<p><strong>ಸಾಗರ</strong>: ರಂಜಾನ್ ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದವರು ಗುರುವಾರ ಮೆಸ್ಕಾಂ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ರಂಜಾನ್ ತಿಂಗಳಿನಲ್ಲಿ ಉಪವಾಸದ ಜೊತೆಗೆ ಹಲವು ಧಾರ್ಮಿಕ ಆಚರಣೆಗಳಲ್ಲಿ ಮುಸ್ಲಿಂ ಸಮುದಾಯದವರು ಪಾಲ್ಗೊಳ್ಳುತ್ತಾರೆ. ಎಲ್ಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಇರುತ್ತದೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ಕಡಿತಗೊಳಿಸುವುದರಿಂದ ಧಾರ್ಮಿಕ ಆಚರಣೆಗಳಿಗೆ ತೊಂದರೆಯಾಗುತ್ತದೆ’ ಎಂದು ಮನವಿಯಲ್ಲಿ ಹೇಳಲಾಗಿದೆ.</p>.<p>ಪ್ರಮುಖರಾದ ಮಹ್ಮದ್ ಜಿಕ್ರಿಯಾ, ಸೈಯದ್ ತಾಹೀರ್, ಅಜ್ಮತ್ ಆಲಿಖಾನ್, ಸದ್ದಾಂ ದೊಡ್ಮನೆ, ಅಕ್ಬರ್ ಖಾನ್, ಅಸ್ಲಾಂ, ಇರ್ಫಾನ್ , ರಶೀದ್, ಮೋಸಿನ್ ಆಲಿಖಾನ್, ಇಲಿಯಾಸ್, ಆಶಿಕ್, ಇಮ್ರಾನ್ ಖಾನ್, ಜಾಫರ್ ಇದ್ದರು.</p>.<p>ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಸ್ಲಿದಲ್ ಅಮೀನ್ ಶಾಫಿ ಜಮಾತ್ ವತಿಯಿಂದ ಮೆಸ್ಕಾಂ ಕಚೇರಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು. ಅಬ್ದುಲ್ ಖಾದರ್, ಅನ್ವರ್ ಭಾಷಾ, ರಫೀಕ್, ಶರೀಫ್, ನಾಸಿರ್, ವಸೀಂ ದೊಡ್ಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ರಂಜಾನ್ ತಿಂಗಳಿನಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಮುಸ್ಲಿಂ ಸಮುದಾಯದವರು ಗುರುವಾರ ಮೆಸ್ಕಾಂ ಕಚೇರಿಗೆ ಮನವಿ ಸಲ್ಲಿಸಿದರು.</p>.<p>‘ರಂಜಾನ್ ತಿಂಗಳಿನಲ್ಲಿ ಉಪವಾಸದ ಜೊತೆಗೆ ಹಲವು ಧಾರ್ಮಿಕ ಆಚರಣೆಗಳಲ್ಲಿ ಮುಸ್ಲಿಂ ಸಮುದಾಯದವರು ಪಾಲ್ಗೊಳ್ಳುತ್ತಾರೆ. ಎಲ್ಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಇರುತ್ತದೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ಕಡಿತಗೊಳಿಸುವುದರಿಂದ ಧಾರ್ಮಿಕ ಆಚರಣೆಗಳಿಗೆ ತೊಂದರೆಯಾಗುತ್ತದೆ’ ಎಂದು ಮನವಿಯಲ್ಲಿ ಹೇಳಲಾಗಿದೆ.</p>.<p>ಪ್ರಮುಖರಾದ ಮಹ್ಮದ್ ಜಿಕ್ರಿಯಾ, ಸೈಯದ್ ತಾಹೀರ್, ಅಜ್ಮತ್ ಆಲಿಖಾನ್, ಸದ್ದಾಂ ದೊಡ್ಮನೆ, ಅಕ್ಬರ್ ಖಾನ್, ಅಸ್ಲಾಂ, ಇರ್ಫಾನ್ , ರಶೀದ್, ಮೋಸಿನ್ ಆಲಿಖಾನ್, ಇಲಿಯಾಸ್, ಆಶಿಕ್, ಇಮ್ರಾನ್ ಖಾನ್, ಜಾಫರ್ ಇದ್ದರು.</p>.<p>ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಸ್ಲಿದಲ್ ಅಮೀನ್ ಶಾಫಿ ಜಮಾತ್ ವತಿಯಿಂದ ಮೆಸ್ಕಾಂ ಕಚೇರಿಗೆ ಪ್ರತ್ಯೇಕ ಮನವಿ ಸಲ್ಲಿಸಲಾಯಿತು. ಅಬ್ದುಲ್ ಖಾದರ್, ಅನ್ವರ್ ಭಾಷಾ, ರಫೀಕ್, ಶರೀಫ್, ನಾಸಿರ್, ವಸೀಂ ದೊಡ್ಮನೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>