<p><strong>ಸಾಗರ: ಅಂಗನವಾಡಿಗಳಿಗೆ ಬರುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸುತ್ತಲಿನ ಪರಿಸರದ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಮುಖ್ಯವಾದ ಸಂಗತಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </strong></p>.<p><strong>ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಾರ್ಡ್ ನಂ.7 ಮತ್ತು 11ರಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. </strong></p>.<p><strong>ಸರ್ಕಾರ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಈ ಹಣ ದುರ್ಬಳಕೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಜೊತೆಗೆ ನಿರ್ಮಾಣವಾದ ಕಟ್ಟಡದ ನಿರ್ವಹಣೆ ಸಹ ಸೂಕ್ತ ರೀತಿಯಲ್ಲಿರಬೇಕು ಎಂದು ಅವರು ಕಿವಿಮಾತು ಹೇಳಿದರು.</strong></p>.<p><strong>ರಾಜ್ಯದಲ್ಲಿ 700 ಜನರಿಗೆ ಒಬ್ಬ ಪೌರ ಕಾರ್ಮಿಕ ಇದ್ದಾರೆ. 500 ಜನರಿಗೆ ಒಬ್ಬ ಪೌರ ಕಾರ್ಮಿಕನನ್ನು ನಿಯೋಜನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಪಕ್ಷಪಾತ ಇಲ್ಲದೆ ನಗರವ್ಯಾಪ್ತಿಯ ಎಲ್ಲ ವಾರ್ಡ್ಗಳಿಗೂ ಸಮರ್ಪಕವಾಗಿ ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದರು.</strong></p>.<p><strong> ನಗರಸಭೆ ಸದಸ್ಯರಾದ ಮಧುರಾ ಶಿವಾನಂದ್, ಗಣಪತಿ ಮಂಡಗಳಲೆ, ಭಾವನಾ ಸಂತೋಷ್, ಕೆ.ಆರ್.ಗಣೇಶ್ ಪ್ರಸಾದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷ್ ಕುಮಾರ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಬಿ.ವಿ.ರವೀಂದ್ರನಾಥ್, ಗುರುರಾಜ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಅಂಗನವಾಡಿಗಳಿಗೆ ಬರುವ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸುತ್ತಲಿನ ಪರಿಸರದ ಗುಣಮಟ್ಟವನ್ನು ಕಾಯ್ದುಕೊಳ್ಳುವುದು ಮುಖ್ಯವಾದ ಸಂಗತಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </strong></p>.<p><strong>ಇಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಾರ್ಡ್ ನಂ.7 ಮತ್ತು 11ರಲ್ಲಿ ನಿರ್ಮಿಸಿರುವ ನೂತನ ಅಂಗನವಾಡಿ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. </strong></p>.<p><strong>ಸರ್ಕಾರ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡುತ್ತಿದೆ. ಈ ಹಣ ದುರ್ಬಳಕೆಯಾಗದಂತೆ ನೋಡಿಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಜೊತೆಗೆ ನಿರ್ಮಾಣವಾದ ಕಟ್ಟಡದ ನಿರ್ವಹಣೆ ಸಹ ಸೂಕ್ತ ರೀತಿಯಲ್ಲಿರಬೇಕು ಎಂದು ಅವರು ಕಿವಿಮಾತು ಹೇಳಿದರು.</strong></p>.<p><strong>ರಾಜ್ಯದಲ್ಲಿ 700 ಜನರಿಗೆ ಒಬ್ಬ ಪೌರ ಕಾರ್ಮಿಕ ಇದ್ದಾರೆ. 500 ಜನರಿಗೆ ಒಬ್ಬ ಪೌರ ಕಾರ್ಮಿಕನನ್ನು ನಿಯೋಜನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಪಕ್ಷಪಾತ ಇಲ್ಲದೆ ನಗರವ್ಯಾಪ್ತಿಯ ಎಲ್ಲ ವಾರ್ಡ್ಗಳಿಗೂ ಸಮರ್ಪಕವಾಗಿ ಅನುದಾನ ನೀಡಲಾಗುವುದು ಎಂದು ಅವರು ತಿಳಿಸಿದರು.</strong></p>.<p><strong> ನಗರಸಭೆ ಸದಸ್ಯರಾದ ಮಧುರಾ ಶಿವಾನಂದ್, ಗಣಪತಿ ಮಂಡಗಳಲೆ, ಭಾವನಾ ಸಂತೋಷ್, ಕೆ.ಆರ್.ಗಣೇಶ್ ಪ್ರಸಾದ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಂತೋಷ್ ಕುಮಾರ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಪ್ರಮುಖರಾದ ಬಿ.ವಿ.ರವೀಂದ್ರನಾಥ್, ಗುರುರಾಜ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>