<p><strong>ಸಾಗರ: ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆ.3ರಿಂದ 9ದಿನಗಳ ಕಾಲ ನಡೆಯಲಿದ್ದು, ಪ್ರತಿ ದಿನವೂ ಅಪಾರ ಪ್ರಮಾಣದಲ್ಲಿ ಕಸ ಸಂಗ್ರಹವಾಗುವುದರಿಂದ ಸ್ವಚ್ಛತಾ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲು ನಗರಸಭೆ ಆಡಳಿತ ತೀರ್ಮಾನಿಸಿದೆ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ. </strong></p>.<p><strong> ಇಲ್ಲಿನ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ರೆ ಸಮಯದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿ ಹಾಗೂ ವಾಹನಗಳ ನೆರವು ಪಡೆಯಲಾಗುತ್ತಿದೆ ಎಂದರು.</strong></p>.<p><strong>ಪ್ರತಿ ದಿನ ಬೆಳಿಗ್ಗೆ 6 ಗಂಟೆಯೊಳಗೆ ಜಾತ್ರೆ ನಡೆಯುವ ಆವರಣದಲ್ಲಿನ ಕಸಗಳನ್ನು ವಿಲೇವಾರಿ ಮಾಡಲು ವಿಶೇಷ ತಂಡ ರಚಿಸಲಾಗಿದೆ. ರೋಗ ಹರಡದಂತೆ ತಡೆಯಲು ನಗರವ್ಯಾಪ್ತಿಯ ಚರಂಡಿಗಳಿಗೆ ಕ್ರಿಮಿನಾಶಕ ಸಿಂಪಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</strong></p>.<p><strong>ಜಾತ್ರೆ ವೇಳೆ ಸಾರ್ವಜನಿಕರಿಗೆ, ಮಳಿಗೆಗಳ ಮಾಲಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು. ಈ ಉದ್ದೇಶಕ್ಕಾಗಿ 10 ಟ್ಯಾಂಕರ್ ಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಸ್ವಚ್ಛತೆ ವಿಷಯದಲ್ಲಿ ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.</strong></p>.<p><strong>ನಗರಸಭೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಮದನ್, ಕಚೇರಿ ವ್ಯವಸ್ಥಾಪಕ ಬಾಲಚಂದ್ರ, ಅಭಿಯಂತರ ವಿಠ್ಠಲ ಹೆಗಡೆ, ರಾಜ್ ಕುಮಾರ್, ಸಚಿನ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆ.3ರಿಂದ 9ದಿನಗಳ ಕಾಲ ನಡೆಯಲಿದ್ದು, ಪ್ರತಿ ದಿನವೂ ಅಪಾರ ಪ್ರಮಾಣದಲ್ಲಿ ಕಸ ಸಂಗ್ರಹವಾಗುವುದರಿಂದ ಸ್ವಚ್ಛತಾ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲು ನಗರಸಭೆ ಆಡಳಿತ ತೀರ್ಮಾನಿಸಿದೆ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ. </strong></p>.<p><strong> ಇಲ್ಲಿನ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಸ್ವಚ್ಛತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ರೆ ಸಮಯದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿ ಹಾಗೂ ವಾಹನಗಳ ನೆರವು ಪಡೆಯಲಾಗುತ್ತಿದೆ ಎಂದರು.</strong></p>.<p><strong>ಪ್ರತಿ ದಿನ ಬೆಳಿಗ್ಗೆ 6 ಗಂಟೆಯೊಳಗೆ ಜಾತ್ರೆ ನಡೆಯುವ ಆವರಣದಲ್ಲಿನ ಕಸಗಳನ್ನು ವಿಲೇವಾರಿ ಮಾಡಲು ವಿಶೇಷ ತಂಡ ರಚಿಸಲಾಗಿದೆ. ರೋಗ ಹರಡದಂತೆ ತಡೆಯಲು ನಗರವ್ಯಾಪ್ತಿಯ ಚರಂಡಿಗಳಿಗೆ ಕ್ರಿಮಿನಾಶಕ ಸಿಂಪಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.</strong></p>.<p><strong>ಜಾತ್ರೆ ವೇಳೆ ಸಾರ್ವಜನಿಕರಿಗೆ, ಮಳಿಗೆಗಳ ಮಾಲಿಕರಿಗೆ, ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗುವುದು. ಈ ಉದ್ದೇಶಕ್ಕಾಗಿ 10 ಟ್ಯಾಂಕರ್ ಗಳನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಸ್ವಚ್ಛತೆ ವಿಷಯದಲ್ಲಿ ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.</strong></p>.<p><strong>ನಗರಸಭೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಮದನ್, ಕಚೇರಿ ವ್ಯವಸ್ಥಾಪಕ ಬಾಲಚಂದ್ರ, ಅಭಿಯಂತರ ವಿಠ್ಠಲ ಹೆಗಡೆ, ರಾಜ್ ಕುಮಾರ್, ಸಚಿನ್ ಇದ್ದರು.</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>