<p><strong>ಸಾಗರ</strong>: ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ₹ 300 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಆಸ್ಪತ್ರೆಯ ಹಿಂಭಾಗದಲ್ಲಿರುವ ವಸತಿ ಗೃಹಗಳು ಶಿಥಿಲಾವಸ್ಥೆಗೆ ತಲುಪಿವೆ. ಅವುಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು. ಪಕ್ಕದ ತಾಲ್ಲೂಕುಗಳಿಂದಲೂ ಇಲ್ಲಿನ ಆಸ್ಪತ್ರೆಗೆ ರೋಗಿಗಳು ಬರುವುದರಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>‘ನಗರವ್ಯಾಪ್ತಿಯಲ್ಲಿ ₹ 70 ಕೋಟಿ ವೆಚ್ಚದಲ್ಲಿ ನಡೆದಿರುವ ಒಳಚರಂಡಿ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದನ್ನು ಪೂರ್ಣಗೊಳಿಸಲು ಸರ್ಕಾರದಿಂದ ಹೆಚ್ಚುವರಿಯಾಗಿ ₹ 20 ಕೋಟಿ ಮಂಜೂರು ಮಾಡಿಸಿದ್ದೇನೆ’ ಎಂದು ತಿಳಿಸಿದರು.</p>.<p>ನಗರವ್ಯಾಪ್ತಿಯ ಜನರಿಗೆ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಮಾಡುವ ಸಂಬಂಧ ₹ 275 ಕೋಟಿ ವೆಚ್ಚದಲ್ಲಿ ಹೊಸದಾಗಿ ಪೈಪ್ಲೈನ್ ಅಳವಡಿಸಲಾಗುವುದು. ಈಗಿರುವ ಪೈಪ್ಲೈನ್ ಹಳೆಯದಾಗಿರುವುದರಿಂದ ಶರಾವತಿ ಹಿನ್ನೀರಿನಿಂದ ನೀರು ತರುತ್ತಿದ್ದರೂ ಸಮರ್ಪಕವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್, ಸರ್ಕಾರಿ ಆಸ್ಪತ್ರೆ ವೈದ್ಯ ಕೆ. ಪರಪ್ಪ, ನೀರು, ನೈರ್ಮಲ್ಯ ಇಲಾಖೆ ಅಧಿಕಾರಿ ಗುರುಕೃಷ್ಣ ಶೆಣೈ, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ. ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯದಿಂದ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.</p>.<p>ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ₹ 300 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಹೇಳಿದರು.</p>.<p>ಆಸ್ಪತ್ರೆಯ ಹಿಂಭಾಗದಲ್ಲಿರುವ ವಸತಿ ಗೃಹಗಳು ಶಿಥಿಲಾವಸ್ಥೆಗೆ ತಲುಪಿವೆ. ಅವುಗಳನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು. ಪಕ್ಕದ ತಾಲ್ಲೂಕುಗಳಿಂದಲೂ ಇಲ್ಲಿನ ಆಸ್ಪತ್ರೆಗೆ ರೋಗಿಗಳು ಬರುವುದರಿಂದ ಆಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>‘ನಗರವ್ಯಾಪ್ತಿಯಲ್ಲಿ ₹ 70 ಕೋಟಿ ವೆಚ್ಚದಲ್ಲಿ ನಡೆದಿರುವ ಒಳಚರಂಡಿ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಇದನ್ನು ಪೂರ್ಣಗೊಳಿಸಲು ಸರ್ಕಾರದಿಂದ ಹೆಚ್ಚುವರಿಯಾಗಿ ₹ 20 ಕೋಟಿ ಮಂಜೂರು ಮಾಡಿಸಿದ್ದೇನೆ’ ಎಂದು ತಿಳಿಸಿದರು.</p>.<p>ನಗರವ್ಯಾಪ್ತಿಯ ಜನರಿಗೆ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಮಾಡುವ ಸಂಬಂಧ ₹ 275 ಕೋಟಿ ವೆಚ್ಚದಲ್ಲಿ ಹೊಸದಾಗಿ ಪೈಪ್ಲೈನ್ ಅಳವಡಿಸಲಾಗುವುದು. ಈಗಿರುವ ಪೈಪ್ಲೈನ್ ಹಳೆಯದಾಗಿರುವುದರಿಂದ ಶರಾವತಿ ಹಿನ್ನೀರಿನಿಂದ ನೀರು ತರುತ್ತಿದ್ದರೂ ಸಮರ್ಪಕವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಸಾದ್, ಸರ್ಕಾರಿ ಆಸ್ಪತ್ರೆ ವೈದ್ಯ ಕೆ. ಪರಪ್ಪ, ನೀರು, ನೈರ್ಮಲ್ಯ ಇಲಾಖೆ ಅಧಿಕಾರಿ ಗುರುಕೃಷ್ಣ ಶೆಣೈ, ಶಾಸಕರ ವಿಶೇಷ ಕರ್ತವ್ಯಾಧಿಕಾರಿ ಟಿ.ಪಿ. ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>