<p>ಸಾಗರ: ಕೇರಳ ರಾಜ್ಯದಲ್ಲಿ ಕಂಡುಬರುವ ದೇವಸ್ಥಾನಗಳ ಮಾದರಿಯಲ್ಲಿ ಇಲ್ಲಿನ ಇತಿಹಾಸ ಪ್ರಸಿದ್ಧ ಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.</p>.<p>ಇಲ್ಲಿನ ಮಹಾಗಣಪತಿ ರಥೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ದೇವಸ್ಥಾನದ ಕಲ್ಯಾಣ ಮಂಟಪ ನವೀಕರಣಗೊಳಿಸಿ ದೇವಸ್ಥಾನದ ಎದುರು ಸುಸಜ್ಜಿತ ಉದ್ಯಾನ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.</p>.<p>₹ 3.50 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಸಮುಚ್ಚಯ ನಿರ್ಮಾಣವಾಗುತ್ತಿದ್ದು, ಪ್ರಥಮ ಹಂತದಲ್ಲಿ ₹ 65 ಲಕ್ಷ ಮಂಜೂರಾಗಿದೆ. ಈಗಾಗಲೇ ಮಹಾದ್ವಾರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಾರ್ವಜನಿಕರ ಸಹಕಾರದಿಂದ ರಥೋತ್ಸವ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.</p>.<p>ಜಾತ್ರೆಯ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದರಿಂದ ಸ್ಥಳೀಯ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದಂತಾಗುತ್ತದೆ. ಮುಂದಿನ ವರ್ಷಗಳಲ್ಲಿ ಕಾರ್ಯಕ್ರಮ ನೀಡುವ ಕಲಾವಿದರಿಗೆ, ಸಾಂಸ್ಕೃತಿಕ ತಂಡಗಳಿಗೆ ಹೆಚ್ಚಿನ ಸಂಭಾವನೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರಂಗ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಮಧುಮಾಲತಿ, ಐ.ವಿ. ಹೆಗಡೆ, ಕೆ.ಸಿ. ನವೀನ್, ಗಣಪತಿ ಮಂಡಗಳಲೆ, ವಿ.ಟಿ. ಸ್ವಾಮಿ, ಶಿವಮೂರ್ತಿ, ಅರವಿಂದ ರಾಯ್ಕರ್, ತೋಯಜಾಕ್ಷಿ, ಈಶ್ವರ ಉಪ್ಪಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-641630639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಕೇರಳ ರಾಜ್ಯದಲ್ಲಿ ಕಂಡುಬರುವ ದೇವಸ್ಥಾನಗಳ ಮಾದರಿಯಲ್ಲಿ ಇಲ್ಲಿನ ಇತಿಹಾಸ ಪ್ರಸಿದ್ಧ ಗಣಪತಿ ದೇವಸ್ಥಾನದ ಪುನರ್ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.</p>.<p>ಇಲ್ಲಿನ ಮಹಾಗಣಪತಿ ರಥೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.</p>.<p>ದೇವಸ್ಥಾನದ ಕಲ್ಯಾಣ ಮಂಟಪ ನವೀಕರಣಗೊಳಿಸಿ ದೇವಸ್ಥಾನದ ಎದುರು ಸುಸಜ್ಜಿತ ಉದ್ಯಾನ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.</p>.<p>₹ 3.50 ಕೋಟಿ ವೆಚ್ಚದಲ್ಲಿ ದೇವಸ್ಥಾನದ ಸಮುಚ್ಚಯ ನಿರ್ಮಾಣವಾಗುತ್ತಿದ್ದು, ಪ್ರಥಮ ಹಂತದಲ್ಲಿ ₹ 65 ಲಕ್ಷ ಮಂಜೂರಾಗಿದೆ. ಈಗಾಗಲೇ ಮಹಾದ್ವಾರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಾರ್ವಜನಿಕರ ಸಹಕಾರದಿಂದ ರಥೋತ್ಸವ ಯಶಸ್ವಿಯಾಗಿ ನಡೆದಿದೆ ಎಂದು ಹೇಳಿದರು.</p>.<p>ಜಾತ್ರೆಯ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವುದರಿಂದ ಸ್ಥಳೀಯ ಕಲಾವಿದರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದಂತಾಗುತ್ತದೆ. ಮುಂದಿನ ವರ್ಷಗಳಲ್ಲಿ ಕಾರ್ಯಕ್ರಮ ನೀಡುವ ಕಲಾವಿದರಿಗೆ, ಸಾಂಸ್ಕೃತಿಕ ತಂಡಗಳಿಗೆ ಹೆಚ್ಚಿನ ಸಂಭಾವನೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದರು.</p>.<p>ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಟಿ.ವಿ.ಪಾಂಡುರಂಗ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಮಧುಮಾಲತಿ, ಐ.ವಿ. ಹೆಗಡೆ, ಕೆ.ಸಿ. ನವೀನ್, ಗಣಪತಿ ಮಂಡಗಳಲೆ, ವಿ.ಟಿ. ಸ್ವಾಮಿ, ಶಿವಮೂರ್ತಿ, ಅರವಿಂದ ರಾಯ್ಕರ್, ತೋಯಜಾಕ್ಷಿ, ಈಶ್ವರ ಉಪ್ಪಾರ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-42-641630639</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>