<p>ಸಾಗರ: ‘ಯಾವ ಬೆಳೆಗೆ ಯಾವ ಪ್ರದೇಶದಲ್ಲಿ, ಯಾವ ಸಮಯದಲ್ಲಿ, ಯಾವ ರೀತಿಯ ರಸಗೊಬ್ಬರವನ್ನು ಯಾವ ಪ್ರಮಾಣದಲ್ಲಿ ಬಳಸಬೇಕು ಎಂಬ ಬಗ್ಗೆ ಪ್ರತಿಯೊಬ್ಬ ರೈತರು ಎಚ್ಚರ ವಹಿಸಬೇಕು’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಮಂಗಳವಾರ ಏರ್ಪಡಿಸಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಬಿತ್ತನೆ ಬೀಜ, ರಸಗೊಬ್ಬರಗಳು ಲಭ್ಯವಾಗುತ್ತಿರುವ ಈ ಕಾಲಘಟ್ಟದಲ್ಲಿ ಇವುಗಳ ಬಳಕೆಯ ಕುರಿತು ಕೃಷಿಕರಿಗೆ ಅರಿವು ಮೂಡಿಸುವ ಜವಾಬ್ದಾರಿ ಕೃಷಿ ಇಲಾಖೆಯ ಮೇಲಿದೆ’ ಎಂದು ಕಿವಿಮಾತು ಹೇಳಿದರು.</p>.<p>‘ಅಧಿಕ ಇಳುವರಿ ಪಡೆಯುವ ಜೊತೆಗೆ ಕೃಷಿಭೂಮಿ ಮಣ್ಣಿನ ಸಾರವನ್ನು ಉಳಿಸಿಕೊಳ್ಳಲು ಅನುಕೂಲವಾಗುವ ಗೊಬ್ಬರಗಳನ್ನು ಬಳಸುವುದು ಅಗತ್ಯವಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಬಿ.ಎಲ್.ಶಿವಪ್ರಕಾಶ್ ತಿಳಿಸಿದರು.</p>.<p>ಕೃಷಿಕ ಸಮಾಜದ ಅಧ್ಯಕ್ಷ ವಿ.ವಿ.ಶ್ರೀಧರ್, ಕಾರ್ಯದರ್ಶಿ ಗಣಪತಿ ಹೆನಗೆರೆ, ಲೋಕೇಶ್, ರವೀಂದ್ರ, ಸಿ.ಆರ್.ವೀರಪ್ಪ, ಮಿಂಗನಗೌಡ, ವಿನಾಯಕ ರಾವ್ ಬೇಳೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-42-1276673725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಯಾವ ಬೆಳೆಗೆ ಯಾವ ಪ್ರದೇಶದಲ್ಲಿ, ಯಾವ ಸಮಯದಲ್ಲಿ, ಯಾವ ರೀತಿಯ ರಸಗೊಬ್ಬರವನ್ನು ಯಾವ ಪ್ರಮಾಣದಲ್ಲಿ ಬಳಸಬೇಕು ಎಂಬ ಬಗ್ಗೆ ಪ್ರತಿಯೊಬ್ಬ ರೈತರು ಎಚ್ಚರ ವಹಿಸಬೇಕು’ ಎಂದು ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ ಹೇಳಿದರು.</p>.<p>ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೃಷಿ ಇಲಾಖೆ ಸಮತೋಲಿತ ರಸಗೊಬ್ಬರ ಬಳಕೆ ಕುರಿತು ಮಂಗಳವಾರ ಏರ್ಪಡಿಸಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಬಿತ್ತನೆ ಬೀಜ, ರಸಗೊಬ್ಬರಗಳು ಲಭ್ಯವಾಗುತ್ತಿರುವ ಈ ಕಾಲಘಟ್ಟದಲ್ಲಿ ಇವುಗಳ ಬಳಕೆಯ ಕುರಿತು ಕೃಷಿಕರಿಗೆ ಅರಿವು ಮೂಡಿಸುವ ಜವಾಬ್ದಾರಿ ಕೃಷಿ ಇಲಾಖೆಯ ಮೇಲಿದೆ’ ಎಂದು ಕಿವಿಮಾತು ಹೇಳಿದರು.</p>.<p>‘ಅಧಿಕ ಇಳುವರಿ ಪಡೆಯುವ ಜೊತೆಗೆ ಕೃಷಿಭೂಮಿ ಮಣ್ಣಿನ ಸಾರವನ್ನು ಉಳಿಸಿಕೊಳ್ಳಲು ಅನುಕೂಲವಾಗುವ ಗೊಬ್ಬರಗಳನ್ನು ಬಳಸುವುದು ಅಗತ್ಯವಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಇಒ ಬಿ.ಎಲ್.ಶಿವಪ್ರಕಾಶ್ ತಿಳಿಸಿದರು.</p>.<p>ಕೃಷಿಕ ಸಮಾಜದ ಅಧ್ಯಕ್ಷ ವಿ.ವಿ.ಶ್ರೀಧರ್, ಕಾರ್ಯದರ್ಶಿ ಗಣಪತಿ ಹೆನಗೆರೆ, ಲೋಕೇಶ್, ರವೀಂದ್ರ, ಸಿ.ಆರ್.ವೀರಪ್ಪ, ಮಿಂಗನಗೌಡ, ವಿನಾಯಕ ರಾವ್ ಬೇಳೂರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-42-1276673725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>