<p>ಸಾಗರ: ‘ನಗರದಲ್ಲಿನ ಗುರುಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಂಘ ಆದ್ಯತೆ ನೀಡಲಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಹೇಳಿದರು.</p>.<p>ಇಲ್ಲಿನ ಗುರುಭವನದಲ್ಲಿ ಶನಿವಾರ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸ್ಥಳೀಯ ಶಾಖೆಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ‘ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದು ಶೀಘ್ರ ಕಾಮಗಾರಿ ಪೂರೈಸಲಾಗುವುದು’ ಎಂದರು.</p>.<p>‘ತಾಲ್ಲೂಕಿನ ನಾಲ್ಕು ಹೋಬಳಿ ಕೇಂದ್ರಗಳಲ್ಲಿ ಟೀಚರ್ಸ್ ಕಾರ್ನರ್ ತೆರೆಯಲಾಗುವುದು. ಈ ಕೇಂದ್ರಗಳ ಮೂಲಕ ಶಿಕ್ಷಕರಿಗೆ ಅಗತ್ಯವಿರುವ ಆನ್ಲೈನ್ ಸೇವೆಯನ್ನು ಕಲ್ಪಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಸಂಘದ ಉಪಾಧ್ಯಕ್ಷರಾದ ರಮೇಶ್ ಜೆ., ಚಂದ್ರಕಲಾ ಬಿ.ಆರ್., ಪ್ರಧಾನ ಕಾರ್ಯದರ್ಶಿ ಶಂಕರ್ ಜಿ.ಕೆ., ಕೋಶಾಧ್ಯಕ್ಷ ರಾಜಾಭಕ್ಷಿ ರಟ್ಟೆಹಳ್ಳಿ, ಸಹ ಕಾರ್ಯದರ್ಶಿಗಳಾದ ರಾಚಪ್ಪ ಎಂ.ಜೆ., ಮುಕ್ತ ಹೆಗಡೆ, ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಪ್ಪ ಅಳೂರು, ಸೋನಿಯಾ ರಾಣಿ ನರೋನಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-42-1291983302</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ನಗರದಲ್ಲಿನ ಗುರುಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸಂಘ ಆದ್ಯತೆ ನೀಡಲಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಾಲತೇಶಪ್ಪ ಹೇಳಿದರು.</p>.<p>ಇಲ್ಲಿನ ಗುರುಭವನದಲ್ಲಿ ಶನಿವಾರ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸ್ಥಳೀಯ ಶಾಖೆಯ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ ‘ಸರ್ಕಾರದಿಂದ ಹೆಚ್ಚಿನ ಅನುದಾನ ಪಡೆದು ಶೀಘ್ರ ಕಾಮಗಾರಿ ಪೂರೈಸಲಾಗುವುದು’ ಎಂದರು.</p>.<p>‘ತಾಲ್ಲೂಕಿನ ನಾಲ್ಕು ಹೋಬಳಿ ಕೇಂದ್ರಗಳಲ್ಲಿ ಟೀಚರ್ಸ್ ಕಾರ್ನರ್ ತೆರೆಯಲಾಗುವುದು. ಈ ಕೇಂದ್ರಗಳ ಮೂಲಕ ಶಿಕ್ಷಕರಿಗೆ ಅಗತ್ಯವಿರುವ ಆನ್ಲೈನ್ ಸೇವೆಯನ್ನು ಕಲ್ಪಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p>ಸಂಘದ ಉಪಾಧ್ಯಕ್ಷರಾದ ರಮೇಶ್ ಜೆ., ಚಂದ್ರಕಲಾ ಬಿ.ಆರ್., ಪ್ರಧಾನ ಕಾರ್ಯದರ್ಶಿ ಶಂಕರ್ ಜಿ.ಕೆ., ಕೋಶಾಧ್ಯಕ್ಷ ರಾಜಾಭಕ್ಷಿ ರಟ್ಟೆಹಳ್ಳಿ, ಸಹ ಕಾರ್ಯದರ್ಶಿಗಳಾದ ರಾಚಪ್ಪ ಎಂ.ಜೆ., ಮುಕ್ತ ಹೆಗಡೆ, ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಪ್ಪ ಅಳೂರು, ಸೋನಿಯಾ ರಾಣಿ ನರೋನಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-42-1291983302</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>