<p><strong>ಸಾಗರ:</strong> ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾಪ ವಿರೋಧಿಸಿ ನಗರದಲ್ಲಿ ಜನಪರ ಹೋರಾಟ ವೇದಿಕೆ ಆಶ್ರಯದಲ್ಲಿ ಗುರುವಾರ ಪಕ್ಷಾತೀತ ಪ್ರತಿಭಟನೆ ನಡೆಯಿತು.</p>.<p>ಶಿವಪ್ಪನಾಯಕ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ಸುಮಾರು ಅರ್ಧ ಗಂಟೆ ರಸ್ತೆ ತಡೆ ಚಳವಳಿ ನಡೆಸಿದರು. ನಂತರ ಆರಂಭವಾದ ಮೆರವಣಿಗೆಗೆ ಸಿಗಂದೂರು ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ರಾಮಪ್ಪ ಚಾಲನೆ ನೀಡಿದರು.</p>.<p>ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ‘ಏಸೂರು ಕೊಟ್ಟರೂ ಬೇಸೂರು ಕೊಡೆವು’, ‘ನಮ್ಮ ಭೂಮಿ, ನಮ್ಮ ಹಕ್ಕು’, ‘ಶುದ್ಧ ಗಾಳಿ, ಶುದ್ಧ ನೀರು ನಮ್ಮ ಹಕ್ಕು’, ‘ಪರಿಸರ ವಿರೋಧಿ ಸರ್ಕಾರದ ನೀತಿಗಳಿಗೆ ಧಿಕ್ಕಾರ’ ಎಂಬ ಘೋಷಣೆಗಳು ಮೊಳಗಿದವು.</p>.<p>ಗಾಂಧಿ ಮೈದಾನದಲ್ಲಿ ನಡೆದ ಬಹಿರಂಗ ಸಭೆಯನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸಿದರು. ‘ ಮಲೆನಾಡಿಗೆ ಮಾರಕವಾಗಿರುವ ಅಣು ವಿದ್ಯುತ್ ಸ್ಥಾವರ ಯೋಜನೆ ತಡೆಯಲು ನಿರಂತರವಾಗಿ ಹೋರಾಟ ಮಾಡುತ್ತೇನೆ. ನನ್ನ ಶಾಸಕತ್ವ ಹೋದರೂ ಅಣು ಸ್ಥಾವರ ಇಲ್ಲಿಗೆ ಬರಲು ಬಿಡುವುದಿಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಿಸಿದರು.</p>.<p>‘ಅಣು ಸ್ಥಾವರ ಬೇಡವೆಂದು ನಾನು ನಮ್ಮದೇ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಸಿದ್ದನಿದ್ದೇನೆ. ಅದೇ ರೀತಿ ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ವಿರೋಧ ಸೂಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಬೇಸೂರಿನಲ್ಲಿ ಸ್ಥಾವರ ಸ್ಥಾಪಿಸಲು ಅಗತ್ಯವಿರುವ ಭೂಮಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕು. ಅದೇ ರೀತಿ ಮಲೆನಾಡಿಗೆ ವಿನಾಶಕಾರಿ ಯೋಜನೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರವೂ ಭರವಸೆ ನೀಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಒತ್ತಾಯಿಸಿದರು.</p>.<p>‘ಸ್ಥಾವರ ಸ್ಥಾಪನೆಯಾದರೆ ಕೇವಲ ಬೇಸೂರು ಗ್ರಾಮದ 2 ಸಾವಿರ ಎಕರೆ ಭೂ ಪ್ರದೇಶವಷ್ಟೆ ಅಲ್ಲ, ವಿದ್ಯುತ್ ಸರಬರಾಜು ಜಾಲಕ್ಕಾಗಿ 20 ಸಾವಿರ ಎಕರೆಯಷ್ಟು ಭೂ ಪ್ರದೇಶವನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಇದರಲ್ಲಿ ಅರಣ್ಯ ಪ್ರದೇಶವೂ ಸೇರಿದ್ದು ಅರಣ್ಯ ಇಲಾಖೆ ಈಗಲೇ ತನ್ನ ವಿರೋಧ ದಾಖಲಿಸಬೇಕು’ ಎಂದು ಆಗ್ರಹಿಸಿದರು.</p>.<p>‘ನಾವೇ ಆಯ್ಕೆ ಮಾಡಿದ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿ ಇಟ್ಟು ಅಣು ಸ್ಥಾವರ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ. ಸರ್ಕಾರ ಸತ್ತ ಕುದುರೆ ಇದ್ದಂತೆ. ಅದನ್ನು ಬಡಿದು ಎಚ್ಚರಿಸುವ ಕೆಲಸವನ್ನು ಮಾಡುತ್ತಲೇ ಇರಬೇಕು. ಹೋರಾಟದ ಕೂಗು ದೆಹಲಿಯವರೆಗೂ ತಲುಪಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.</p>.<p>‘ನಮ್ಮ ಅಗತ್ಯಗಳನ್ನು ಪೂರೈಸಲು ವಿದ್ಯುತ್ ಬೇಕಿರುವುದೇನೋ ನಿಜ. ಆದರೆ ಈಗಾಗಲೇ ಎರಡು ಬಾರಿ ವಿದ್ಯುತ್ ಯೋಜನೆಗಾಗಿ ಮುಳುಗಡೆಯಾದ ಪ್ರದೇಶವನ್ನೇ ಮತ್ತೊಮ್ಮೆ ಅಣು ಸ್ಥಾವರಕ್ಕಾಗಿ ಆಯ್ಕೆ ಮಾಡುವುದು ಸರಿಯಲ್ಲ. ಸಂತ್ರಸ್ತರಾದವರೇ ಮತ್ತೆ ಎಷ್ಟು ಬಾರಿ ಸಂತ್ರಸ್ತರಾಗಬೇಕು’ ಎಂದು ಸಾಂಬಾರು ಮಂಡಳಿ ನಿರ್ದೇಶಕ ಪ್ರಸನ್ನ ಕೆರೆಕೈ ಪ್ರಶ್ನಿಸಿದರು.</p>.<p>‘ಅಣು ಸ್ಥಾವರಕ್ಕೆ ಸಂಬಂಧಿಸಿದ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸದೆ ಜಾರಿಗೊಳಿಸಲು ಅವಕಾಶವಿದೆ. ಈ ವಿಷಯ ಮಾಹಿತಿ ಹಕ್ಕಿನ ಕಾಯ್ದೆ ವ್ಯಾಪ್ತಿಯಿಂದ ಹೊರಗಿದೆ. ಹೀಗಾಗಿ ನಾವು ಹೆಚ್ಚು ಜಾಗೃತರಾಗಿರಬೇಕು. ಸ್ಥಾವರದಿಂದ ಹೊರ ಬರುವ ವಿಕಿರಣದ ದುಷ್ಪರಿಣಾಮಗಳು ವೈಜ್ಞಾನಿಕವಾಗಿ ಸಾಬೀತಾಗಿವೆ’ ಎಂದು ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ ಹೇಳಿದರು.</p>.<p>‘ಬೇಸೂರು ಗ್ರಾಮದಲ್ಲಿ ಖಾತೆ ಇಲ್ಲದ ಭೂಮಿಯ ಸಾಗುವಳಿದಾರರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಣು ಸ್ಥಾವರ ಇಲ್ಲಿಗೆ ಬಂದರೆ ಕೇವಲ ಬೇಸೂರು ಗ್ರಾಮಕ್ಕೆ ಮಾತ್ರವಲ್ಲ, ಇಡೀ ಸಾಗರ ತಾಲ್ಲೂಕಿಗೆ ಅದರ ಅಪಾಯ ತಟ್ಟಲಿದೆ’ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು.</p>.<p>ವಿವಿಧ ಸಂಘಟನೆಗಳ ಮುಖಂಡರಾದ ದಿನೇಶ್ ಶಿರವಾಳ, ತೀ.ನ.ಶ್ರೀನಿವಾಸ್, ಮಲ್ಲಿಕಾರ್ಜುನ ಹಕ್ರೆ, ಪೋಷಿಣಿ, ಸಿಗಂದೂರು ದೇವಾಲಯ ಸಮಿತಿ ಕಾರ್ಯದರ್ಶಿ ರವಿಕುಮಾರ್, ಧರ್ಮಗುರು ಅನ್ಸರ್ ಶಖಾಫಿ, ಶಿವಾನಂದ ಕುಗ್ವೆ ಮಾತನಾಡಿದರು.</p>.<p>ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಎಂ.ವಿ.ಪ್ರತಿಭಾ, ಕಲಸೆ ಚಂದ್ರಪ್ಪ, ದೇವೇಂದ್ರಪ್ಪ ಯಲಕುಂದ್ಲಿ, ಸುವರ್ಣ ಟೀಕಪ್ಪ, ವ.ಶಂ.ರಾಮಚಂದ್ರ ಭಟ್, ಬಂಗಾರಮ್ಮ ನೇರಲಗಿ, ರವಿಕುಮಾರ್ ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-42-1255380993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಾಲ್ಲೂಕಿನ ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ಪ್ರಸ್ತಾಪ ವಿರೋಧಿಸಿ ನಗರದಲ್ಲಿ ಜನಪರ ಹೋರಾಟ ವೇದಿಕೆ ಆಶ್ರಯದಲ್ಲಿ ಗುರುವಾರ ಪಕ್ಷಾತೀತ ಪ್ರತಿಭಟನೆ ನಡೆಯಿತು.</p>.<p>ಶಿವಪ್ಪನಾಯಕ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ಸುಮಾರು ಅರ್ಧ ಗಂಟೆ ರಸ್ತೆ ತಡೆ ಚಳವಳಿ ನಡೆಸಿದರು. ನಂತರ ಆರಂಭವಾದ ಮೆರವಣಿಗೆಗೆ ಸಿಗಂದೂರು ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ರಾಮಪ್ಪ ಚಾಲನೆ ನೀಡಿದರು.</p>.<p>ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ‘ಏಸೂರು ಕೊಟ್ಟರೂ ಬೇಸೂರು ಕೊಡೆವು’, ‘ನಮ್ಮ ಭೂಮಿ, ನಮ್ಮ ಹಕ್ಕು’, ‘ಶುದ್ಧ ಗಾಳಿ, ಶುದ್ಧ ನೀರು ನಮ್ಮ ಹಕ್ಕು’, ‘ಪರಿಸರ ವಿರೋಧಿ ಸರ್ಕಾರದ ನೀತಿಗಳಿಗೆ ಧಿಕ್ಕಾರ’ ಎಂಬ ಘೋಷಣೆಗಳು ಮೊಳಗಿದವು.</p>.<p>ಗಾಂಧಿ ಮೈದಾನದಲ್ಲಿ ನಡೆದ ಬಹಿರಂಗ ಸಭೆಯನ್ನು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸಿದರು. ‘ ಮಲೆನಾಡಿಗೆ ಮಾರಕವಾಗಿರುವ ಅಣು ವಿದ್ಯುತ್ ಸ್ಥಾವರ ಯೋಜನೆ ತಡೆಯಲು ನಿರಂತರವಾಗಿ ಹೋರಾಟ ಮಾಡುತ್ತೇನೆ. ನನ್ನ ಶಾಸಕತ್ವ ಹೋದರೂ ಅಣು ಸ್ಥಾವರ ಇಲ್ಲಿಗೆ ಬರಲು ಬಿಡುವುದಿಲ್ಲ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಿಸಿದರು.</p>.<p>‘ಅಣು ಸ್ಥಾವರ ಬೇಡವೆಂದು ನಾನು ನಮ್ಮದೇ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಸಿದ್ದನಿದ್ದೇನೆ. ಅದೇ ರೀತಿ ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಸಭೆಯಲ್ಲಿ ವಿರೋಧ ಸೂಚಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಬೇಸೂರಿನಲ್ಲಿ ಸ್ಥಾವರ ಸ್ಥಾಪಿಸಲು ಅಗತ್ಯವಿರುವ ಭೂಮಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಬೇಕು. ಅದೇ ರೀತಿ ಮಲೆನಾಡಿಗೆ ವಿನಾಶಕಾರಿ ಯೋಜನೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರವೂ ಭರವಸೆ ನೀಡಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಒತ್ತಾಯಿಸಿದರು.</p>.<p>‘ಸ್ಥಾವರ ಸ್ಥಾಪನೆಯಾದರೆ ಕೇವಲ ಬೇಸೂರು ಗ್ರಾಮದ 2 ಸಾವಿರ ಎಕರೆ ಭೂ ಪ್ರದೇಶವಷ್ಟೆ ಅಲ್ಲ, ವಿದ್ಯುತ್ ಸರಬರಾಜು ಜಾಲಕ್ಕಾಗಿ 20 ಸಾವಿರ ಎಕರೆಯಷ್ಟು ಭೂ ಪ್ರದೇಶವನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಇದರಲ್ಲಿ ಅರಣ್ಯ ಪ್ರದೇಶವೂ ಸೇರಿದ್ದು ಅರಣ್ಯ ಇಲಾಖೆ ಈಗಲೇ ತನ್ನ ವಿರೋಧ ದಾಖಲಿಸಬೇಕು’ ಎಂದು ಆಗ್ರಹಿಸಿದರು.</p>.<p>‘ನಾವೇ ಆಯ್ಕೆ ಮಾಡಿದ ಸರ್ಕಾರ ನಮ್ಮನ್ನು ಕತ್ತಲೆಯಲ್ಲಿ ಇಟ್ಟು ಅಣು ಸ್ಥಾವರ ಸ್ಥಾಪಿಸಲು ಮುಂದಾಗಿರುವುದು ಖಂಡನೀಯ. ಸರ್ಕಾರ ಸತ್ತ ಕುದುರೆ ಇದ್ದಂತೆ. ಅದನ್ನು ಬಡಿದು ಎಚ್ಚರಿಸುವ ಕೆಲಸವನ್ನು ಮಾಡುತ್ತಲೇ ಇರಬೇಕು. ಹೋರಾಟದ ಕೂಗು ದೆಹಲಿಯವರೆಗೂ ತಲುಪಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು.</p>.<p>‘ನಮ್ಮ ಅಗತ್ಯಗಳನ್ನು ಪೂರೈಸಲು ವಿದ್ಯುತ್ ಬೇಕಿರುವುದೇನೋ ನಿಜ. ಆದರೆ ಈಗಾಗಲೇ ಎರಡು ಬಾರಿ ವಿದ್ಯುತ್ ಯೋಜನೆಗಾಗಿ ಮುಳುಗಡೆಯಾದ ಪ್ರದೇಶವನ್ನೇ ಮತ್ತೊಮ್ಮೆ ಅಣು ಸ್ಥಾವರಕ್ಕಾಗಿ ಆಯ್ಕೆ ಮಾಡುವುದು ಸರಿಯಲ್ಲ. ಸಂತ್ರಸ್ತರಾದವರೇ ಮತ್ತೆ ಎಷ್ಟು ಬಾರಿ ಸಂತ್ರಸ್ತರಾಗಬೇಕು’ ಎಂದು ಸಾಂಬಾರು ಮಂಡಳಿ ನಿರ್ದೇಶಕ ಪ್ರಸನ್ನ ಕೆರೆಕೈ ಪ್ರಶ್ನಿಸಿದರು.</p>.<p>‘ಅಣು ಸ್ಥಾವರಕ್ಕೆ ಸಂಬಂಧಿಸಿದ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸದೆ ಜಾರಿಗೊಳಿಸಲು ಅವಕಾಶವಿದೆ. ಈ ವಿಷಯ ಮಾಹಿತಿ ಹಕ್ಕಿನ ಕಾಯ್ದೆ ವ್ಯಾಪ್ತಿಯಿಂದ ಹೊರಗಿದೆ. ಹೀಗಾಗಿ ನಾವು ಹೆಚ್ಚು ಜಾಗೃತರಾಗಿರಬೇಕು. ಸ್ಥಾವರದಿಂದ ಹೊರ ಬರುವ ವಿಕಿರಣದ ದುಷ್ಪರಿಣಾಮಗಳು ವೈಜ್ಞಾನಿಕವಾಗಿ ಸಾಬೀತಾಗಿವೆ’ ಎಂದು ಪರಿಸರ ಕಾರ್ಯಕರ್ತ ಅಖಿಲೇಶ್ ಚಿಪ್ಪಳಿ ಹೇಳಿದರು.</p>.<p>‘ಬೇಸೂರು ಗ್ರಾಮದಲ್ಲಿ ಖಾತೆ ಇಲ್ಲದ ಭೂಮಿಯ ಸಾಗುವಳಿದಾರರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಣು ಸ್ಥಾವರ ಇಲ್ಲಿಗೆ ಬಂದರೆ ಕೇವಲ ಬೇಸೂರು ಗ್ರಾಮಕ್ಕೆ ಮಾತ್ರವಲ್ಲ, ಇಡೀ ಸಾಗರ ತಾಲ್ಲೂಕಿಗೆ ಅದರ ಅಪಾಯ ತಟ್ಟಲಿದೆ’ ಎಂದು ಜನಪರ ಹೋರಾಟ ವೇದಿಕೆ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು.</p>.<p>ವಿವಿಧ ಸಂಘಟನೆಗಳ ಮುಖಂಡರಾದ ದಿನೇಶ್ ಶಿರವಾಳ, ತೀ.ನ.ಶ್ರೀನಿವಾಸ್, ಮಲ್ಲಿಕಾರ್ಜುನ ಹಕ್ರೆ, ಪೋಷಿಣಿ, ಸಿಗಂದೂರು ದೇವಾಲಯ ಸಮಿತಿ ಕಾರ್ಯದರ್ಶಿ ರವಿಕುಮಾರ್, ಧರ್ಮಗುರು ಅನ್ಸರ್ ಶಖಾಫಿ, ಶಿವಾನಂದ ಕುಗ್ವೆ ಮಾತನಾಡಿದರು.</p>.<p>ಪ್ರಮುಖರಾದ ಚೇತನ್ ರಾಜ್ ಕಣ್ಣೂರು, ಎಂ.ವಿ.ಪ್ರತಿಭಾ, ಕಲಸೆ ಚಂದ್ರಪ್ಪ, ದೇವೇಂದ್ರಪ್ಪ ಯಲಕುಂದ್ಲಿ, ಸುವರ್ಣ ಟೀಕಪ್ಪ, ವ.ಶಂ.ರಾಮಚಂದ್ರ ಭಟ್, ಬಂಗಾರಮ್ಮ ನೇರಲಗಿ, ರವಿಕುಮಾರ್ ಗೌಡ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-42-1255380993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>