<p>ಸಾಗರ: ‘ನಗರ ವ್ಯಾಪ್ತಿಯ ವಿವಿಧ ವಾರ್ಡ್ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಶಾಸಕರ ಅನುದಾನದಡಿ ₹5 ಕೋಟಿ, ಹೆಚ್ಚುವರಿಯಾಗಿ ₹ 2 ಕೋಟಿ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.</p>.<p>ಇಲ್ಲಿನ ಜೋಸೆಫ್ ನಗರ ಬಡಾವಣೆಯಲ್ಲಿ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗಣಪತಿ ಕೆರೆ ಪಕ್ಕದ ಶಾಶ್ವತ ಧ್ವಜ ಸ್ತಂಭದ ಬಳಿ ₹2 ಕೋಟಿ ವೆಚ್ಚದಲ್ಲಿ ಉದ್ಯಾನ, ನಗರದ ನಾಲ್ಕು ದಿಕ್ಕುಗಳಲ್ಲಿ ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಈ ವರ್ಷ ಹಿಂದಿನ ವರ್ಷಗಳಿಗಿಂತಲೂ ಹೆಚ್ಚು ಬಿಸಿಲಿದೆ. ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು’ ಎಂದು ಮನವಿ ಮಾಡಿದರು.</p>.<p>ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಯೋಜನಾ ಪ್ರಾಧಿಕಾರದ ಸದಸ್ಯ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಮಧು ಮಾಲತಿ, ಮರಿಯಾ ಲೀಮಾ, ಗಣಪತಿ ಮಂಡಗಳಲೆ, ಡಿ.ದಿನೇಶ್, ಮೈಕೆಲ್ ಡಿಸೋಜ, ಮಹಾಬಲೇಶ್ವರ ಶೇಟ್, ಆರ್ಥರ್ ಗೋಮ್ಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-42-1696313649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ನಗರ ವ್ಯಾಪ್ತಿಯ ವಿವಿಧ ವಾರ್ಡ್ಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಶಾಸಕರ ಅನುದಾನದಡಿ ₹5 ಕೋಟಿ, ಹೆಚ್ಚುವರಿಯಾಗಿ ₹ 2 ಕೋಟಿ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.</p>.<p>ಇಲ್ಲಿನ ಜೋಸೆಫ್ ನಗರ ಬಡಾವಣೆಯಲ್ಲಿ ನಗರೋತ್ಥಾನ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>‘ಗಣಪತಿ ಕೆರೆ ಪಕ್ಕದ ಶಾಶ್ವತ ಧ್ವಜ ಸ್ತಂಭದ ಬಳಿ ₹2 ಕೋಟಿ ವೆಚ್ಚದಲ್ಲಿ ಉದ್ಯಾನ, ನಗರದ ನಾಲ್ಕು ದಿಕ್ಕುಗಳಲ್ಲಿ ಫುಡ್ ಕೋರ್ಟ್ ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಈ ವರ್ಷ ಹಿಂದಿನ ವರ್ಷಗಳಿಗಿಂತಲೂ ಹೆಚ್ಚು ಬಿಸಿಲಿದೆ. ಕುಡಿಯುವ ನೀರಿನ ಕೊರತೆಯಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು’ ಎಂದು ಮನವಿ ಮಾಡಿದರು.</p>.<p>ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ, ಯೋಜನಾ ಪ್ರಾಧಿಕಾರದ ಸದಸ್ಯ ಐ.ಎನ್.ಸುರೇಶ್ ಬಾಬು, ಪ್ರಮುಖರಾದ ಮಧು ಮಾಲತಿ, ಮರಿಯಾ ಲೀಮಾ, ಗಣಪತಿ ಮಂಡಗಳಲೆ, ಡಿ.ದಿನೇಶ್, ಮೈಕೆಲ್ ಡಿಸೋಜ, ಮಹಾಬಲೇಶ್ವರ ಶೇಟ್, ಆರ್ಥರ್ ಗೋಮ್ಸ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-42-1696313649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>