<p><strong>ಸಾಗರ:</strong> ನಗರಲ್ಲಿರುವ ತ್ಯಾಗರ್ತಿ ವೃತ್ತದಿಂದ ಎಲ್.ಬಿ. ಕಾಲೇಜು ವೃತ್ತದವರೆಗೆ ನಡೆಯುತ್ತಿರುವ ಹೆದ್ದಾರಿ ವಿಸ್ತರಣೆ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂಬ ಮಾತುಗಳು ಸಾರ್ವಜನಿಕರಿಮದ ಕೇಳಿಬರುತ್ತಿವೆ.</p>.<p>₹ 80 ಕೋಟಿ ವೆಚ್ಚದ ಈ ಕಾಮಗಾರಿಯ ಗುತ್ತಿಗೆ ಕರಾರಿನ ಪ್ರಕಾರ ಮುಂಬರುವ ಜೂನ್ ಅಂತ್ಯದೊಳಗೆ ಕಾಮಗಾರಿ ಮುಗಿಯಬೇಕಿದೆ. ಆದರೆ, ಈಗ ಕಾಮಗಾರಿ ನಡೆಯುತ್ತಿರುವ ವೇಗ ನೋಡಿದರೆ ಮಳೆಗಾಲದ ಮುನ್ನ ಶೇ 50ರಷ್ಟೂ ಕಾಮಗಾರಿ ಪೂರ್ಣಗೊಳ್ಳುವ ಬಗ್ಗೆ ಅನುಮಾನ ಮೂಡಿದೆ.</p>.<p>ರಸ್ತೆ ಮಧ್ಯದಿಂದ ಎರಡೂ ಬದಿಯಲ್ಲಿ 11.5 ಮೀಟರ್ ಮಾರ್ಜಿನ್ನೊಂದಿಗೆ ವಿಸ್ತರಣೆ ಕಾಮಗಾರಿ ನಡೆಯುವುದು ಎಂದು ನಿಶ್ಚಿತವಾಗಿದೆ. ಈ ಮಾರ್ಜಿನ್ ವ್ಯಾಪ್ತಿಯೊಳಗೆ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ ಚರಂಡಿ, ವಿದ್ಯುತ್ ಕಂಬ, ಫುಟ್ಪಾತ್ ಕೂಡ ಬರುವುದು ಎಂದು ಅಧಿಸೂಚನೆಯಲ್ಲಿ ನಮೂದಾಗಿದೆ.</p>.<p>ಆದರೆ, ಪ್ರಭಾವಿ ವ್ಯಕ್ತಿಗಳ ವಾಣಿಜ್ಯ ಸಂಕೀರ್ಣ, ಮಳಿಗೆಗಳು ಇರುವಲ್ಲಿ ಮಾರ್ಜಿನ್ ಬಿಡುವ ವಿಷಯದಲ್ಲಿತಾರತಮ್ಯ ನೀತಿ ಅನುಸರಿಸಲಾಗಿದೆ. ಕೆಲವಡೆ 2ರಿಂದ 2.5 ಅಡಿ ಅಗಲದ ಚರಂಡಿ ನಿರ್ಮಿಸಿದರೆ, ಮತ್ತೆ ಕೆಲವೆಡೆ 1ರಿಂದ 1.5 ಅಡಿ ಚರಂಡಿ ನಿರ್ಮಿಸಲಾಗಿದೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಫ್ರಾಂಕಿ ಲೋಬೊ ಹೇಳುತ್ತಾರೆ.</p>.<p>‘ಸುಪ್ರೀಂಕೋರ್ಟ್ನ ನಿರ್ದೇಶನದ ಪ್ರಕಾರ ರಸ್ತೆ ವಿಸ್ತರಣೆ ಕಾಮಗಾರಿಗೂ ಮುನ್ನ ಭೂಸ್ವಾಧೀನ ಪ್ರಕ್ರಿಯೆ ಮೂಲಕ ವಶಪಡಿಸಿಕೊಂಡ ಆಸ್ತಿಗಳ ಮಾಲೀಕರಿಗೆ ಪರಿಹಾರ ವಿತರಿಸಬೇಕು. ಆದರೆ, ಇಲ್ಲಿ ಈವರೆಗೂ ಪರಿಹಾರ ವಿತರಿಸದೆ ಲೋಪ ಎಸೆಗಲಾಗಿದೆ’ ಎನ್ನುತ್ತಾರೆ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್.</p>.<p>‘ಇಷ್ಟೆಲ್ಲ ಹಣ ವ್ಯಯಿಸಿ ಬರೀ ಚರಂಡಿ ವಿಸ್ತರಣೆ ನಿರ್ಮಿಸುವುದಾದರೆ ರಸ್ತೆ ವಿಸ್ತರಣೆಯ ಉದ್ದೇಶ ಹೇಗೆ ಈಡೇರುತ್ತದೆ. ಅಲ್ಲದೆ ಈಗ ಬೈಪಾಸ್ ನಿರ್ಮಿಸುವ ಮಾತು ಕೇಳಿ ಬರುತ್ತಿದ್ದು, ಬೈಪಾಸ್ ಮಾಡುವುದಾದರೆ ವಿಸ್ತರಣೆ ಕಾಮಗಾರಿ ಏಕೆ?’ ಎಂದು ಅವರು ಪ್ರಶ್ನಿಸುತ್ತಾರೆ.</p>.<p>ನ್ಯೂ ಬಿ.ಎಚ್.ರಸ್ತೆಯ ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಪ್ರಯಾಣಿಕರು ಸುಡು ಬಿಸಿಲಿನಲ್ಲಿ ರಸ್ತೆ ಮೇಲೆಯೇ ನಿಂತು ಬಸ್ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಫುಟ್ಪಾತ್, ಪಾರ್ಕಿಂಗ್ಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಯೋಜನೆ ವಿಸ್ತರಣೆ ಕಾಮಗಾರಿಯಲ್ಲಿ ಇಲ್ಲ ಎಂಬ ದೂರು ಕೇಳಿ ಬಂದಿದೆ.</p>.<p>ಕಾಮಗಾರಿಯ ಅಸಮರ್ಪಕತೆ ಕುರಿತು ಸಾರ್ವಜನಿಕರು ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಕಳೆದ ತಿಂಗಳು ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದಾಗ್ಯೂ ಕಾಮಗಾರಿಯ ಎಡವಟ್ಟುಗಳು ಮುಂದುವರಿದಿದೆ ಎಂಬುದು ಸಾರ್ವಜನಿಕರ ಅಳಲು.</p>.<p>‘ಅರಣ್ಯ ಇಲಾಖೆಯು ಸಕಾಲದಲ್ಲಿ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡದ ಕಾರಣ ಹೆದ್ದಾರಿ ವಿಸ್ತರಣೆ ಕಾಮಗಾರಿ ವಿಳಂಬವಾಗುತ್ತಿದೆ. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಒಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ನಗರಲ್ಲಿರುವ ತ್ಯಾಗರ್ತಿ ವೃತ್ತದಿಂದ ಎಲ್.ಬಿ. ಕಾಲೇಜು ವೃತ್ತದವರೆಗೆ ನಡೆಯುತ್ತಿರುವ ಹೆದ್ದಾರಿ ವಿಸ್ತರಣೆ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂಬ ಮಾತುಗಳು ಸಾರ್ವಜನಿಕರಿಮದ ಕೇಳಿಬರುತ್ತಿವೆ.</p>.<p>₹ 80 ಕೋಟಿ ವೆಚ್ಚದ ಈ ಕಾಮಗಾರಿಯ ಗುತ್ತಿಗೆ ಕರಾರಿನ ಪ್ರಕಾರ ಮುಂಬರುವ ಜೂನ್ ಅಂತ್ಯದೊಳಗೆ ಕಾಮಗಾರಿ ಮುಗಿಯಬೇಕಿದೆ. ಆದರೆ, ಈಗ ಕಾಮಗಾರಿ ನಡೆಯುತ್ತಿರುವ ವೇಗ ನೋಡಿದರೆ ಮಳೆಗಾಲದ ಮುನ್ನ ಶೇ 50ರಷ್ಟೂ ಕಾಮಗಾರಿ ಪೂರ್ಣಗೊಳ್ಳುವ ಬಗ್ಗೆ ಅನುಮಾನ ಮೂಡಿದೆ.</p>.<p>ರಸ್ತೆ ಮಧ್ಯದಿಂದ ಎರಡೂ ಬದಿಯಲ್ಲಿ 11.5 ಮೀಟರ್ ಮಾರ್ಜಿನ್ನೊಂದಿಗೆ ವಿಸ್ತರಣೆ ಕಾಮಗಾರಿ ನಡೆಯುವುದು ಎಂದು ನಿಶ್ಚಿತವಾಗಿದೆ. ಈ ಮಾರ್ಜಿನ್ ವ್ಯಾಪ್ತಿಯೊಳಗೆ ಹೆದ್ದಾರಿ ಪ್ರಾಧಿಕಾರ ನಿರ್ಮಿಸಿರುವ ಚರಂಡಿ, ವಿದ್ಯುತ್ ಕಂಬ, ಫುಟ್ಪಾತ್ ಕೂಡ ಬರುವುದು ಎಂದು ಅಧಿಸೂಚನೆಯಲ್ಲಿ ನಮೂದಾಗಿದೆ.</p>.<p>ಆದರೆ, ಪ್ರಭಾವಿ ವ್ಯಕ್ತಿಗಳ ವಾಣಿಜ್ಯ ಸಂಕೀರ್ಣ, ಮಳಿಗೆಗಳು ಇರುವಲ್ಲಿ ಮಾರ್ಜಿನ್ ಬಿಡುವ ವಿಷಯದಲ್ಲಿತಾರತಮ್ಯ ನೀತಿ ಅನುಸರಿಸಲಾಗಿದೆ. ಕೆಲವಡೆ 2ರಿಂದ 2.5 ಅಡಿ ಅಗಲದ ಚರಂಡಿ ನಿರ್ಮಿಸಿದರೆ, ಮತ್ತೆ ಕೆಲವೆಡೆ 1ರಿಂದ 1.5 ಅಡಿ ಚರಂಡಿ ನಿರ್ಮಿಸಲಾಗಿದೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ಫ್ರಾಂಕಿ ಲೋಬೊ ಹೇಳುತ್ತಾರೆ.</p>.<p>‘ಸುಪ್ರೀಂಕೋರ್ಟ್ನ ನಿರ್ದೇಶನದ ಪ್ರಕಾರ ರಸ್ತೆ ವಿಸ್ತರಣೆ ಕಾಮಗಾರಿಗೂ ಮುನ್ನ ಭೂಸ್ವಾಧೀನ ಪ್ರಕ್ರಿಯೆ ಮೂಲಕ ವಶಪಡಿಸಿಕೊಂಡ ಆಸ್ತಿಗಳ ಮಾಲೀಕರಿಗೆ ಪರಿಹಾರ ವಿತರಿಸಬೇಕು. ಆದರೆ, ಇಲ್ಲಿ ಈವರೆಗೂ ಪರಿಹಾರ ವಿತರಿಸದೆ ಲೋಪ ಎಸೆಗಲಾಗಿದೆ’ ಎನ್ನುತ್ತಾರೆ ಪುರಸಭೆ ಮಾಜಿ ಅಧ್ಯಕ್ಷ ತೀ.ನ.ಶ್ರೀನಿವಾಸ್.</p>.<p>‘ಇಷ್ಟೆಲ್ಲ ಹಣ ವ್ಯಯಿಸಿ ಬರೀ ಚರಂಡಿ ವಿಸ್ತರಣೆ ನಿರ್ಮಿಸುವುದಾದರೆ ರಸ್ತೆ ವಿಸ್ತರಣೆಯ ಉದ್ದೇಶ ಹೇಗೆ ಈಡೇರುತ್ತದೆ. ಅಲ್ಲದೆ ಈಗ ಬೈಪಾಸ್ ನಿರ್ಮಿಸುವ ಮಾತು ಕೇಳಿ ಬರುತ್ತಿದ್ದು, ಬೈಪಾಸ್ ಮಾಡುವುದಾದರೆ ವಿಸ್ತರಣೆ ಕಾಮಗಾರಿ ಏಕೆ?’ ಎಂದು ಅವರು ಪ್ರಶ್ನಿಸುತ್ತಾರೆ.</p>.<p>ನ್ಯೂ ಬಿ.ಎಚ್.ರಸ್ತೆಯ ಬಸ್ ನಿಲ್ದಾಣದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಪ್ರಯಾಣಿಕರು ಸುಡು ಬಿಸಿಲಿನಲ್ಲಿ ರಸ್ತೆ ಮೇಲೆಯೇ ನಿಂತು ಬಸ್ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಫುಟ್ಪಾತ್, ಪಾರ್ಕಿಂಗ್ಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಯೋಜನೆ ವಿಸ್ತರಣೆ ಕಾಮಗಾರಿಯಲ್ಲಿ ಇಲ್ಲ ಎಂಬ ದೂರು ಕೇಳಿ ಬಂದಿದೆ.</p>.<p>ಕಾಮಗಾರಿಯ ಅಸಮರ್ಪಕತೆ ಕುರಿತು ಸಾರ್ವಜನಿಕರು ಸಲ್ಲಿಸಿದ ದೂರಿನ ಆಧಾರದ ಮೇರೆಗೆ ಕಳೆದ ತಿಂಗಳು ಹೆದ್ದಾರಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದಾಗ್ಯೂ ಕಾಮಗಾರಿಯ ಎಡವಟ್ಟುಗಳು ಮುಂದುವರಿದಿದೆ ಎಂಬುದು ಸಾರ್ವಜನಿಕರ ಅಳಲು.</p>.<p>‘ಅರಣ್ಯ ಇಲಾಖೆಯು ಸಕಾಲದಲ್ಲಿ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡದ ಕಾರಣ ಹೆದ್ದಾರಿ ವಿಸ್ತರಣೆ ಕಾಮಗಾರಿ ವಿಳಂಬವಾಗುತ್ತಿದೆ. ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಒಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>