ್ಕಾಂ ಕೂಡಲೇ ಸ್ಪಂದಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.</p>.<p>‘ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಸಲು ವರದಹಳ್ಳಿ ಫೀಡರ್ಗಳನ್ನು ಬಳಸಲಾಗುತ್ತಿದೆ. ತಾಲ್ಲೂಕಿನ ಆವಿನಹಳ್ಳಿ ಫೀಡರ್ಗೆ ವರದಹಳ್ಳಿ ಫೀಡರ್ ಮೂಲಕ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಂದಾಗಿರುವುದು ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ. ಕೂಡಲೇ ಈ ಬಗ್ಗೆ ಮೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿಸಿದರು.</p>.<p>ಬಿಜೆಪಿಯ ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್, ಪ್ರಮುಖರಾದ ಆರ್.ಶ್ರೀನಿವಾಸ್ ಮೇಸ್ತ್ರಿ, ಮೈತ್ರಿ ಪಾಟೀಲ್, ಸತೀಶ್ ಕೆ.ಮೊಗವೀರ, ತುಕಾರಾಮ್ ಶೇಟ್, ರಾಜೇಂದ್ರ ಪೈ, ಮಹೇಶ್ ಆರ್. ಪ್ರವೀಣ್, ಪ್ರದೀಪ್ ಆಚಾರಿ, ಚಂದ್ರಕಾಂತ್, ಗಾಯತ್ರಿ, ರತ್ನಾಕರ ಶೇಟ್, ಕೃಷ್ಣ ಶೇಟ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>