<p><strong>ಸಾಗರ</strong>: ದುಷ್ಟ ಶಿಕ್ಷಣೆ, ಶಿಷ್ಟ ರಕ್ಷಣೆ ಎಂಬ ತತ್ವವನ್ನು ಪಾಲಿಸಿದ ವನ್ನೀಯ ಮಹಾರಾಜ ಸ್ವಾಮೀಜಿ ಆದರ್ಶ ಅನುಕರಣೀಯವಾಗಿದೆ ಎಂದು ವನ್ನೀಯಕುಲ ಕ್ಷತ್ರೀಯ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಆರ್.ಶ್ರೀನಿವಾಸ್ ಹೇಳಿದರು.</p>.<p>ಇಲ್ಲಿನ ಜೆ.ಪಿ.ನಗರ ಬಡಾವಣೆಯಲ್ಲಿ ವನ್ನೀಯ ಕುಲ ಕ್ಷತ್ರೀಯ ಸಮಾಜದ ವತಿಯಿಂದ ಶುಕ್ರವಾರ ನಡೆದ ವನ್ನೀಯ ಮಹಾರಾಜ ಸ್ವಾಮೀಜಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವನ್ನೀಯಕುಲ ಕ್ಷತ್ರೀಯ ಸಮಾಜದವರು ಇದ್ದಾರೆ. ಅವರನ್ನು ತಿಗಳರ ಸಮಾಜದಡಿ ಗುರುತಿಸಿರುವ ಕ್ರಮ ಅವೈಜ್ಞಾನಿಕವಾಗಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದಿರುವ ಈ ಸಮುದಾಯವನ್ನು ಹಿಂದುಳಿದ ವರ್ಗ 2 (ಎ)ಗೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ವನ್ನೀಯಕುಲ ಕ್ಷತ್ರೀಯ ಸಮಾಜವನ್ನು ತಿಗಳರ ಸಮುದಾಯದಡಿ ಸೇರಿಸಿರುವುದರಿಂದ ಪ್ರಸ್ತುತ ಹಿಂದುಳಿದ ವರ್ಗ 3 (ಎ)ರಡಿ ಗುರುತಿಸಲಾಗುತ್ತಿದೆ. ಇದರಿಂದ ಶ್ರಮಿಕ ವರ್ಗಕ್ಕೆ ಸೇರಿರುವ ಈ ಸಮುದಾಯಕ್ಕೆ ತೀವ್ರ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಇದನ್ನು ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಪ್ರಮುಖರಾದ ಆನಂದ್, ವಿನಾಯಕ್, ಎಚ್.ಶೇಟ್, ಅರುಣ್, ಅಜಿತ್, ಉಷಾ, ಶಾಂತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ದುಷ್ಟ ಶಿಕ್ಷಣೆ, ಶಿಷ್ಟ ರಕ್ಷಣೆ ಎಂಬ ತತ್ವವನ್ನು ಪಾಲಿಸಿದ ವನ್ನೀಯ ಮಹಾರಾಜ ಸ್ವಾಮೀಜಿ ಆದರ್ಶ ಅನುಕರಣೀಯವಾಗಿದೆ ಎಂದು ವನ್ನೀಯಕುಲ ಕ್ಷತ್ರೀಯ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಆರ್.ಶ್ರೀನಿವಾಸ್ ಹೇಳಿದರು.</p>.<p>ಇಲ್ಲಿನ ಜೆ.ಪಿ.ನಗರ ಬಡಾವಣೆಯಲ್ಲಿ ವನ್ನೀಯ ಕುಲ ಕ್ಷತ್ರೀಯ ಸಮಾಜದ ವತಿಯಿಂದ ಶುಕ್ರವಾರ ನಡೆದ ವನ್ನೀಯ ಮಹಾರಾಜ ಸ್ವಾಮೀಜಿ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯದಲ್ಲಿ 30 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವನ್ನೀಯಕುಲ ಕ್ಷತ್ರೀಯ ಸಮಾಜದವರು ಇದ್ದಾರೆ. ಅವರನ್ನು ತಿಗಳರ ಸಮಾಜದಡಿ ಗುರುತಿಸಿರುವ ಕ್ರಮ ಅವೈಜ್ಞಾನಿಕವಾಗಿದೆ. ಸಾಮಾಜಿಕವಾಗಿ, ಆರ್ಥಿಕವಾಗಿ ತೀರಾ ಹಿಂದುಳಿದಿರುವ ಈ ಸಮುದಾಯವನ್ನು ಹಿಂದುಳಿದ ವರ್ಗ 2 (ಎ)ಗೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ವನ್ನೀಯಕುಲ ಕ್ಷತ್ರೀಯ ಸಮಾಜವನ್ನು ತಿಗಳರ ಸಮುದಾಯದಡಿ ಸೇರಿಸಿರುವುದರಿಂದ ಪ್ರಸ್ತುತ ಹಿಂದುಳಿದ ವರ್ಗ 3 (ಎ)ರಡಿ ಗುರುತಿಸಲಾಗುತ್ತಿದೆ. ಇದರಿಂದ ಶ್ರಮಿಕ ವರ್ಗಕ್ಕೆ ಸೇರಿರುವ ಈ ಸಮುದಾಯಕ್ಕೆ ತೀವ್ರ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರ ಇದನ್ನು ಸರಿಪಡಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಪ್ರಮುಖರಾದ ಆನಂದ್, ವಿನಾಯಕ್, ಎಚ್.ಶೇಟ್, ಅರುಣ್, ಅಜಿತ್, ಉಷಾ, ಶಾಂತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>