<p>ಸಾಗರ: ‘ಮಲೆನಾಡಿನ ಜನರು ಅರಣ್ಯ ಇಲಾಖೆ ಎಂದರೆ ಬೆಚ್ಚಿ ಬೀಳುವಂತಾಗಿದೆ. ಹೀಗಿರುವಾಗ ಪರಿಭಾವಿತ ಅರಣ್ಯ ಪ್ರದೇಶದ ಸರ್ವೆಗೆ ಏಕಾಏಕಿ ಮುಂದಾಗದೆ ಗ್ರಾಮಸ್ಥರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಮೊದಲು ಮಾಹಿತಿ ನೀಡಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು.</p>.<p>ಪರಿಭಾವಿತ ಅರಣ್ಯ ಪ್ರದೇಶ ಗುರುತಿಸುವ ಸಂಬಂಧ ಬುಧವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಮುಂದಾಗಿದ್ದಾರೆ. ಹೀಗೆ ಗುರುತಿಸುವಾಗ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ತಿಳಿಸಿದರು.</p>.<p>‘ಸರ್ವೆಗಿಂತ ಮೊದಲು ಗ್ರಾಮಾಂತರ ಪ್ರದೇಶದಲ್ಲಿ ಧ್ವನಿವರ್ಧಕದ ಮೂಲಕ ಸ್ಥಳೀಯರಿಗೆ ಮಾಹಿತಿ ನೀಡಬೇಕು. ಗ್ರಾಮಸಭೆ ಕರೆದು ಅಲ್ಲಿ ವಿಷಯವನ್ನು ಮಂಡಿಸಬೇಕು ಎಂದು ಸರ್ಕಾರದ ಸುತ್ತೋಲೆ ಇದೆ’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.</p>.<p>‘ಕೇಂದ್ರ ಸರ್ಕಾರ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದಿದ್ದು 1996ನೇ ಸಾಲಿಗಿಂತ ಮೊದಲು ಅರಣ್ಯದ ಸ್ವರೂಪವನ್ನು ಕಳೆದುಕೊಂಡಿರುವ, ಅದಕ್ಕಿಂತ ಮೊದಲು ಯಾವುದೇ ಸರ್ಕಾರದ ಸಂಸ್ಥೆಯಿಂದ ಮಂಜೂರಾಗಿರುವ ಅರಣ್ಯ ಭೂಮಿ ಅರಣ್ಯವೇ ಅಲ್ಲವೆಂದು ತಿದ್ದುಪಡಿಯಲ್ಲಿ ಹೇಳಲಾಗಿದೆ. ಈ ಅಂಶವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪರಿಭಾವಿತ ಅರಣ್ಯದ ಕುರಿತು ಕೇವಲ ಮಾಹಿತಿ ಸಂಗ್ರಹಿಸಿ ಅಂಕಿ– ಅಂಶಗಳ ಸಮೇತ ವರದಿ ನೀಡಲಾಗುವುದು. ಯಾರನ್ನೂ ಒಕ್ಕಲೆಬ್ಬಿಸುವುದಕ್ಕೆ ಮುಂದಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸ್ಪಷ್ಟಪಡಿಸಿದರು.</p>.<p>ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ಪ್ರದೀಪ್, ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-42-265856091</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಮಲೆನಾಡಿನ ಜನರು ಅರಣ್ಯ ಇಲಾಖೆ ಎಂದರೆ ಬೆಚ್ಚಿ ಬೀಳುವಂತಾಗಿದೆ. ಹೀಗಿರುವಾಗ ಪರಿಭಾವಿತ ಅರಣ್ಯ ಪ್ರದೇಶದ ಸರ್ವೆಗೆ ಏಕಾಏಕಿ ಮುಂದಾಗದೆ ಗ್ರಾಮಸ್ಥರಿಗೆ, ಸ್ಥಳೀಯ ಜನಪ್ರತಿನಿಧಿಗಳಿಗೆ ಮೊದಲು ಮಾಹಿತಿ ನೀಡಬೇಕು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು.</p>.<p>ಪರಿಭಾವಿತ ಅರಣ್ಯ ಪ್ರದೇಶ ಗುರುತಿಸುವ ಸಂಬಂಧ ಬುಧವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ಅಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸುಪ್ರೀಂ ಕೋರ್ಟ್ನ ನಿರ್ದೇಶನದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಮುಂದಾಗಿದ್ದಾರೆ. ಹೀಗೆ ಗುರುತಿಸುವಾಗ ರಾಜ್ಯ ಸರ್ಕಾರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ತಿಳಿಸಿದರು.</p>.<p>‘ಸರ್ವೆಗಿಂತ ಮೊದಲು ಗ್ರಾಮಾಂತರ ಪ್ರದೇಶದಲ್ಲಿ ಧ್ವನಿವರ್ಧಕದ ಮೂಲಕ ಸ್ಥಳೀಯರಿಗೆ ಮಾಹಿತಿ ನೀಡಬೇಕು. ಗ್ರಾಮಸಭೆ ಕರೆದು ಅಲ್ಲಿ ವಿಷಯವನ್ನು ಮಂಡಿಸಬೇಕು ಎಂದು ಸರ್ಕಾರದ ಸುತ್ತೋಲೆ ಇದೆ’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.</p>.<p>‘ಕೇಂದ್ರ ಸರ್ಕಾರ ಅರಣ್ಯ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತಂದಿದ್ದು 1996ನೇ ಸಾಲಿಗಿಂತ ಮೊದಲು ಅರಣ್ಯದ ಸ್ವರೂಪವನ್ನು ಕಳೆದುಕೊಂಡಿರುವ, ಅದಕ್ಕಿಂತ ಮೊದಲು ಯಾವುದೇ ಸರ್ಕಾರದ ಸಂಸ್ಥೆಯಿಂದ ಮಂಜೂರಾಗಿರುವ ಅರಣ್ಯ ಭೂಮಿ ಅರಣ್ಯವೇ ಅಲ್ಲವೆಂದು ತಿದ್ದುಪಡಿಯಲ್ಲಿ ಹೇಳಲಾಗಿದೆ. ಈ ಅಂಶವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>ಪರಿಭಾವಿತ ಅರಣ್ಯದ ಕುರಿತು ಕೇವಲ ಮಾಹಿತಿ ಸಂಗ್ರಹಿಸಿ ಅಂಕಿ– ಅಂಶಗಳ ಸಮೇತ ವರದಿ ನೀಡಲಾಗುವುದು. ಯಾರನ್ನೂ ಒಕ್ಕಲೆಬ್ಬಿಸುವುದಕ್ಕೆ ಮುಂದಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸ್ಪಷ್ಟಪಡಿಸಿದರು.</p>.<p>ಉಪವಿಭಾಗಾಧಿಕಾರಿ ವೀರೇಶ್ ಕುಮಾರ್, ತಹಶೀಲ್ದಾರ್ ಪ್ರದೀಪ್, ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-42-265856091</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>