ಸಾಗರ: ನಗರದ ಜೈನ ಮಂದಿರದ ವಿಗ್ರಹಕ್ಕೆ ತೊಡಿಸಿದ್ದ ಚಿನ್ನದ ಸರವನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿರಿವಂತೆ ಗ್ರಾಮದ ಶಿವಕುಮಾರ್ ಎಂಬಾತನನ್ನು ನಗರ ಠಾಣೆ ಪೊಲೀಸರು ಬಂದಿಸಿದ್ದಾರೆ.
ಬಂಧಿತ ಆರೋಪಿ ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ನಗರದ ಸಂಗಮೇಶ್ವರ ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿರುವ ವಿಷಯ ಕೂಡ ಬೆಳಕಿಗೆ ಬಂದಿದೆ.ಚಿನ್ನದ ಸರ ಹಾಗೂ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.