<p>ಸಾಗರ: ಮಲೆನಾಡು ಪ್ರದೇಶದಲ್ಲಿರುವ ಮುಳಗಡೆ ಸಂತ್ರಸ್ತರು, ಕಂದಾಯ, ಅರಣ್ಯ ಭೂಮಿ ಬಗರ್ ಹುಕುಂ ಸಾಗುವಳಿದಾರರನ್ನು ನ್ಯಾಯಾಲಯದ ಆದೇಶ ಅಂತಿಮಗೊಳ್ಳುವವರೆಗೂ ಒಕ್ಕಲೆಬ್ಬಿಸಬಾರದು ಎಂದು ಮಲೆನಾಡು ರೈತ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಒತ್ತಾಯಿಸಿದ್ದಾರೆ.</p>.<p>ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ರೈತರ ಅರ್ಜಿ ಅಂತಿಮವಾಗಿ ಇತ್ಯರ್ಥವಾಗುವವರೆಗೂ ಅವರನ್ನು ಒಕ್ಕಲೆಬ್ಬಿಸಬಾರದು ಎಂಬ ನ್ಯಾಯಾಲಯದ ನಿರ್ದೇಶನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಗೆ ತೂರುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದ್ದಾರೆ.</p>.<p>ಅರಣ್ಯ ಭೂಮಿ ಸಾಗುವಳಿದಾರರಿಗೆ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕು ನೀಡುವ ಸಂಬಂಧ ವಿಶೇಷ ತನಿಖಾ ತಂಡ ಪರಿಶೀಲನೆ ನಡೆಸುತ್ತಿದೆ. ಆದಾಗ್ಯೂ ಗೋಮಾಳ, ಹುಲ್ಲುಬನಿ, ಜಾಡಿ, ಪರಿಭಾವಿತ ಅರಣ್ಯ ಮತ್ತಿತರ ಹೆಸರಿನಲ್ಲಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದು ಖಂಡನೀಯ ಎಂದು ಅವರು ಹೇಳಿದರು.</p>.<p>ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರನ್ನು ಒಕ್ಕಲೆಬ್ಬಿಸುವುದನ್ನು ತಡೆಯುವ ಸಂಬಂಧ ಕೇವಲ ಹೇಳಿಕೆ ನೀಡಿದರೆ ಸಾಲದು. ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡುವ ಜೊತೆಗೆ ನ್ಯಾಯಾಲಯದ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ವಕೀಲ ಕುಮಾರಸ್ವಾಮಿ, ಪರಶುರಾಮಪ್ಪ ಬರೂರು, ಪರಶುರಾಮಪ್ಪ ಬಿಳಿಸಿರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-42-1240474386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಮಲೆನಾಡು ಪ್ರದೇಶದಲ್ಲಿರುವ ಮುಳಗಡೆ ಸಂತ್ರಸ್ತರು, ಕಂದಾಯ, ಅರಣ್ಯ ಭೂಮಿ ಬಗರ್ ಹುಕುಂ ಸಾಗುವಳಿದಾರರನ್ನು ನ್ಯಾಯಾಲಯದ ಆದೇಶ ಅಂತಿಮಗೊಳ್ಳುವವರೆಗೂ ಒಕ್ಕಲೆಬ್ಬಿಸಬಾರದು ಎಂದು ಮಲೆನಾಡು ರೈತ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಒತ್ತಾಯಿಸಿದ್ದಾರೆ.</p>.<p>ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿರುವ ರೈತರ ಅರ್ಜಿ ಅಂತಿಮವಾಗಿ ಇತ್ಯರ್ಥವಾಗುವವರೆಗೂ ಅವರನ್ನು ಒಕ್ಕಲೆಬ್ಬಿಸಬಾರದು ಎಂಬ ನ್ಯಾಯಾಲಯದ ನಿರ್ದೇಶನವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಗೆ ತೂರುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ದೂರಿದ್ದಾರೆ.</p>.<p>ಅರಣ್ಯ ಭೂಮಿ ಸಾಗುವಳಿದಾರರಿಗೆ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿಯ ಹಕ್ಕು ನೀಡುವ ಸಂಬಂಧ ವಿಶೇಷ ತನಿಖಾ ತಂಡ ಪರಿಶೀಲನೆ ನಡೆಸುತ್ತಿದೆ. ಆದಾಗ್ಯೂ ಗೋಮಾಳ, ಹುಲ್ಲುಬನಿ, ಜಾಡಿ, ಪರಿಭಾವಿತ ಅರಣ್ಯ ಮತ್ತಿತರ ಹೆಸರಿನಲ್ಲಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವುದು ಖಂಡನೀಯ ಎಂದು ಅವರು ಹೇಳಿದರು.</p>.<p>ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರೈತರನ್ನು ಒಕ್ಕಲೆಬ್ಬಿಸುವುದನ್ನು ತಡೆಯುವ ಸಂಬಂಧ ಕೇವಲ ಹೇಳಿಕೆ ನೀಡಿದರೆ ಸಾಲದು. ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡುವ ಜೊತೆಗೆ ನ್ಯಾಯಾಲಯದ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ವಕೀಲ ಕುಮಾರಸ್ವಾಮಿ, ಪರಶುರಾಮಪ್ಪ ಬರೂರು, ಪರಶುರಾಮಪ್ಪ ಬಿಳಿಸಿರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-42-1240474386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>