<p><strong>ಸಾಗರ:</strong> ‘ಉತ್ತಮ ಶಿಕ್ಷಣದಿಂದ ಗಳಿಸುವ ಸಾಧನೆಗೆ ಎಂದಿಗೂ ಅಡ್ಡಿ, ಆತಂಕಗಳು ಇರುವುದಿಲ್ಲ’ ಎಂದು ಬೆಂಗಳೂರಿನ ಅನ್ ಲಾಗ್ ಡಿವೈಸಸ್ ಸಂಸ್ಥೆಯ ಎಂಜಿನಿಯರ್ ನಿಶಾಂತ್ ಹೇಳಿದರು.</p>.<p>ಇಲ್ಲಿನ ಎಂಡಿಎಫ್ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪೋಷಕರಿಗಾಗಿ, ಉಪನ್ಯಾಸಕರಿಗಾಗಿ ಓದುತ್ತೇನೆ ಎನ್ನುವ ಬದಲು ನನ್ನ ಭವಿಷ್ಯಕ್ಕಾಗಿ, ಒಳಿತಿಗಾಗಿ ಶ್ರಮ ಪಡುತ್ತೇನೆ ಎಂಬ ಮನೋಭಾವ ವಿದ್ಯಾರ್ಥಿಗಳಿಗೆ ಬೇಕಾಗಿದೆ’ ಎಂದರು.</p>.<p>ಶೈಕ್ಷಣಿಕ ಸಾಧನೆಯ ಹಾದಿಯಲ್ಲಿ ಹಲವು ತೊಡಕುಗಳು ಎದುರಾಗುತ್ತವೆ. ಕೆಲವೊಮ್ಮೆ ಗೊಂದಲಗಳಿಗೆ ಯಾವ ಪರಿಹಾರ ಕಂಡುಕೊಳ್ಳಬೇಕು ಎಂಬ ಜಿಜ್ಞಾಸೆಯೂ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸರಿಯಾದ ಹಾದಿಯನ್ನು ಕಂಡುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಭಾರತ ಅಭಿವೃದ್ಧಿಶೀಲ ದೇಶವಾಗಿದ್ದು, ಉದ್ಯಮಗಳು ಬೆಳೆಯುತ್ತಿರುವುದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ಉದ್ಯೋಗಗಳಿಗೆ ಅಗತ್ಯವಾದ ಕೌಶಲಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಶಿವಕುಮಾರ್ ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲ ಜಗದೀಶ್ ಎಂ. ಭಂಡಾರಿ, ಶ್ರೀಧರ ರಾವ್, ಸತ್ಯನಾರಾಯಣ ಎಂ.ಆರ್. ಇದ್ದರು. ಶಿಲ್ಪಾ ಸ್ವಾಗತಿಸಿ, ಸಾರಿಕಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-42-1849361494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ಉತ್ತಮ ಶಿಕ್ಷಣದಿಂದ ಗಳಿಸುವ ಸಾಧನೆಗೆ ಎಂದಿಗೂ ಅಡ್ಡಿ, ಆತಂಕಗಳು ಇರುವುದಿಲ್ಲ’ ಎಂದು ಬೆಂಗಳೂರಿನ ಅನ್ ಲಾಗ್ ಡಿವೈಸಸ್ ಸಂಸ್ಥೆಯ ಎಂಜಿನಿಯರ್ ನಿಶಾಂತ್ ಹೇಳಿದರು.</p>.<p>ಇಲ್ಲಿನ ಎಂಡಿಎಫ್ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಪೋಷಕರಿಗಾಗಿ, ಉಪನ್ಯಾಸಕರಿಗಾಗಿ ಓದುತ್ತೇನೆ ಎನ್ನುವ ಬದಲು ನನ್ನ ಭವಿಷ್ಯಕ್ಕಾಗಿ, ಒಳಿತಿಗಾಗಿ ಶ್ರಮ ಪಡುತ್ತೇನೆ ಎಂಬ ಮನೋಭಾವ ವಿದ್ಯಾರ್ಥಿಗಳಿಗೆ ಬೇಕಾಗಿದೆ’ ಎಂದರು.</p>.<p>ಶೈಕ್ಷಣಿಕ ಸಾಧನೆಯ ಹಾದಿಯಲ್ಲಿ ಹಲವು ತೊಡಕುಗಳು ಎದುರಾಗುತ್ತವೆ. ಕೆಲವೊಮ್ಮೆ ಗೊಂದಲಗಳಿಗೆ ಯಾವ ಪರಿಹಾರ ಕಂಡುಕೊಳ್ಳಬೇಕು ಎಂಬ ಜಿಜ್ಞಾಸೆಯೂ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸರಿಯಾದ ಹಾದಿಯನ್ನು ಕಂಡುಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಭಾರತ ಅಭಿವೃದ್ಧಿಶೀಲ ದೇಶವಾಗಿದ್ದು, ಉದ್ಯಮಗಳು ಬೆಳೆಯುತ್ತಿರುವುದರಿಂದ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿವೆ. ಉದ್ಯೋಗಗಳಿಗೆ ಅಗತ್ಯವಾದ ಕೌಶಲಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು ಎಂದು ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಶಿವಕುಮಾರ್ ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲ ಜಗದೀಶ್ ಎಂ. ಭಂಡಾರಿ, ಶ್ರೀಧರ ರಾವ್, ಸತ್ಯನಾರಾಯಣ ಎಂ.ಆರ್. ಇದ್ದರು. ಶಿಲ್ಪಾ ಸ್ವಾಗತಿಸಿ, ಸಾರಿಕಾ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-42-1849361494</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>