<p><strong>ಸಾಗರ: ರಾಷ್ಟ್ರೀಯ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅವರಲ್ಲಿ ಶ್ರಮ ಸಂಸ್ಕೃತಿಯ ಬಗ್ಗೆ ಅರಿವು ಮೂಡುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಅಣ್ಣಪ್ಪ ಹೇಳಿದರು. </strong></p>.<p><strong>ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಶಿರವಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</strong></p>.<p><strong>ಗ್ರಾಮೀಣ ಬದುಕಿನ ಪರಿಚಯ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಇಲ್ಲವಾಗಿದೆ. ಗ್ರಾಮೀಣ ಭಾಗದಲ್ಲಿ ಎನ್ಎಸ್ಎಸ್ ಶಿಬಿರ ನಡೆಯುವುದರಿಂದ ಗ್ರಾಮೀಣ ಬದುಕು ಹಾಗೂ ಅಲ್ಲಿನ ಸಂಸ್ಕೃತಿಯನ್ನು ಹತ್ತಿರದಿಂದ ನೋಡುವ ಅವಕಾಶ ಲಭ್ಯವಾಗುತ್ತದೆ ಎಂದು ಅವರು ಹೇಳಿದರು.</strong></p>.<p><strong>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ ಎಚ್., ಎನ್ಎಸ್ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅಭಿರುಚಿ ಬೆಳೆಯುವ ಮೂಲಕ ಅವರ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.</strong></p>.<p><strong>ಪ್ರಮುಖರಾದ ಹರೀಶ್ ಬಿ.ಎಚ್., ತುಕಾರಾಂ ಶಿರವಾಳ, ಲಕ್ಷ್ಮಿ ಟಿ.ಜಿ. ಸತೀಶ್ ಟಿ. ತಳವಾರ, ಸುನಂದಾ, ಸರಸ್ವತಿ, ಮಧು ಮಾಲತಿ, ಸಂತೋಷ್ ಕುಮಾರ್, ಅರ್ಪಿತಾ ಪಾಟೀಲ್, ಮಹಾಬಲೇಶ್ವರ ಕೆ.ಎನ್. ಶಿವಾನಂದ ಭಟ್ , ಬಿ.ಲೋಕೇಶಪ್ಪ, ಸೋಮಶೇಖರ ಬಿ. ರಂಗನಾಥ್, ರಂಜನ್ , ಉಷಾ ಎನ್. ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ರಾಷ್ಟ್ರೀಯ ಯೋಜನೆ ಶಿಬಿರಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಅವರಲ್ಲಿ ಶ್ರಮ ಸಂಸ್ಕೃತಿಯ ಬಗ್ಗೆ ಅರಿವು ಮೂಡುತ್ತದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಅಣ್ಣಪ್ಪ ಹೇಳಿದರು. </strong></p>.<p><strong>ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಶಿರವಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ಶಿಬಿರವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.</strong></p>.<p><strong>ಗ್ರಾಮೀಣ ಬದುಕಿನ ಪರಿಚಯ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಇಲ್ಲವಾಗಿದೆ. ಗ್ರಾಮೀಣ ಭಾಗದಲ್ಲಿ ಎನ್ಎಸ್ಎಸ್ ಶಿಬಿರ ನಡೆಯುವುದರಿಂದ ಗ್ರಾಮೀಣ ಬದುಕು ಹಾಗೂ ಅಲ್ಲಿನ ಸಂಸ್ಕೃತಿಯನ್ನು ಹತ್ತಿರದಿಂದ ನೋಡುವ ಅವಕಾಶ ಲಭ್ಯವಾಗುತ್ತದೆ ಎಂದು ಅವರು ಹೇಳಿದರು.</strong></p>.<p><strong>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರಾಜೇಶ್ವರಿ ಎಚ್., ಎನ್ಎಸ್ಎಸ್ ಶಿಬಿರಗಳಿಂದ ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅಭಿರುಚಿ ಬೆಳೆಯುವ ಮೂಲಕ ಅವರ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.</strong></p>.<p><strong>ಪ್ರಮುಖರಾದ ಹರೀಶ್ ಬಿ.ಎಚ್., ತುಕಾರಾಂ ಶಿರವಾಳ, ಲಕ್ಷ್ಮಿ ಟಿ.ಜಿ. ಸತೀಶ್ ಟಿ. ತಳವಾರ, ಸುನಂದಾ, ಸರಸ್ವತಿ, ಮಧು ಮಾಲತಿ, ಸಂತೋಷ್ ಕುಮಾರ್, ಅರ್ಪಿತಾ ಪಾಟೀಲ್, ಮಹಾಬಲೇಶ್ವರ ಕೆ.ಎನ್. ಶಿವಾನಂದ ಭಟ್ , ಬಿ.ಲೋಕೇಶಪ್ಪ, ಸೋಮಶೇಖರ ಬಿ. ರಂಗನಾಥ್, ರಂಜನ್ , ಉಷಾ ಎನ್. ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>