<p><strong>ಸಾಗರ: ಸಕಾಲದಲ್ಲಿ ಚುನಾವಣೆಗಳನ್ನು ನಡೆಸದೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಯಾವುದೆ ವ್ಯತ್ಯಾಸ ಇಲ್ಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ.</strong></p>.<p><strong>ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಅಧಿಕಾರದ ಅವಧಿ 2021ರಲ್ಲೆ ಮುಗಿದಿದೆ. ಮೀಸಲಾತಿ ನಿಗದಿ, ಕ್ಷೇತ್ರ ಮರು ವಿಂಗಡಣೆ ನೆಪದಲ್ಲಿ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಚುನಾವಣೆ ಮುಂದಕ್ಕೆ ಹಾಕಿತ್ತು. ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.</strong></p>.<p><strong>ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ 5 ವರ್ಷಗಳ ಅಧಿಕಾರದ ಅವಧಿ ಮುಗಿದ ತಕ್ಷಣ ಚುನಾವಣೆ ನಡೆಸಬೇಕು ಎಂದು ಸಂವಿಧಾನದ 73 ಮತ್ತು 74 ನೇ ವಿಧಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷವೆ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರುತ್ತಿದೆ ಎಂದು ಅವರು ಆರೋಪಿಸಿದರು.</strong></p>.<p><strong>ಚುನಾವಣಾ ಆಯೋಗ ಹಲವು ಬಾರಿ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರೂ ಅದನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಜೊತೆಗೆ 400ಕ್ಕೂ ಹೆಚ್ಚು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಗಿದು 9 ತಿಂಗಳು ಕಳೆದಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆ ಮಾಡದೆ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಟೀಕಿಸಿದರು.</strong></p>.<p><strong>ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಶೀಘ್ರದಲ್ಲೆ ವಿವಿಧ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಸಕಾಲದಲ್ಲಿ ಚುನಾವಣೆಗಳನ್ನು ನಡೆಸದೆ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಈ ವಿಷಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಯಾವುದೆ ವ್ಯತ್ಯಾಸ ಇಲ್ಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ.</strong></p>.<p><strong>ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಅಧಿಕಾರದ ಅವಧಿ 2021ರಲ್ಲೆ ಮುಗಿದಿದೆ. ಮೀಸಲಾತಿ ನಿಗದಿ, ಕ್ಷೇತ್ರ ಮರು ವಿಂಗಡಣೆ ನೆಪದಲ್ಲಿ ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಚುನಾವಣೆ ಮುಂದಕ್ಕೆ ಹಾಕಿತ್ತು. ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದರು.</strong></p>.<p><strong>ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ 5 ವರ್ಷಗಳ ಅಧಿಕಾರದ ಅವಧಿ ಮುಗಿದ ತಕ್ಷಣ ಚುನಾವಣೆ ನಡೆಸಬೇಕು ಎಂದು ಸಂವಿಧಾನದ 73 ಮತ್ತು 74 ನೇ ವಿಧಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷವೆ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರುತ್ತಿದೆ ಎಂದು ಅವರು ಆರೋಪಿಸಿದರು.</strong></p>.<p><strong>ಚುನಾವಣಾ ಆಯೋಗ ಹಲವು ಬಾರಿ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರೂ ಅದನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಜೊತೆಗೆ 400ಕ್ಕೂ ಹೆಚ್ಚು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಗಿದು 9 ತಿಂಗಳು ಕಳೆದಿದ್ದರೂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಘೋಷಣೆ ಮಾಡದೆ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಟೀಕಿಸಿದರು.</strong></p>.<p><strong>ಪಂಚಾಯತ್ ರಾಜ್ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಶೀಘ್ರದಲ್ಲೆ ವಿವಿಧ ಜನಪರ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>