<p>ಸಾಗರ: ‘ಇಲ್ಲಿನ ನಗರಸಭೆಗೆ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಜಿಲ್ಲಾಧಿಕಾರಿ, ಆರು ತಿಂಗಳಲ್ಲಿ ಒಮ್ಮೆಯೂ ಭೇಟಿ ನೀಡಿ ಸಭೆ ನಡೆಸಿಲ್ಲ’ ಎಂದು ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ</p>.<p>‘ಶರಾವತಿ ನದಿ ಹಿನ್ನೀರಿನಿಂದ ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದರೆ, ದಿನದ 24 ಗಂಟೆ ನೀರು ಪೂರೈಸುವ ಭರವಸೆ ಕೇವಲ ಕಾಗದದ ಮೇಲೆ ಉಳಿದಿದೆ. ಇಂತಹ ಗಂಭೀರ ವಿಷಯದ ಕುರಿತು ಆಡಳಿತಾಧಿಕಾರಿ ಗಮನ ಹರಿಸಬೇಕು’ ಎಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.</p>.<p>‘ನಗರದ ಮಾರ್ಕೆಟ್ ರಸ್ತೆ ವಿಸ್ತರಣೆ ಕಾರ್ಯ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅನೇಕ ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಶೀಘ್ರವೇ ವಿಸ್ತರಣೆ ಕಾರ್ಯ ನಡೆಸುವುದಾಗಿ ಹೇಳಿದ್ದಾರೆ. ಆದರೆ ಇನ್ನೂ ಕೆಲಸ ಆಗಿಲ್ಲ’ ಎಂದು ದೂರಿದ್ದಾರೆ.</p>.<p>‘ನಗರವ್ಯಾಪ್ತಿಯಲ್ಲಿ ಒಳ ಚರಂಡಿ ಕಾಮಗಾರಿ ಆರಂಭಗೊಂಡು 15 ವರ್ಷ ಕಳೆದಿವೆ. ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಡೆಯದೆ ಯೋಜನೆ ಆಮೆಗತಿಯಲ್ಲಿ ಸಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-42-749308563</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಇಲ್ಲಿನ ನಗರಸಭೆಗೆ ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಜಿಲ್ಲಾಧಿಕಾರಿ, ಆರು ತಿಂಗಳಲ್ಲಿ ಒಮ್ಮೆಯೂ ಭೇಟಿ ನೀಡಿ ಸಭೆ ನಡೆಸಿಲ್ಲ’ ಎಂದು ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್ ಆರೋಪಿಸಿದ್ದಾರೆ</p>.<p>‘ಶರಾವತಿ ನದಿ ಹಿನ್ನೀರಿನಿಂದ ಸಾಗರ ನಗರಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆದರೆ, ದಿನದ 24 ಗಂಟೆ ನೀರು ಪೂರೈಸುವ ಭರವಸೆ ಕೇವಲ ಕಾಗದದ ಮೇಲೆ ಉಳಿದಿದೆ. ಇಂತಹ ಗಂಭೀರ ವಿಷಯದ ಕುರಿತು ಆಡಳಿತಾಧಿಕಾರಿ ಗಮನ ಹರಿಸಬೇಕು’ ಎಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.</p>.<p>‘ನಗರದ ಮಾರ್ಕೆಟ್ ರಸ್ತೆ ವಿಸ್ತರಣೆ ಕಾರ್ಯ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಅನೇಕ ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಶೀಘ್ರವೇ ವಿಸ್ತರಣೆ ಕಾರ್ಯ ನಡೆಸುವುದಾಗಿ ಹೇಳಿದ್ದಾರೆ. ಆದರೆ ಇನ್ನೂ ಕೆಲಸ ಆಗಿಲ್ಲ’ ಎಂದು ದೂರಿದ್ದಾರೆ.</p>.<p>‘ನಗರವ್ಯಾಪ್ತಿಯಲ್ಲಿ ಒಳ ಚರಂಡಿ ಕಾಮಗಾರಿ ಆರಂಭಗೊಂಡು 15 ವರ್ಷ ಕಳೆದಿವೆ. ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಡೆಯದೆ ಯೋಜನೆ ಆಮೆಗತಿಯಲ್ಲಿ ಸಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-42-749308563</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>