<p>ಸಾಗರ: ಇಲ್ಲಿನ ಲಯನ್ಸ್ ಸಂಸ್ಥೆಯು ಅಂಗವಿಕಲರಿಗೆ ಸಾಧನಾ ಸಲಕರಣೆಗಳನ್ನು ವಿತರಿಸುತ್ತಿದ್ದು, ಈ ಸಂಬಂಧ ಮಾಹಿತಿ ಸಂಗ್ರಹ ಹಾಗೂ ಹೆಸರು ನೋಂದಣಿ ಕಾರ್ಯಕ್ರಮ ಏ.27 ರಂದು ಬೆಳಿಗ್ಗೆ 9.30ಕ್ಕೆ ನೆಹರೂ ಮೈದಾನದಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ.</p>.<p>ಶೃಂಗೇರಿ ಶಂಕರ ಮಠ, ದಿವ್ಯಾಂಗ ವ್ಯಕ್ತಿಗಳ ಕೌಶಲಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ. ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>₹3 ಕೋಟಿ ವೆಚ್ಚದಲ್ಲಿ ಸಾಧನಾ ಸಲಕರಣೆಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಈಗಾಗಲೆ 266 ಅಂಗವಿಕಲರನ್ನು ಆರೋಗ್ಯ ಇಲಾಖೆಯ ಮೂಲಕ ಗುರುತಿಸಲಾಗಿದೆ. ನೋಂದಣಿಗೆ ಬರುವವರು ಆಧಾರ್ ಕಾರ್ಡ್, ಪಡಿತರ ಚೀಟಿ, ಯುಡಿಐಡಿ ಸಂಖ್ಯೆ, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು ಎಂದು ಮಾಹಿತಿ ನೀಡಿದ್ದಾರೆ.</p>.<p>ಶ್ರವಣ ಸಾಧನ, ಎಲೆಕ್ಟ್ರಿಕ್ ತ್ರಿಚಕ್ರ ವಾಹನ, ಕೃತಕ ಕಾಲು, ಕೈ ಸೇರಿದಂತೆ ವಿವಿಧ ಸಾಧನಾ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಲಯನ್ಸ್ ಸಂಸ್ಥೆಯ ಪ್ರಮುಖರಾದ ಅಶ್ವಿನಿಕುಮಾರ್, ಈಳಿ ಶ್ರೀಧರ್, ಈ.ನಾಗರಾಜ್, ಟಿ.ವಿ.ಪಾಂಡುರಂಗ, ಸುಧೀರ್ ಶೆಟ್ಟಿ, ಸುರೇಶ್ ಎನ್. ಗುರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-42-986351418</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಇಲ್ಲಿನ ಲಯನ್ಸ್ ಸಂಸ್ಥೆಯು ಅಂಗವಿಕಲರಿಗೆ ಸಾಧನಾ ಸಲಕರಣೆಗಳನ್ನು ವಿತರಿಸುತ್ತಿದ್ದು, ಈ ಸಂಬಂಧ ಮಾಹಿತಿ ಸಂಗ್ರಹ ಹಾಗೂ ಹೆಸರು ನೋಂದಣಿ ಕಾರ್ಯಕ್ರಮ ಏ.27 ರಂದು ಬೆಳಿಗ್ಗೆ 9.30ಕ್ಕೆ ನೆಹರೂ ಮೈದಾನದಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಲಿದೆ.</p>.<p>ಶೃಂಗೇರಿ ಶಂಕರ ಮಠ, ದಿವ್ಯಾಂಗ ವ್ಯಕ್ತಿಗಳ ಕೌಶಲಾಭಿವೃದ್ಧಿ ಪುನರ್ವಸತಿ ಮತ್ತು ಸಬಲೀಕರಣ ಕೇಂದ್ರದ ಸಹಯೋಗದೊಂದಿಗೆ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ. ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.</p>.<p>₹3 ಕೋಟಿ ವೆಚ್ಚದಲ್ಲಿ ಸಾಧನಾ ಸಲಕರಣೆಗಳನ್ನು ವಿತರಿಸಲು ತೀರ್ಮಾನಿಸಲಾಗಿದೆ. ಈಗಾಗಲೆ 266 ಅಂಗವಿಕಲರನ್ನು ಆರೋಗ್ಯ ಇಲಾಖೆಯ ಮೂಲಕ ಗುರುತಿಸಲಾಗಿದೆ. ನೋಂದಣಿಗೆ ಬರುವವರು ಆಧಾರ್ ಕಾರ್ಡ್, ಪಡಿತರ ಚೀಟಿ, ಯುಡಿಐಡಿ ಸಂಖ್ಯೆ, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತರಬೇಕು ಎಂದು ಮಾಹಿತಿ ನೀಡಿದ್ದಾರೆ.</p>.<p>ಶ್ರವಣ ಸಾಧನ, ಎಲೆಕ್ಟ್ರಿಕ್ ತ್ರಿಚಕ್ರ ವಾಹನ, ಕೃತಕ ಕಾಲು, ಕೈ ಸೇರಿದಂತೆ ವಿವಿಧ ಸಾಧನಾ ಸಲಕರಣೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.</p>.<p>ಲಯನ್ಸ್ ಸಂಸ್ಥೆಯ ಪ್ರಮುಖರಾದ ಅಶ್ವಿನಿಕುಮಾರ್, ಈಳಿ ಶ್ರೀಧರ್, ಈ.ನಾಗರಾಜ್, ಟಿ.ವಿ.ಪಾಂಡುರಂಗ, ಸುಧೀರ್ ಶೆಟ್ಟಿ, ಸುರೇಶ್ ಎನ್. ಗುರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-42-986351418</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>