<p><strong>ಸಾಗರ: ‘ಜಾಗತಿಕ ತಾಪಮಾನ ಹೆಚ್ಚುತ್ತಿರುವುದು ಪರಿಸರ ನಮಗೆ ನೀಡುತ್ತಿರುವ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ಪರಿಸರ, ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಹೇಳಿದರು. </strong></p>.<p><strong>ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನವು ಡಾ.ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>ಭಾರತ ಸೇರಿದಂತೆ ಪ್ರಪಂಚದ ವಿವಿಧ ರಾಷ್ಟ್ರಗಳಲ್ಲಿ ಜಾಗತಿಕ ತಾಪಮಾನದಲ್ಲಿ ತೀವ್ರ ಏರುಪೇರು ಕಾಣುತ್ತಿದೆ. ಇವುಗಳಲ್ಲದೆ ಎಲ್ಲೆಡೆ ಜರುಗುತ್ತಿರುವ ಹವಾಮಾನ ವೈಪರಿತ್ಯದ ಪರಿಣಾಮಗಳನ್ನು ನಾವು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ತಿಳಿಸಿದರು.</strong></p>.<p><strong>ಪ್ರಪಂಚದ ಯಾವುದೊ ಮೂಲೆಯಲ್ಲಿ ಪರಿಸರಕ್ಕೆ ಸಂಬಂಧಪಟ್ಟಂತೆ ಅವಘಡ ನಡೆದರೆ ಅದು ನಮಗೆ ಸಂಬಂಧಿಸಿದ್ದಲ್ಲ ಎಂದು ಭಾವಿಸುವುದು ಸರಿಯಲ್ಲ. ಅಂತಹ ಅವಘಡಗಳು ಭವಿಷ್ಯದಲ್ಲಿ ನಾವು ನೆಲೆಸಿರುವ ಪ್ರದೇಶಕ್ಕೂ ಧಾವಿಸಬಹುದು ಎಂಬ ಮುಂಜಾಗ್ರತೆ ನಮ್ಮಲ್ಲಿರಬೇಕು ಎಂದು ಅವರು ಕಿವಿಮಾತು ಹೇಳಿದರು.</strong></p>.<p><strong>ಶಿಕ್ಷಣ ಕ್ಷೇತ್ರದಲ್ಲಿರುವವರು ಪರಿಸರದ ಅಸಮತೋಲನದ ಕುರಿತು ಪ್ರಪಂಚದಲ್ಲಿ ಘಟಿಸುತ್ತಿರುವ ಪ್ರತಿಯೊಂದು ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಅವುಗಳನ್ನು ವಿದ್ಯಾರ್ಥಿ ಯುವಜನರಿಗೆ ದಾಟಿಸುವ ಕೆಲಸ ಮಾಡಬೇಕು ಎಂದು ಅವರು ಕೋರಿದರು. </strong></p>.<p><strong>ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಕೋಶಾಧಿಕಾರಿ ಕವಲಕೋಡು ವೆಂಕಟೇಶ್, ಸಹಕಾರ್ಯದರ್ಶಿ ಸತ್ಯನಾರಾಯಣ, ಪ್ರಾಂಶುಪಾಲರಾದ ಶಿಲ್ಪಾ, ಲಕ್ಷ್ಮೀಶ್ ಎ.ಎಸ್. ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ‘ಜಾಗತಿಕ ತಾಪಮಾನ ಹೆಚ್ಚುತ್ತಿರುವುದು ಪರಿಸರ ನಮಗೆ ನೀಡುತ್ತಿರುವ ಎಚ್ಚರಿಕೆಯ ಗಂಟೆಯಾಗಿದೆ’ ಎಂದು ಪರಿಸರ, ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಹೇಳಿದರು. </strong></p>.<p><strong>ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನವು ಡಾ.ಜಿ.ಎ.ನಾರಿಬೋಲಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಈಚೆಗೆ ಏರ್ಪಡಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</strong></p>.<p><strong>ಭಾರತ ಸೇರಿದಂತೆ ಪ್ರಪಂಚದ ವಿವಿಧ ರಾಷ್ಟ್ರಗಳಲ್ಲಿ ಜಾಗತಿಕ ತಾಪಮಾನದಲ್ಲಿ ತೀವ್ರ ಏರುಪೇರು ಕಾಣುತ್ತಿದೆ. ಇವುಗಳಲ್ಲದೆ ಎಲ್ಲೆಡೆ ಜರುಗುತ್ತಿರುವ ಹವಾಮಾನ ವೈಪರಿತ್ಯದ ಪರಿಣಾಮಗಳನ್ನು ನಾವು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ತಿಳಿಸಿದರು.</strong></p>.<p><strong>ಪ್ರಪಂಚದ ಯಾವುದೊ ಮೂಲೆಯಲ್ಲಿ ಪರಿಸರಕ್ಕೆ ಸಂಬಂಧಪಟ್ಟಂತೆ ಅವಘಡ ನಡೆದರೆ ಅದು ನಮಗೆ ಸಂಬಂಧಿಸಿದ್ದಲ್ಲ ಎಂದು ಭಾವಿಸುವುದು ಸರಿಯಲ್ಲ. ಅಂತಹ ಅವಘಡಗಳು ಭವಿಷ್ಯದಲ್ಲಿ ನಾವು ನೆಲೆಸಿರುವ ಪ್ರದೇಶಕ್ಕೂ ಧಾವಿಸಬಹುದು ಎಂಬ ಮುಂಜಾಗ್ರತೆ ನಮ್ಮಲ್ಲಿರಬೇಕು ಎಂದು ಅವರು ಕಿವಿಮಾತು ಹೇಳಿದರು.</strong></p>.<p><strong>ಶಿಕ್ಷಣ ಕ್ಷೇತ್ರದಲ್ಲಿರುವವರು ಪರಿಸರದ ಅಸಮತೋಲನದ ಕುರಿತು ಪ್ರಪಂಚದಲ್ಲಿ ಘಟಿಸುತ್ತಿರುವ ಪ್ರತಿಯೊಂದು ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗ್ರಹಿಸಿ ಅವುಗಳನ್ನು ವಿದ್ಯಾರ್ಥಿ ಯುವಜನರಿಗೆ ದಾಟಿಸುವ ಕೆಲಸ ಮಾಡಬೇಕು ಎಂದು ಅವರು ಕೋರಿದರು. </strong></p>.<p><strong>ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ.ಶಿವಕುಮಾರ್, ಕೋಶಾಧಿಕಾರಿ ಕವಲಕೋಡು ವೆಂಕಟೇಶ್, ಸಹಕಾರ್ಯದರ್ಶಿ ಸತ್ಯನಾರಾಯಣ, ಪ್ರಾಂಶುಪಾಲರಾದ ಶಿಲ್ಪಾ, ಲಕ್ಷ್ಮೀಶ್ ಎ.ಎಸ್. ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>