<p><strong>ಸಾಗರ</strong>: ‘ಅಂಗವಿಕಲರಿಗೆ ನೆರವಾಗುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದು ಮಾನವೀಯ ಮೌಲ್ಯ ಎತ್ತಿ ಹಿಡಿಯುವ ಕೆಲಸವಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಲಯನ್ಸ್ ಸಂಸ್ಥೆಯು ಶಂಕರ ಮಠ, ಕೇಂದ್ರ ಸರ್ಕಾರದ ದಿವ್ಯಾಂಗ ವ್ಯಕ್ತಿಗಳ ಕೌಶಲಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಇಲಾಖೆಯ ಸಂಯುಕ್ತ ಪ್ರಾದೇಶಿಕ ಕೇಂದ್ರದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಸಾಧನ, ಸಲಕರಣೆ, ಉಪಕರಣಗಳನ್ನು ವಿತರಿಸಿ ಮಾತನಾಡಿದರು.</p>.<p>‘ಅಂಗವಿಕಲರ ಬಗ್ಗೆ ಅನುಕಂಪ ತೋರುವುದರಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ದೈಹಿಕವಾಗಿ ದುರ್ಬಲರಾಗಿರುವ ಅವರನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕಿದೆ. ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದರು.</p>.<p>‘ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತಷ್ಟು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸುವ ಅವಶ್ಯಕತೆ ಇದೆ. ಇಲ್ಲಿನ ಲಯನ್ಸ್ ಸಂಸ್ಥೆ ಈ ಭಾಗದ 167 ಅಂಗವಿಕಲರಿಗೆ ₹ 1.27 ಕೋಟಿ ಮೌಲ್ಯದ ಸಲಕರಣೆಗಳನ್ನು ವಿತರಿಸುವ ಮೂಲಕ ಸಮಾಜಮುಖಿಯಾಗಿ ಹೆಜ್ಜೆ ಇಟ್ಟಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಜಯಂತ್, ಸಿಆರ್ಸಿ ಸಂಸ್ಥೆಯ ನಿರ್ದೇಶಕ ಮಾರುತಿ ಕೃಷ್ಣಗೌಡ, ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ, ಪ್ರಮುಖರಾದ ಅಶ್ವಿನಿಕುಮಾರ್, ಸ್ವಪ್ನ ಸುರೇಶ್, ಆರ್.ಜಿ.ಶ್ರೀನಿವಾಸ್ ಮೂರ್ತಿ, ಎಸ್.ಐ.ಬಿರಾದಾರ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಸುರೇಶ್, ಸುವರ್ಣ ನಾಯ್ಕ, ಟಿ.ವಿ.ಪಾಂಡುರಂಗ, ಈ.ನಾಗರಾಜ್, ಎಚ್.ಎಸ್.ಮಂಜಪ್ಪ, ಈಳಿ ಶ್ರೀಧರ್, ಅಶೋಕ್ ಬೇಳೂರು, ಆಲ್ಬರ್ಟ್ ವಿಕ್ಟರ್ ಫರ್ನಾಂಡಿಸ್, ಎಸ್.ಬಿ.ಮಹಾದೇವ್, ಸುಧೀರ್ ಕುಮಾರ್ ಶೆಟ್ಟಿ, ಕೆ.ಜಿ.ಗುರುಲಿಂಗಯ್ಯ, ಪ್ರಭಾಕರ್ ಜೈನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-42-1343067563</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ‘ಅಂಗವಿಕಲರಿಗೆ ನೆರವಾಗುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವುದು ಮಾನವೀಯ ಮೌಲ್ಯ ಎತ್ತಿ ಹಿಡಿಯುವ ಕೆಲಸವಾಗಿದೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.</p>.<p>ಇಲ್ಲಿನ ಶೃಂಗೇರಿ ಶಂಕರ ಮಠದಲ್ಲಿ ಲಯನ್ಸ್ ಸಂಸ್ಥೆಯು ಶಂಕರ ಮಠ, ಕೇಂದ್ರ ಸರ್ಕಾರದ ದಿವ್ಯಾಂಗ ವ್ಯಕ್ತಿಗಳ ಕೌಶಲಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಇಲಾಖೆಯ ಸಂಯುಕ್ತ ಪ್ರಾದೇಶಿಕ ಕೇಂದ್ರದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಸಾಧನ, ಸಲಕರಣೆ, ಉಪಕರಣಗಳನ್ನು ವಿತರಿಸಿ ಮಾತನಾಡಿದರು.</p>.<p>‘ಅಂಗವಿಕಲರ ಬಗ್ಗೆ ಅನುಕಂಪ ತೋರುವುದರಿಂದ ಯಾವುದೇ ಪ್ರಯೋಜನವಿಲ್ಲ. ಬದಲಾಗಿ ದೈಹಿಕವಾಗಿ ದುರ್ಬಲರಾಗಿರುವ ಅವರನ್ನು ಮಾನಸಿಕವಾಗಿ ಗಟ್ಟಿಗೊಳಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕಿದೆ. ಈ ನಿಟ್ಟಿನಲ್ಲಿ ಲಯನ್ಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದರು.</p>.<p>‘ಅಂಗವಿಕಲರ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತಷ್ಟು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸುವ ಅವಶ್ಯಕತೆ ಇದೆ. ಇಲ್ಲಿನ ಲಯನ್ಸ್ ಸಂಸ್ಥೆ ಈ ಭಾಗದ 167 ಅಂಗವಿಕಲರಿಗೆ ₹ 1.27 ಕೋಟಿ ಮೌಲ್ಯದ ಸಲಕರಣೆಗಳನ್ನು ವಿತರಿಸುವ ಮೂಲಕ ಸಮಾಜಮುಖಿಯಾಗಿ ಹೆಜ್ಜೆ ಇಟ್ಟಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಜಯಂತ್, ಸಿಆರ್ಸಿ ಸಂಸ್ಥೆಯ ನಿರ್ದೇಶಕ ಮಾರುತಿ ಕೃಷ್ಣಗೌಡ, ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ, ಪ್ರಮುಖರಾದ ಅಶ್ವಿನಿಕುಮಾರ್, ಸ್ವಪ್ನ ಸುರೇಶ್, ಆರ್.ಜಿ.ಶ್ರೀನಿವಾಸ್ ಮೂರ್ತಿ, ಎಸ್.ಐ.ಬಿರಾದಾರ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿದರು.</p>.<p>ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಸುರೇಶ್, ಸುವರ್ಣ ನಾಯ್ಕ, ಟಿ.ವಿ.ಪಾಂಡುರಂಗ, ಈ.ನಾಗರಾಜ್, ಎಚ್.ಎಸ್.ಮಂಜಪ್ಪ, ಈಳಿ ಶ್ರೀಧರ್, ಅಶೋಕ್ ಬೇಳೂರು, ಆಲ್ಬರ್ಟ್ ವಿಕ್ಟರ್ ಫರ್ನಾಂಡಿಸ್, ಎಸ್.ಬಿ.ಮಹಾದೇವ್, ಸುಧೀರ್ ಕುಮಾರ್ ಶೆಟ್ಟಿ, ಕೆ.ಜಿ.ಗುರುಲಿಂಗಯ್ಯ, ಪ್ರಭಾಕರ್ ಜೈನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-42-1343067563</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>