<p>ಸಾಗರ:<strong> ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಡಿ ಸ್ವತ್ತು ಕಳೆದುಕೊಳ್ಳುವ ಕುಟುಂಬದ ಸದಸ್ಯರಿಗೆ ಪರಿಹಾರದ ಜೊತೆ ಉದ್ಯೋಗಾವಕಾಶವನ್ನೂ ಕಲ್ಪಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.</strong></p>.<p><strong>ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಭೂಮಿ ಕಳೆದುಕೊಳ್ಳಲಿರುವ ಬಗರ್ ಹುಕುಂ ಸಾಗುವಳಿದಾರರಿಗೂ ಪರಿಹಾರ ನೀಡಲಾಗುವುದು. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.</strong></p>.<p><strong>₹8,644 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದ್ದು 2,000 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಯೋಜನೆಯಿಂದ 8 ಎಕರೆ ಪ್ರದೇಶದಲ್ಲಿರುವ ನಿವಾಸಿಗಳು ಸಂತ್ರಸ್ತರಾಗಲಿದ್ದಾರೆ. 54 ಎಕರೆ ಅರಣ್ಯ ಪ್ರದೇಶಕ್ಕೆ ತೊಂದರೆಯಾಗಲಿದ್ದು ಇದರ ಬದಲಿ ಅರಣ್ಯ ಬೆಳೆಸುವ ಮೂಲಕ ನಷ್ಟವನ್ನು ಸರಿದೂಗಿಸಲಾಗುವುದು ಎಂದು ತಿಳಿಸಿದರು.</strong></p>.<p><strong>ಯೋಜನೆಗೆ ಪರ-ವಿರೋಧ ಎರಡೂ ಅಭಿಪ್ರಾಯಗಳಿವೆ. ಹೆದ್ದಾರಿ ವಿಸ್ತರಣೆ ಸಂದರ್ಭದಲ್ಲಿ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ಅನಿವಾರ್ಯವಾಗಿತ್ತು. ಮುಂದಿನ ಪೀಳಿಗೆಗೆ ಅಗತ್ಯದಷ್ಟು ವಿದ್ಯುತ್ ಪೂರೈಕೆ ಮಾಡಲು ಇಂತಹ ಯೋಜನೆಗಳ ಅನುಷ್ಠಾನ ಅನಿವಾರ್ಯ ಎಂದು ಪ್ರತಿಪಾದಿಸಿದರು.</strong></p>.<p><strong>ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.</strong></p>.<p class="Briefhead"><strong>ಮನವಿ ಸಲ್ಲಿಕೆ: </strong></p>.<p><strong>ಇದೇ ಸಂದರ್ಭದಲ್ಲಿ ಪರಿಸರ ಕಾರ್ಯಕರ್ತರು ಯೋಜನೆ ಅನುಷ್ಠಾನ ವಿರೋಧಿಸಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಶರಾವತಿ ಪಂಪ್ಡ್ ಯೋಜನೆ ವಿನಾಶಕಾರಿಯಾಗಿದ್ದು ಶರಾವತಿ ನದಿಗೆ ಈ ಯೋಜನೆ ಸಂಚಕಾರ ತರಲಿದೆ. ಪರಿಸರ ಇಲಾಖೆ ಅನುಮತಿ ಪಡೆಯದೇ ಭೂ ಸ್ವಾಧೀನ ಪ್ರಕ್ರಿಯೆ ನಡೆಸುವುದು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.</strong></p>.<p><strong>ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ, ಇಂಧನ ತಜ್ಞ ಶಂಕರ ಶರ್ಮ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ:<strong> ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಡಿ ಸ್ವತ್ತು ಕಳೆದುಕೊಳ್ಳುವ ಕುಟುಂಬದ ಸದಸ್ಯರಿಗೆ ಪರಿಹಾರದ ಜೊತೆ ಉದ್ಯೋಗಾವಕಾಶವನ್ನೂ ಕಲ್ಪಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.</strong></p>.<p><strong>ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಭೂಮಿ ಕಳೆದುಕೊಳ್ಳಲಿರುವ ಬಗರ್ ಹುಕುಂ ಸಾಗುವಳಿದಾರರಿಗೂ ಪರಿಹಾರ ನೀಡಲಾಗುವುದು. ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.</strong></p>.<p><strong>₹8,644 ಕೋಟಿ ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದ್ದು 2,000 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಯೋಜನೆಯಿಂದ 8 ಎಕರೆ ಪ್ರದೇಶದಲ್ಲಿರುವ ನಿವಾಸಿಗಳು ಸಂತ್ರಸ್ತರಾಗಲಿದ್ದಾರೆ. 54 ಎಕರೆ ಅರಣ್ಯ ಪ್ರದೇಶಕ್ಕೆ ತೊಂದರೆಯಾಗಲಿದ್ದು ಇದರ ಬದಲಿ ಅರಣ್ಯ ಬೆಳೆಸುವ ಮೂಲಕ ನಷ್ಟವನ್ನು ಸರಿದೂಗಿಸಲಾಗುವುದು ಎಂದು ತಿಳಿಸಿದರು.</strong></p>.<p><strong>ಯೋಜನೆಗೆ ಪರ-ವಿರೋಧ ಎರಡೂ ಅಭಿಪ್ರಾಯಗಳಿವೆ. ಹೆದ್ದಾರಿ ವಿಸ್ತರಣೆ ಸಂದರ್ಭದಲ್ಲಿ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಕಡಿಯುವುದು ಅನಿವಾರ್ಯವಾಗಿತ್ತು. ಮುಂದಿನ ಪೀಳಿಗೆಗೆ ಅಗತ್ಯದಷ್ಟು ವಿದ್ಯುತ್ ಪೂರೈಕೆ ಮಾಡಲು ಇಂತಹ ಯೋಜನೆಗಳ ಅನುಷ್ಠಾನ ಅನಿವಾರ್ಯ ಎಂದು ಪ್ರತಿಪಾದಿಸಿದರು.</strong></p>.<p><strong>ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.</strong></p>.<p class="Briefhead"><strong>ಮನವಿ ಸಲ್ಲಿಕೆ: </strong></p>.<p><strong>ಇದೇ ಸಂದರ್ಭದಲ್ಲಿ ಪರಿಸರ ಕಾರ್ಯಕರ್ತರು ಯೋಜನೆ ಅನುಷ್ಠಾನ ವಿರೋಧಿಸಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಶರಾವತಿ ಪಂಪ್ಡ್ ಯೋಜನೆ ವಿನಾಶಕಾರಿಯಾಗಿದ್ದು ಶರಾವತಿ ನದಿಗೆ ಈ ಯೋಜನೆ ಸಂಚಕಾರ ತರಲಿದೆ. ಪರಿಸರ ಇಲಾಖೆ ಅನುಮತಿ ಪಡೆಯದೇ ಭೂ ಸ್ವಾಧೀನ ಪ್ರಕ್ರಿಯೆ ನಡೆಸುವುದು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.</strong></p>.<p><strong>ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ, ಇಂಧನ ತಜ್ಞ ಶಂಕರ ಶರ್ಮ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>