<p>ಸಾಗರ: ‘ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕೆಲಸ ಅತ್ಯಂತ ಸವಾಲಿನದ್ದಾಗಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಯನ್ಸ್ ಸಂಸ್ಥೆ ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲ್ಗಳ ಸಂಗ್ರಹಣಾ ಘಟಕ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಪ್ಲಾಸ್ಟಿಕ್ ಬಾಟಲ್ಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಹೀಗೆ ಬಳಸಿದ ಬಾಟಲ್ಗಳನ್ನು ಎಲ್ಲೆಂದರಲ್ಲಿ ಎಸೆಯುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಇದನ್ನು ತಡೆಯಲು ಬಾಟಲ್ಗಳನ್ನು ಒಂದೆಡೆ ಸಂಗ್ರಹಿಸುವ ಘಟಕವನ್ನು ಲಯನ್ಸ್ ಸಂಸ್ಥೆ ವಿತರಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>‘ಇಲ್ಲಿನ ಲಯನ್ಸ್ ಸಂಸ್ಥೆ ಹಲವು ವರ್ಷಗಳಿಂದ ತೋರುತ್ತಿರುವ ಸಾಮಾಜಿಕ ಕಳಕಳಿ ಅನುಕರಣೀಯವಾದದ್ದು. ಕೇವಲ ತೋರಿಕೆ ಅಥವಾ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸದೆ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ’ ಎಂದು ಹೇಳಿದರು.</p>.<p>ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ, ಪ್ರಮುಖರಾದ ಅಶ್ವಿನಿಕುಮಾರ್, ಟಿ.ವಿ.ಪಾಂಡುರಂಗ, ಈ.ನಾಗರಾಜ್, ಅಶೋಕ್ ಬೇಳೂರು, ಸುರೇಶ್, ಗಣಪತಿ ಮಂಡಗಳಲೆ, ಮಧುಮಾಲತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-42-1665582944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ‘ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಕೆಲಸ ಅತ್ಯಂತ ಸವಾಲಿನದ್ದಾಗಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳೊಂದಿಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಲಯನ್ಸ್ ಸಂಸ್ಥೆ ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಾಟಲ್ಗಳ ಸಂಗ್ರಹಣಾ ಘಟಕ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಪ್ಲಾಸ್ಟಿಕ್ ಬಾಟಲ್ಗಳ ಬಳಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಹೀಗೆ ಬಳಸಿದ ಬಾಟಲ್ಗಳನ್ನು ಎಲ್ಲೆಂದರಲ್ಲಿ ಎಸೆಯುವ ಪ್ರವೃತ್ತಿಯೂ ಹೆಚ್ಚುತ್ತಿದೆ. ಇದನ್ನು ತಡೆಯಲು ಬಾಟಲ್ಗಳನ್ನು ಒಂದೆಡೆ ಸಂಗ್ರಹಿಸುವ ಘಟಕವನ್ನು ಲಯನ್ಸ್ ಸಂಸ್ಥೆ ವಿತರಿಸುತ್ತಿರುವುದು ಶ್ಲಾಘನೀಯ ಎಂದರು.</p>.<p>‘ಇಲ್ಲಿನ ಲಯನ್ಸ್ ಸಂಸ್ಥೆ ಹಲವು ವರ್ಷಗಳಿಂದ ತೋರುತ್ತಿರುವ ಸಾಮಾಜಿಕ ಕಳಕಳಿ ಅನುಕರಣೀಯವಾದದ್ದು. ಕೇವಲ ತೋರಿಕೆ ಅಥವಾ ಪ್ರಚಾರಕ್ಕಾಗಿ ಕಾರ್ಯಕ್ರಮಗಳನ್ನು ನಡೆಸದೆ ಜನೋಪಯೋಗಿ ಯೋಜನೆಗಳನ್ನು ಜಾರಿಗೆ ತರುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ’ ಎಂದು ಹೇಳಿದರು.</p>.<p>ಲಯನ್ಸ್ ಅಧ್ಯಕ್ಷ ಪ್ರಸನ್ನ ಟಿ, ಪ್ರಮುಖರಾದ ಅಶ್ವಿನಿಕುಮಾರ್, ಟಿ.ವಿ.ಪಾಂಡುರಂಗ, ಈ.ನಾಗರಾಜ್, ಅಶೋಕ್ ಬೇಳೂರು, ಸುರೇಶ್, ಗಣಪತಿ ಮಂಡಗಳಲೆ, ಮಧುಮಾಲತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260507-42-1665582944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>